ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆ ಶಿಕ್ಷಕರಿಗೆ ಸೇವಾ ಭದ್ರತೆ ಅಗತ್ಯ: ಪಿ.ಜಿ.ಆರ್.ಸಿಂಧ್ಯ

‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್‌.ಸಿಂಧ್ಯ
Last Updated 26 ಸೆಪ್ಟೆಂಬರ್ 2021, 16:52 IST
ಅಕ್ಷರ ಗಾತ್ರ

ಹಾಸನ: ಕೋವಿಡ್‌ನಿಂದಾಗಿಶಾಲೆಗಳನ್ನು ಬಂದ್‌ ಮಾಡಿದ ಕಾರಣ ಖಾಸಗಿ ಶಾಲೆಗಳ ಶಿಕ್ಷಕರ ಬದುಕು ದುಸ್ತರವಾಗಿದ್ದು, ಖಾಸಗಿ ಶಾಲೆ ಶಿಕ್ಷಕರಿಗೆ ಸೇವಾ ಭದ್ರತೆ ನೀಡುವ ಅಗತ್ಯವಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ರಾಜ್ಯ ಖಾಸಗಿ ಶಿಕ್ಷಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಸಂಬಂಧಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದರು.

ಸ್ಪರ್ಧಾತ್ಮಕ ದಿನಗಳಲ್ಲಿ ನಿರಂತರವಾಗಿ ಶಿಕ್ಷಕರು ಪರಿಶ್ರಮ ಹಾಕಬೇಕು. ಕೊರೊನಾದಿಂದಶಾಲೆಗಳಿಂದ ದೂರ ಉಳಿದಿರುವ ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಶಾಲೆಯತ್ತ ಕರೆತರುವ ಕೆಲಸಸರ್ಕಾರ ಮಾಡಬೇಕಾಗಿದೆ ಎಂದರು.

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಮಾತನಾಡಿ, ಪ್ರಪಂಚದ ಜ್ವಲಂತ ಸಮಸ್ಯೆಗಳಿಗೆ ಒಳ್ಳೆಯ ವ್ಯಕ್ತಿತ್ವದ ಮನುಷ್ಯನ ನಿರ್ಮಾಣವೇ ಸೂಕ್ತ ಪರಿಹಾರ. ಇದರ ಜವಾಬ್ದಾರಿ ಶಿಕ್ಷಕರ ಮೇಲಿದೆ.ಪ್ರತಿಯೊಬ್ಬ ಶಿಕ್ಷಕ ಉದ್ಯಮಿ ನಾರಾಯಣ ಮೂರ್ತಿ, ಹೋರಾಟಗಾರ ಅಣ್ಣ ಹಜಾರೆ ಅವರಂತಹವ್ಯಕ್ತಿಗಳನ್ನು ನಿರ್ಮಾಣ ಮಾಡಿದರೆ ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ದೇಶ ಕಟ್ಟುವುದು ಎಂದರೆ ಕೇವಲ ರೈಲ್ವೆ ಮೇಲ್ಸೇತುವೆ, ಡ್ಯಾಂ, ಕಟ್ಟಡ ಕಟ್ಟುವುದಷ್ಟೇ ಅಲ್ಲ. ಮನುಷ್ಯರ ನಿರ್ಮಾಣವೂ ಬಹಳ ಮುಖ್ಯ. ಶಿಕ್ಷಕ ವೃತ್ತಿ ಲಾಭದಾಯಕ ವೃತ್ತಿಯಲ್ಲ ಹಾಗೂ ಯಾವುದೇ ವೃತ್ತಿಗೂಹೋಲಿಕೆ ಮಾಡುವ ವೃತ್ತಿಯೂ ಅಲ್ಲ. ಒಬ್ಬ ನಾಯಕ ಮತ್ತೊಬ್ಬ ನಾಯಕನನ್ನು ಸೃಷ್ಟಿಸಬೇಕೆ ಹೊರತುಹಿಂಬಾಲಕರನ್ನಲ್ಲ. ಶ್ರಮಕ್ಕೆ ತಕ್ಕ ಫಲ ಸಿಗಬೇಕು. ಅದನ್ನ ಸಾಧಿಸಲು ಎಲ್ಲರಿಗೂ ಸಮಾನ ಅವಕಾಶಇರಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಯ 35 ಮಂದಿ ಖಾಸಗಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT