ಈ ಹಿಂದೆ ಕಾವೇರಿ ನೀರಾವರಿ ನಿಗಮದಿಂದ ಪುನರ್ವಸತಿ ಹಳ್ಳಿಗಳ ಅಭಿವೃದ್ಧಿಗಾಗಿ ಕಾಮಗಾರಿಗಳು
ಮಂಜೂರಾಗಿದ್ದು, ಕೆಲವು ಕಾಮಗಾರಿ ಪೂರ್ಣಗೊಂಡಿದ್ದು, ಇನ್ನು ಕೆಲವು ಅರ್ಧಕ್ಕೆ ಸ್ಥಗಿತಗೊಂಡಿವೆ.
ರಾಮೇನಹಳ್ಳಿ, ಮಣಿಗನಹಳ್ಳಿ, ಕ್ಯಾತನಹಳ್ಳಿ, ಕಡಬಗಾಲ, ಗಂಜಿಗೆರೆ ಹರೀಗೌಡನಹಳ್ಳಿ ಏತ ನೀರಾವರಿ
ಯೋಜನೆಗಳು ಸಂಪೂರ್ಣ ಹಾಳಾಗಿದ್ದು, ಇದುವರೆಗೂ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.