<p><strong>ಹಳೇಬೀಡು:</strong> ಮುಜರಾಯಿ ಇಲಾಖೆಗೆ ಸೇರಿದ ಸಮೀಪದ ಗಂಗೂರು ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಅರ್ಚಕ ರಂಗಸ್ವಾಮಿ (60) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಗ್ರಾಮದ ಕೆಲವು ಮಂದಿಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಯ ದೊರಕುವವರೆಗೆ ದೇವಾಲಯದ ಬಾಗಿಲು ತೆರೆಯಲು ಬಿಡುವುದಿಲ್ಲ’ ಎಂದು ರಂಗಸ್ವಾಮಿ ಕುಟುಂಬದವರು ಹಾಗೂ ಸಂಬಂಧಿಕರು ಪಟ್ಟು ಹಿಡಿದು ದೇವಾಲಯದ ಜಗುಲಿಯ ಮೇಲೆ ಕುಳಿತಿದ್ದರು. </p>.<p>ದೇವಾಲಯದ ಬಾಗಿಲು ತೆರೆದು ಮೃತದೇಹ ಹೊರ ತರಲು ಹಳೇಬೀಡು ಪೊಲೀಸರು ಮುಂದಾದಾಗ, ಕುಟುಂಬದವರು ಬಾಗಿಲು ತೆರೆಯಲು ಬಿಡಲಿಲ್ಲ. ಮಧ್ಯಾಹ್ನ 1 ಗಂಟೆಗೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ.ಮಮತಾ, ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>‘ದೇವಾಲಯದಲ್ಲಿ ಸಾವಿನ ಘಟನೆ ನಡೆಯಬಾರದಾಗಿತ್ತು. ದೇವಾಲಯ ಮುಜಾರಾಯಿ ಇಲಾಖೆಗೆ ಸೇರಿದೆ. ಹೆಚ್ಚು ಸಮಯ ದೇವಾಲಯದಲ್ಲಿ ಮೃತದೇಹ ಬಿಡುವಂತಿಲ್ಲ. ದೇವಾಲಯ ಬಾಗಿಲು ತೆಗೆಯಲು ಅವಕಾಶ ಕೊಡಿ’ ಎಂದು ತಹಶೀಲ್ದಾರ್ ತಿಳಿಸಿದರು.</p>.<p>‘ನಮಗೆ ನ್ಯಾಯಬೇಕು. ಕಿರುಕುಳ ನೀಡಿದವರಿಗೆ ಶಿಕ್ಷೆ ಆಗಬೇಕು’ ಎಂದು ಮೃತರ ಕುಟುಂಬದವರು ಪಟ್ಟು ಹಿಡಿದರು. ‘ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಹಳೇಬೀಡು ಪೊಲೀಸರಿಂದ ಕುಟುಂಬಕ್ಕೆ ಭದ್ರತೆ ನೀಡುತ್ತೇವೆ’ ಎಂದು ಮಮತಾ ತಿಳಿಸಿದರು.</p>.<p>ಆದರೂ ದುಃಖದಲ್ಲಿದ್ದ ಕುಟುಂಬದವರು ದೇವಾಲಯದ ಬಾಗಿಲು ತೆಗೆಯಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಸುದೀರ್ಘ ಮಾತುಕತೆ ನಡೆಸಿದ ನಂತರ ಬಾಗಿಲು ತೆಗೆಯಲು ಕುಟುಂಬದವರು ಅವಕಾಶ ನೀಡಿದರು. ಬಾಗಿಲಿಗೆ ಒಳಗಿನಿಂದ ಬೋಲ್ಟ್ ಹಾಕಿದ್ದರಿಂದ ಬಾಗಿಲು ತೆಗೆಯಲು ಪೊಲೀಸರು ಹರಸಾಹಸ ಪಟ್ಟರು.</p>.<p>ನಂತರ ಮೃತದೇಹ ಹೊರತೆಗೆದು ಹಳೇಬೀಡು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಸಬ್ ಇನ್ಸ್ಪೆಕ್ಟರ್ಗಳಾದ ಸಿದ್ಧಲಿಂಗ ಬಾನಸೆ ಹಾಗೂ ಯೋಗಾಂಬರಂ ಬಂದೋಬಸ್ತ್ ಮಾಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳೇಬೀಡು:</strong> ಮುಜರಾಯಿ ಇಲಾಖೆಗೆ ಸೇರಿದ ಸಮೀಪದ ಗಂಗೂರು ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಅರ್ಚಕ ರಂಗಸ್ವಾಮಿ (60) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಗ್ರಾಮದ ಕೆಲವು ಮಂದಿಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಯ ದೊರಕುವವರೆಗೆ ದೇವಾಲಯದ ಬಾಗಿಲು ತೆರೆಯಲು ಬಿಡುವುದಿಲ್ಲ’ ಎಂದು ರಂಗಸ್ವಾಮಿ ಕುಟುಂಬದವರು ಹಾಗೂ ಸಂಬಂಧಿಕರು ಪಟ್ಟು ಹಿಡಿದು ದೇವಾಲಯದ ಜಗುಲಿಯ ಮೇಲೆ ಕುಳಿತಿದ್ದರು. </p>.<p>ದೇವಾಲಯದ ಬಾಗಿಲು ತೆರೆದು ಮೃತದೇಹ ಹೊರ ತರಲು ಹಳೇಬೀಡು ಪೊಲೀಸರು ಮುಂದಾದಾಗ, ಕುಟುಂಬದವರು ಬಾಗಿಲು ತೆರೆಯಲು ಬಿಡಲಿಲ್ಲ. ಮಧ್ಯಾಹ್ನ 1 ಗಂಟೆಗೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ.ಮಮತಾ, ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>‘ದೇವಾಲಯದಲ್ಲಿ ಸಾವಿನ ಘಟನೆ ನಡೆಯಬಾರದಾಗಿತ್ತು. ದೇವಾಲಯ ಮುಜಾರಾಯಿ ಇಲಾಖೆಗೆ ಸೇರಿದೆ. ಹೆಚ್ಚು ಸಮಯ ದೇವಾಲಯದಲ್ಲಿ ಮೃತದೇಹ ಬಿಡುವಂತಿಲ್ಲ. ದೇವಾಲಯ ಬಾಗಿಲು ತೆಗೆಯಲು ಅವಕಾಶ ಕೊಡಿ’ ಎಂದು ತಹಶೀಲ್ದಾರ್ ತಿಳಿಸಿದರು.</p>.<p>‘ನಮಗೆ ನ್ಯಾಯಬೇಕು. ಕಿರುಕುಳ ನೀಡಿದವರಿಗೆ ಶಿಕ್ಷೆ ಆಗಬೇಕು’ ಎಂದು ಮೃತರ ಕುಟುಂಬದವರು ಪಟ್ಟು ಹಿಡಿದರು. ‘ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಹಳೇಬೀಡು ಪೊಲೀಸರಿಂದ ಕುಟುಂಬಕ್ಕೆ ಭದ್ರತೆ ನೀಡುತ್ತೇವೆ’ ಎಂದು ಮಮತಾ ತಿಳಿಸಿದರು.</p>.<p>ಆದರೂ ದುಃಖದಲ್ಲಿದ್ದ ಕುಟುಂಬದವರು ದೇವಾಲಯದ ಬಾಗಿಲು ತೆಗೆಯಲು ಬಿಡುವುದಿಲ್ಲ ಎಂದು ಹಠ ಹಿಡಿದರು. ಸುದೀರ್ಘ ಮಾತುಕತೆ ನಡೆಸಿದ ನಂತರ ಬಾಗಿಲು ತೆಗೆಯಲು ಕುಟುಂಬದವರು ಅವಕಾಶ ನೀಡಿದರು. ಬಾಗಿಲಿಗೆ ಒಳಗಿನಿಂದ ಬೋಲ್ಟ್ ಹಾಕಿದ್ದರಿಂದ ಬಾಗಿಲು ತೆಗೆಯಲು ಪೊಲೀಸರು ಹರಸಾಹಸ ಪಟ್ಟರು.</p>.<p>ನಂತರ ಮೃತದೇಹ ಹೊರತೆಗೆದು ಹಳೇಬೀಡು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಸಬ್ ಇನ್ಸ್ಪೆಕ್ಟರ್ಗಳಾದ ಸಿದ್ಧಲಿಂಗ ಬಾನಸೆ ಹಾಗೂ ಯೋಗಾಂಬರಂ ಬಂದೋಬಸ್ತ್ ಮಾಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>