<p><strong>ಬೇಲೂರು</strong>: ತಾಲ್ಲೂಕಿನ ಹಾರೋಹಳ್ಳಿಗೆ ಶಾಶ್ವತ ಸೇತುವೆ ಹಾಗೂ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿ ರೈತರು ನೀರಿಗಿಳಿದು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಸ್ಥ ರಮೇಶ್ ಮಾತನಾಡಿ, ಹಾರೋಹಳ್ಳಿಯ ಚೋಮನಕೆರೆ ಏರಿ ಒಡೆದು ಜಮೀನಿಗೆ ನೀರು ನುಗ್ಗಿ, ಬೆಳೆಗಳು ಕೊಳೆಯುವ ಸ್ಥಿತಿಯಲ್ಲಿವೆ. ರಸ್ತೆ ಇಲ್ಲದೆ ಸಂಪರ್ಕ ಕಡಿತವಾಗಿದೆ. ಶಾಶ್ವತ ಕಿರು ಸೇತುವೆಯನ್ನು ಮಾಡಿಕೊಡಬೇಕು. ಇಲ್ಲದಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<p> ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಮಾತನಾಡಿ, ‘ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದರು.</p>.<p> ಗ್ರಾಮಸ್ಥರಾದ ಪುಟ್ಟಯ್ಯ, ಸಂಪತ್, ಜಗದೀಶ್, ಕಿರಣ್, ರಘು, ಗೌರಯ್ಯ, ಕುಮಾರ್, ವಿನಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ತಾಲ್ಲೂಕಿನ ಹಾರೋಹಳ್ಳಿಗೆ ಶಾಶ್ವತ ಸೇತುವೆ ಹಾಗೂ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿ ರೈತರು ನೀರಿಗಿಳಿದು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಸ್ಥ ರಮೇಶ್ ಮಾತನಾಡಿ, ಹಾರೋಹಳ್ಳಿಯ ಚೋಮನಕೆರೆ ಏರಿ ಒಡೆದು ಜಮೀನಿಗೆ ನೀರು ನುಗ್ಗಿ, ಬೆಳೆಗಳು ಕೊಳೆಯುವ ಸ್ಥಿತಿಯಲ್ಲಿವೆ. ರಸ್ತೆ ಇಲ್ಲದೆ ಸಂಪರ್ಕ ಕಡಿತವಾಗಿದೆ. ಶಾಶ್ವತ ಕಿರು ಸೇತುವೆಯನ್ನು ಮಾಡಿಕೊಡಬೇಕು. ಇಲ್ಲದಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<p> ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಮಾತನಾಡಿ, ‘ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದರು.</p>.<p> ಗ್ರಾಮಸ್ಥರಾದ ಪುಟ್ಟಯ್ಯ, ಸಂಪತ್, ಜಗದೀಶ್, ಕಿರಣ್, ರಘು, ಗೌರಯ್ಯ, ಕುಮಾರ್, ವಿನಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>