ಕೋವಿಡ್ ಎರಡನೇ ಅಲೆ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಹಾಗಾಗಿ ಈ ಬಾರಿ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಕೋವಿಡ್ ಎರಡನೇ ಅಲೆಯಲ್ಲಿ ಮಾಡಿರುವ ವೆಚ್ಚ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕು ಎಂದು ವಿಧಾಸಭೆ ಸ್ಪೀಕರ್ ಮತ್ತು ಮುಖ್ಯಮಂತ್ರಿ ಅವರನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.