ನಗರ ವೃತ್ತ ಸಿಪಿಐ ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿ, ಚಾಲಕರಿಗೆ ಪ್ರಮಾಣ ಪತ್ರ ನೀಡುವ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತನಾಡಿದ್ದು, ಕಚೇರಿಯ ಡಿಎಸ್ಬಿ ಯೂನಿಟ್ ಸಂಪರ್ಕಿಸಿ ಅರ್ಜಿ ಸಲ್ಲಿಸಿದರೆ ವಿಳಂಬವಿಲ್ಲದೆ ಪತ್ರ ದೊರೆಯಲಿದೆ. ಪ್ರತಿಭಟನೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು. ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.