<p><strong>ಹಾಸನ: </strong>ನಗರದ ಎನ್.ಆರ್. ವೃತ್ತದಲ್ಲಿ ಮಂಗಳವಾರ ಲಾರಿ ಡಿಕ್ಕಿಯಾಗಿ ವಕೀಲ ನಜೀರ್ ಅಹಮ್ಮದ್ (65) ಮೃತಪಟ್ಟ ಹಿನ್ನೆಲೆಯಲ್ಲಿ ವಕೀಲರು ರಸ್ತೆತಡೆ ನಡೆಸಿ, ಸಂಚಾರಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು.</p>.<p>ನಜೀರ್ ಅಹಮ್ಮದ್ ಅವರು ಬೈಕ್ನಲ್ಲಿ ನ್ಯಾಯಾಲಯಕ್ಕೆ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಲಾರಿ ಚಕ್ರ ಹರಿದು, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾದರು.</p>.<p>ಅಪಘಾತಕ್ಕೆ ಸಂಚಾರಿ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ ನೇತೃತ್ವದಲ್ಲಿ ವಕೀಲರು ನ್ಯಾಯಾಲಯ ಕಲಾಪಗಳಿಂದ ಹೊರಗುಳಿದು ಎನ್.ಆರ್. ವೃತ್ತದಲ್ಲಿ ರಸ್ತೆತಡೆ ನಡೆಸಿದರು. ಈ ವೇಳೆ ವಕೀಲರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ವೃತ್ತ ನಿರೀಕ್ಷಕ ರೇಣುಕಾ ಪ್ರಸಾದ್ ಅವರು ಏರು ಧ್ವನಿಯಲ್ಲಿ ಮಾತನಾಡಿದಾಗ ಸಿಟ್ಟಿಗೆದ್ದ ವಕೀಲರು, ಸಿಪಿಐ ವಿರುದ್ಧ ಘೋಷಣೆ ಕೂಗಿದರು.</p>.<p>‘ನಗರದ ಹೃದಯಭಾಗ ಎನ್.ಆರ್. ವೃತ್ತದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಬದಲಿಗೆ ಸಂಚಾರಿ ಪೊಲೀಸರು ನಗರದಾದ್ಯಂತ ವಾಹನಗಳ ದಾಖಲೆ ತಪಾಸಣೆ ಹೆಸರಿನಲ್ಲಿ ತಮ್ಮ ಬೊಕ್ಕಸ ತುಂಬಿಸಿ ಕೊಳ್ಳುತ್ತಿದ್ದಾರೆ. ಭಾರಿ ವಾಹನಗಳು ನಗರ ಪ್ರವೇಶ ನಿಷೇಧಿಸಬೇಕು. ಈ ಹಿಂದೆಯೂ ಇದೇ ಸ್ಧಳದಲ್ಲಿ ಅನೇಕ ಅಪಘಾತಗಳ ಸಂಭವಿಸಿದ್ದು, ಪೊಲೀಸ್ ಇಲಾಖೆ ವಾಹನ ದಟ್ಟಣೆ ನಿಯಂತ್ರಿಸುವಲ್ಲಿ ವಿಫಲವಾಗಿದೆ’ ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಸ್ಥಳಕ್ಕೆ ಬಂದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ವಕೀಲರ ಜೊತೆಗೆ ಮಾತುಕತೆ ನಡೆಸಿದರಾದರೂ ಪ್ರಯೋಜನವಾಗಲಿಲ್ಲ. ಬಳಿಕ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಆರ್.ಶ್ರೀನಿವಾಸ್ಗೌಡ ಭೇಟಿ ನೀಡಿ, ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಮಾಡಿದ ಮನವಿಗೆ ವಕೀಲರು ಸ್ಪಂದಿಸಿ, ಪ್ರತಿಭಟನೆ ಹಿಂತೆಗೆದುಕೊಂಡರು.</p>.<p>ನಗರದಲ್ಲಿ ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ವಕೀಲರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ, ಮಾಜಿ ಅಧ್ಯಕ್ಷ ಜೆ.ಪಿ. ಶೇಖರ್, ದೇವರಾಜೇಗೌಡ, ವಕೀಲರ ಸಂಘದ ಜಿಲ್ಲಾ ಸಂಚಾಲಕ ಎಚ್.ಆರ್. ರಂಗನಾಥ್, ಉಪಾಧ್ಯಕ್ಷ ಕೆ.ಕೆ. ಮೋಹನ್ ಕುಮಾರ್, ಮಾಜಿ ಕಾರ್ಯದರ್ಶಿ ಪ್ರಸನ್ನ ದಾಸರಕೊಪ್ಪಲು, ಶ್ರೀನಿವಾಸ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ನಗರದ ಎನ್.ಆರ್. ವೃತ್ತದಲ್ಲಿ ಮಂಗಳವಾರ ಲಾರಿ ಡಿಕ್ಕಿಯಾಗಿ ವಕೀಲ ನಜೀರ್ ಅಹಮ್ಮದ್ (65) ಮೃತಪಟ್ಟ ಹಿನ್ನೆಲೆಯಲ್ಲಿ ವಕೀಲರು ರಸ್ತೆತಡೆ ನಡೆಸಿ, ಸಂಚಾರಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು.</p>.<p>ನಜೀರ್ ಅಹಮ್ಮದ್ ಅವರು ಬೈಕ್ನಲ್ಲಿ ನ್ಯಾಯಾಲಯಕ್ಕೆ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಲಾರಿ ಚಕ್ರ ಹರಿದು, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾದರು.</p>.<p>ಅಪಘಾತಕ್ಕೆ ಸಂಚಾರಿ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ ನೇತೃತ್ವದಲ್ಲಿ ವಕೀಲರು ನ್ಯಾಯಾಲಯ ಕಲಾಪಗಳಿಂದ ಹೊರಗುಳಿದು ಎನ್.ಆರ್. ವೃತ್ತದಲ್ಲಿ ರಸ್ತೆತಡೆ ನಡೆಸಿದರು. ಈ ವೇಳೆ ವಕೀಲರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ವೃತ್ತ ನಿರೀಕ್ಷಕ ರೇಣುಕಾ ಪ್ರಸಾದ್ ಅವರು ಏರು ಧ್ವನಿಯಲ್ಲಿ ಮಾತನಾಡಿದಾಗ ಸಿಟ್ಟಿಗೆದ್ದ ವಕೀಲರು, ಸಿಪಿಐ ವಿರುದ್ಧ ಘೋಷಣೆ ಕೂಗಿದರು.</p>.<p>‘ನಗರದ ಹೃದಯಭಾಗ ಎನ್.ಆರ್. ವೃತ್ತದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಬದಲಿಗೆ ಸಂಚಾರಿ ಪೊಲೀಸರು ನಗರದಾದ್ಯಂತ ವಾಹನಗಳ ದಾಖಲೆ ತಪಾಸಣೆ ಹೆಸರಿನಲ್ಲಿ ತಮ್ಮ ಬೊಕ್ಕಸ ತುಂಬಿಸಿ ಕೊಳ್ಳುತ್ತಿದ್ದಾರೆ. ಭಾರಿ ವಾಹನಗಳು ನಗರ ಪ್ರವೇಶ ನಿಷೇಧಿಸಬೇಕು. ಈ ಹಿಂದೆಯೂ ಇದೇ ಸ್ಧಳದಲ್ಲಿ ಅನೇಕ ಅಪಘಾತಗಳ ಸಂಭವಿಸಿದ್ದು, ಪೊಲೀಸ್ ಇಲಾಖೆ ವಾಹನ ದಟ್ಟಣೆ ನಿಯಂತ್ರಿಸುವಲ್ಲಿ ವಿಫಲವಾಗಿದೆ’ ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಸ್ಥಳಕ್ಕೆ ಬಂದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ವಕೀಲರ ಜೊತೆಗೆ ಮಾತುಕತೆ ನಡೆಸಿದರಾದರೂ ಪ್ರಯೋಜನವಾಗಲಿಲ್ಲ. ಬಳಿಕ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಆರ್.ಶ್ರೀನಿವಾಸ್ಗೌಡ ಭೇಟಿ ನೀಡಿ, ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಮಾಡಿದ ಮನವಿಗೆ ವಕೀಲರು ಸ್ಪಂದಿಸಿ, ಪ್ರತಿಭಟನೆ ಹಿಂತೆಗೆದುಕೊಂಡರು.</p>.<p>ನಗರದಲ್ಲಿ ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ವಕೀಲರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ, ಮಾಜಿ ಅಧ್ಯಕ್ಷ ಜೆ.ಪಿ. ಶೇಖರ್, ದೇವರಾಜೇಗೌಡ, ವಕೀಲರ ಸಂಘದ ಜಿಲ್ಲಾ ಸಂಚಾಲಕ ಎಚ್.ಆರ್. ರಂಗನಾಥ್, ಉಪಾಧ್ಯಕ್ಷ ಕೆ.ಕೆ. ಮೋಹನ್ ಕುಮಾರ್, ಮಾಜಿ ಕಾರ್ಯದರ್ಶಿ ಪ್ರಸನ್ನ ದಾಸರಕೊಪ್ಪಲು, ಶ್ರೀನಿವಾಸ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>