<p>ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ₹10 ಸಾವಿರಹೆಚ್ಚಿಸಿರುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹೇಮಾವತಿಪ್ರತಿಮೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕಗಳನ್ನು ಸರ್ಕಾರಗಳು ಮನಬಂದಂತೆ ಹೆಚ್ಚಿಸುತ್ತಿರುವುದು ಸರಿಯಲ್ಲ. ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ದಿಢೀರ್ ಹತ್ತು ಸಾವಿರ ರೂಪಾಯಿ ಹೆಚ್ಚಿಸಿರುವುದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಕೋವಿಡ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಬಿಕ್ಕಟ್ಟಿನ ಜತೆಗೆ ಲಕ್ಷಾಂತರ ವಿದ್ಯಾರ್ಥಿಗಳಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿದೆ. ಈ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಏಕಾಏಕಿ ಶುಲ್ಕ ಏರಿಕೆ ನಿರ್ಧಾರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಎಂದು ಆರೋಪಿಸಿದರು.</p>.<p>ಪದವಿ ಕೋರ್ಸ್ಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿ ಸಹ ಗಣನೀಯವಾಗಿಏರಿಕೆ ಆಗಿದೆ. ಆದ್ದರಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದಅವಶ್ಯಕತೆಇದೆ ಎಂದು ಅಭಿಪ್ರಾಪಟ್ಟರು.</p>.<p>ಸರ್ಕಾರವು ಹೆಚ್ಚುವರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿ, ಹೆಚ್ಚುವರಿ ಬೋಧಕರ ನೇಮಕಾತಿ, ಮೂಲಸೌಕರ್ಯ, ಗ್ರಂಥಾಲಯ, ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು. ಇದರ ಬದಲಾಗಿ ಶುಲ್ಕ ಏರಿಕೆ ಮಾಡಿರುವುದು ಕಡು ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತೊಂದರೆ ಆಗಲಿದೆ ಎಂದು ದೂರಿದರು.</p>.<p>ಕೂಡಲೇ ಸರ್ಕಾರ ಈ ಶುಲ್ಕ ಏರಿಕೆ ವಾಪಸ್ ಪಡೆಯಬೇಕು. ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒ ಜಿಲ್ಲಾ ಸಮಿತಿಯ ಸಹ ಸಂಚಾಲಕಿ ಚೈತ್, ಸದಸ್ಯರಾದ ಸುಶ್ಮಿತಾ, ದೀಕ್ಷಾ, ಚಿರಂತ್, ಇಂಪನ, ವಿದ್ಯಾರ್ಥಿಗಳಾದ ಕುಶ್ಮಿತಾ, ಮದನ್, ಅಜಯ್, ಚೇತನ್, ಚೈತ್ರಾ, ಅನಿಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ₹10 ಸಾವಿರಹೆಚ್ಚಿಸಿರುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹೇಮಾವತಿಪ್ರತಿಮೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕಗಳನ್ನು ಸರ್ಕಾರಗಳು ಮನಬಂದಂತೆ ಹೆಚ್ಚಿಸುತ್ತಿರುವುದು ಸರಿಯಲ್ಲ. ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ದಿಢೀರ್ ಹತ್ತು ಸಾವಿರ ರೂಪಾಯಿ ಹೆಚ್ಚಿಸಿರುವುದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಕೋವಿಡ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಬಿಕ್ಕಟ್ಟಿನ ಜತೆಗೆ ಲಕ್ಷಾಂತರ ವಿದ್ಯಾರ್ಥಿಗಳಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿದೆ. ಈ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಏಕಾಏಕಿ ಶುಲ್ಕ ಏರಿಕೆ ನಿರ್ಧಾರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಎಂದು ಆರೋಪಿಸಿದರು.</p>.<p>ಪದವಿ ಕೋರ್ಸ್ಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿ ಸಹ ಗಣನೀಯವಾಗಿಏರಿಕೆ ಆಗಿದೆ. ಆದ್ದರಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದಅವಶ್ಯಕತೆಇದೆ ಎಂದು ಅಭಿಪ್ರಾಪಟ್ಟರು.</p>.<p>ಸರ್ಕಾರವು ಹೆಚ್ಚುವರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿ, ಹೆಚ್ಚುವರಿ ಬೋಧಕರ ನೇಮಕಾತಿ, ಮೂಲಸೌಕರ್ಯ, ಗ್ರಂಥಾಲಯ, ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು. ಇದರ ಬದಲಾಗಿ ಶುಲ್ಕ ಏರಿಕೆ ಮಾಡಿರುವುದು ಕಡು ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತೊಂದರೆ ಆಗಲಿದೆ ಎಂದು ದೂರಿದರು.</p>.<p>ಕೂಡಲೇ ಸರ್ಕಾರ ಈ ಶುಲ್ಕ ಏರಿಕೆ ವಾಪಸ್ ಪಡೆಯಬೇಕು. ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಎಐಡಿಎಸ್ಒ ಜಿಲ್ಲಾ ಸಮಿತಿಯ ಸಹ ಸಂಚಾಲಕಿ ಚೈತ್, ಸದಸ್ಯರಾದ ಸುಶ್ಮಿತಾ, ದೀಕ್ಷಾ, ಚಿರಂತ್, ಇಂಪನ, ವಿದ್ಯಾರ್ಥಿಗಳಾದ ಕುಶ್ಮಿತಾ, ಮದನ್, ಅಜಯ್, ಚೇತನ್, ಚೈತ್ರಾ, ಅನಿಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>