<p><strong>ಹಾಸನ</strong>: ನಗರದ ಹೊರವಲಯದ ಹೇಮ ಗಂಗೋತ್ರಿ ಕ್ಯಾಂಪಸ್ ಆವರಣದ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ಟ್ರಕ್ ಟರ್ಮಿನಲ್ ಸ್ಥಳಾಂತರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಎಐಡಿಎಸ್ಓ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಜತೆ ಕೆಂಚಟ್ಟಹಳ್ಳಿ ಗ್ರಾಮಸ್ಥರು ಭಾಗವಹಿಸಿ, ಯಾವುದೇ ಕಾರಣಕ್ಕೂ ಟ್ರಕ್ ಟರ್ಮಿನಲ್ ಗೆ ಅವಕಾಶ ಕೊಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>‘ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರಿದ ಹೇಮಗಂಗೋತ್ರಿ ಸ್ನಾತಕೋತ್ತರ ಕ್ಯಾಂಪಸ್ ಆವರಣದ ಪಕ್ಕದಲ್ಲೇ ಟರ್ಮಿನಲ್ ನಿರ್ಮಾಣವಾಗುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ, ಯಾರಿಂದಲೂ ಸ್ಪಂದನೆ ಸಿಗುತ್ತಿಲ್ಲ. ಈಗಾಗಲೇ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಇದರ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದೇವೆ’ ಎಂದು ಹೇಳಿದರು.</p>.<p>‘ಟರ್ಮಿನಲ್ನಿಂದ ಹೆಣ್ಣು ಮಕ್ಕಳಿಗೆ ಸಾಕಷ್ಟು ತೊಂದರೆ ಆಗಲಿದೆ. ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಉಂಟಾಗಿ ಶೈಕ್ಷಣಿಕ ಪರಿಸರವೂ ಹಾಳಾಗುತ್ತದೆ. ಆದ್ದರಿಂದ ಟ್ರಕ್ ಟರ್ಮಿನಲ್ ನಿರ್ಮಾಣವನ್ನು ಕೈ ಬಿಡಬೇಕು’ ಎಂದು ಮನವಿ ಮಾಡಿದರು.</p>.<p>‘ಟರ್ಮಿನಲ್ ನಿರ್ಮಾಣವಾದರೆ ಅಂಗಡಿಗಳು, ಡಾಬಾಗಳು, ಅಬಕಾರಿ ಚಟುವಟಿಕೆಗಳು ನಿರ್ಮಾಣವಾಗುತ್ತವೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಯಾಗುತ್ತದೆ. ಈಗಾಗಲೇ ಸರ್ಕಾರ ಹೊಸ ವಿಶ್ವವಿದ್ಯಾಲಯ ತೆರೆಯಲು ಅನುಮತಿ ನೀಡಿದ್ದು. ಮುಂದೆ ಹೇಮಗಂಗೋತ್ರಿ ನೂತನ ವಿಶ್ವವಿದ್ಯಾನಿಲಯ ಆಗಲಿದೆ. ಈ ಹಿನ್ನೆಲೆಯಲ್ಲಾದರೂ ಇದನ್ನು ಬೇರೆ ಕಡೆ ಸ್ಥಳಾಂತರ ಮಾಡಬೇಕು’ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.</p>.<p>‘ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ ಕೆಂಚಟ್ಟಹಳ್ಳಿ ಗ್ರಾಮಸ್ಥರು, ಗ್ರಾಮ ವ್ಯಾಪ್ತಿಯಲ್ಲಿ 4 ಎಕರೆ ಗೋಮಾಳ ಇತ್ತು. ಅದನ್ನು ಶೈಕ್ಷಣಿಕ ಚಟುವಟಿಕೆಗಾಗಿ ಹೇಮ ಗಂಗೋತ್ರಿಗೆ ವಹಿಸಲಾಗಿದೆ. ಈ ಜಾಗದಲ್ಲಿ ಆಶ್ರಯ ನಿವೇಶನ ಕೊಡಿ ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೊಡಲು ಬರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಿಂಬರಹ ನೀಡಿದ್ದರು. ಆದರೀಗ ಅದೇ ಜಾಗಕ್ಕೆ ಹೊಂದಿಕೊಂಡಂತೆ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಇದರ ಉದ್ದೇಶ ಏನು’ ಎಂದು ಪ್ರಶ್ನಿಸಿದರು.</p>.<p>‘ಈ ಬಗ್ಗೆ ಯಾರಿಂದಲೂ ನಿಖರ ಮಾಹಿತಿ ಸಿಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕೋರ್ಟ್ಗೆ ಹೋಗಿ ಅಂತಾರೆ. ಜಿಲ್ಲಾಡಳಿತ ಯಾರ ಒತ್ತಡಕ್ಕೂ ಮಣಿಯದೆ ಈ ಹಿಂದೆ ಇದ್ದಂತೆ ಗೋಮಾಳವನ್ನು ಹಾಗೆಯೇ ಉಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಕಪ್ಪಣ್ಣಗೌಡ, ಕುಮಾರ್, ಸುಶೀಲಮ್ಮ, ವಿದ್ಯಾರ್ಥಿಗಳಾದ ಅಮರ್, ಚೇತನ್ ಕೆ.ಜಿ., ದಯಾನಿಧಿ, ಸುಭಾಷ್, ಸಚಿನ್, ಯಶ್ವಂತ್, ಚೈತ್ರಾ, ನಿಶ್ಚಿತಾ, ಕಾಂತರಾಜ್, ಕೆ.ಎಂ.ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಹೊರವಲಯದ ಹೇಮ ಗಂಗೋತ್ರಿ ಕ್ಯಾಂಪಸ್ ಆವರಣದ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ಟ್ರಕ್ ಟರ್ಮಿನಲ್ ಸ್ಥಳಾಂತರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಎಐಡಿಎಸ್ಓ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಜತೆ ಕೆಂಚಟ್ಟಹಳ್ಳಿ ಗ್ರಾಮಸ್ಥರು ಭಾಗವಹಿಸಿ, ಯಾವುದೇ ಕಾರಣಕ್ಕೂ ಟ್ರಕ್ ಟರ್ಮಿನಲ್ ಗೆ ಅವಕಾಶ ಕೊಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>‘ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರಿದ ಹೇಮಗಂಗೋತ್ರಿ ಸ್ನಾತಕೋತ್ತರ ಕ್ಯಾಂಪಸ್ ಆವರಣದ ಪಕ್ಕದಲ್ಲೇ ಟರ್ಮಿನಲ್ ನಿರ್ಮಾಣವಾಗುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ, ಯಾರಿಂದಲೂ ಸ್ಪಂದನೆ ಸಿಗುತ್ತಿಲ್ಲ. ಈಗಾಗಲೇ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ಇದರ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದೇವೆ’ ಎಂದು ಹೇಳಿದರು.</p>.<p>‘ಟರ್ಮಿನಲ್ನಿಂದ ಹೆಣ್ಣು ಮಕ್ಕಳಿಗೆ ಸಾಕಷ್ಟು ತೊಂದರೆ ಆಗಲಿದೆ. ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಉಂಟಾಗಿ ಶೈಕ್ಷಣಿಕ ಪರಿಸರವೂ ಹಾಳಾಗುತ್ತದೆ. ಆದ್ದರಿಂದ ಟ್ರಕ್ ಟರ್ಮಿನಲ್ ನಿರ್ಮಾಣವನ್ನು ಕೈ ಬಿಡಬೇಕು’ ಎಂದು ಮನವಿ ಮಾಡಿದರು.</p>.<p>‘ಟರ್ಮಿನಲ್ ನಿರ್ಮಾಣವಾದರೆ ಅಂಗಡಿಗಳು, ಡಾಬಾಗಳು, ಅಬಕಾರಿ ಚಟುವಟಿಕೆಗಳು ನಿರ್ಮಾಣವಾಗುತ್ತವೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಯಾಗುತ್ತದೆ. ಈಗಾಗಲೇ ಸರ್ಕಾರ ಹೊಸ ವಿಶ್ವವಿದ್ಯಾಲಯ ತೆರೆಯಲು ಅನುಮತಿ ನೀಡಿದ್ದು. ಮುಂದೆ ಹೇಮಗಂಗೋತ್ರಿ ನೂತನ ವಿಶ್ವವಿದ್ಯಾನಿಲಯ ಆಗಲಿದೆ. ಈ ಹಿನ್ನೆಲೆಯಲ್ಲಾದರೂ ಇದನ್ನು ಬೇರೆ ಕಡೆ ಸ್ಥಳಾಂತರ ಮಾಡಬೇಕು’ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.</p>.<p>‘ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ ಕೆಂಚಟ್ಟಹಳ್ಳಿ ಗ್ರಾಮಸ್ಥರು, ಗ್ರಾಮ ವ್ಯಾಪ್ತಿಯಲ್ಲಿ 4 ಎಕರೆ ಗೋಮಾಳ ಇತ್ತು. ಅದನ್ನು ಶೈಕ್ಷಣಿಕ ಚಟುವಟಿಕೆಗಾಗಿ ಹೇಮ ಗಂಗೋತ್ರಿಗೆ ವಹಿಸಲಾಗಿದೆ. ಈ ಜಾಗದಲ್ಲಿ ಆಶ್ರಯ ನಿವೇಶನ ಕೊಡಿ ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೊಡಲು ಬರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಿಂಬರಹ ನೀಡಿದ್ದರು. ಆದರೀಗ ಅದೇ ಜಾಗಕ್ಕೆ ಹೊಂದಿಕೊಂಡಂತೆ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಇದರ ಉದ್ದೇಶ ಏನು’ ಎಂದು ಪ್ರಶ್ನಿಸಿದರು.</p>.<p>‘ಈ ಬಗ್ಗೆ ಯಾರಿಂದಲೂ ನಿಖರ ಮಾಹಿತಿ ಸಿಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕೋರ್ಟ್ಗೆ ಹೋಗಿ ಅಂತಾರೆ. ಜಿಲ್ಲಾಡಳಿತ ಯಾರ ಒತ್ತಡಕ್ಕೂ ಮಣಿಯದೆ ಈ ಹಿಂದೆ ಇದ್ದಂತೆ ಗೋಮಾಳವನ್ನು ಹಾಗೆಯೇ ಉಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಕಪ್ಪಣ್ಣಗೌಡ, ಕುಮಾರ್, ಸುಶೀಲಮ್ಮ, ವಿದ್ಯಾರ್ಥಿಗಳಾದ ಅಮರ್, ಚೇತನ್ ಕೆ.ಜಿ., ದಯಾನಿಧಿ, ಸುಭಾಷ್, ಸಚಿನ್, ಯಶ್ವಂತ್, ಚೈತ್ರಾ, ನಿಶ್ಚಿತಾ, ಕಾಂತರಾಜ್, ಕೆ.ಎಂ.ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>