<p><strong>ಹಾಸನ</strong>: ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ<br />ಸೂಕ್ತ ವೇತನ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ನೌಕರರ ಸಂಘದ ಅಧ್ಯಕ್ಷ ಎ.<br />ಪುಟ್ಟಸ್ವಾಮಿ ಒತ್ತಾಯಿಸಿದರು.</p>.<p>ಇಲಾಖೆಯ ಅರೆ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡುವುದರ ಜತೆಗೆ ಆರೋಗ್ಯ ಮತ್ತು ಕುಟುಂಬ<br />ಕಲ್ಯಾಣ ಇಲಾಖೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಬೇಕು. ರಾಜ್ಯದಲ್ಲಿ 69,667 ಕಾಯಂ ಹುದ್ದೆಗಳ ಪೈಕಿ39,139 ಹುದ್ದೆ ಮಾತ್ರ ಭರ್ತಿಯಾಗಿದೆ. 1010 ಹಂಗಾಮಿ ನೌಕರರಿದ್ದು, ಖಾಲಿ ಇರುವ 30,528 ಹುದ್ದೆಗಳನ್ನು ಶೀಘ್ರವೇ ತುಂಬಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ನಿವೃತ್ತಿ ಬಳಿಕ ಆರೋಗ್ಯ ಇಲಾಖೆ ನೌಕರರು ಪಿಂಚಣಿ, ಭವಿಷ್ಯ ನಿಧಿ ಪಡೆಯಲು ಪ್ರಯಾಸ ಪಡುತ್ತಿದ್ದಾರೆ. ಈ ರೀತಿಯ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು. ಪ್ರಯೋಗ ಶಾಲಾ, ಕ್ಷ - ಕಿರಣ ತಂತ್ರಜ್ಞರು, ಫಾರ್ಮಾಸಿಸ್ಟ್, ಇಸಿಜಿ ಟೆಕ್ನಿಷಿಯನ್ ಹುದ್ದೆಯಲ್ಲಿ ಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು, ಎಲ್ಲರನ್ನು ಕಾಯಂ ಮಾಡಿಕೊಳ್ಳಬೇಕು ಎಂದರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವೃಂದಗಳ ನೌಕರರ ಗುತ್ತಿಗೆ, ಹೊರಗುತ್ತಿಗೆ ಮತ್ತು ಇತರ ಯಾವುದೇ ಮೂಲಗಳಿದ್ದರೂ ಸಮಾನ ಕೆಲಸಕ್ಕೆ ಸಮಾನ ವೇತನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ, ಶಿವಸ್ವಾಮಿ, ವಾಣಿ ಹಾಗೂ ಎಚ್. ಪುಟ್ಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ<br />ಸೂಕ್ತ ವೇತನ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ನೌಕರರ ಸಂಘದ ಅಧ್ಯಕ್ಷ ಎ.<br />ಪುಟ್ಟಸ್ವಾಮಿ ಒತ್ತಾಯಿಸಿದರು.</p>.<p>ಇಲಾಖೆಯ ಅರೆ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡುವುದರ ಜತೆಗೆ ಆರೋಗ್ಯ ಮತ್ತು ಕುಟುಂಬ<br />ಕಲ್ಯಾಣ ಇಲಾಖೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಬೇಕು. ರಾಜ್ಯದಲ್ಲಿ 69,667 ಕಾಯಂ ಹುದ್ದೆಗಳ ಪೈಕಿ39,139 ಹುದ್ದೆ ಮಾತ್ರ ಭರ್ತಿಯಾಗಿದೆ. 1010 ಹಂಗಾಮಿ ನೌಕರರಿದ್ದು, ಖಾಲಿ ಇರುವ 30,528 ಹುದ್ದೆಗಳನ್ನು ಶೀಘ್ರವೇ ತುಂಬಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ನಿವೃತ್ತಿ ಬಳಿಕ ಆರೋಗ್ಯ ಇಲಾಖೆ ನೌಕರರು ಪಿಂಚಣಿ, ಭವಿಷ್ಯ ನಿಧಿ ಪಡೆಯಲು ಪ್ರಯಾಸ ಪಡುತ್ತಿದ್ದಾರೆ. ಈ ರೀತಿಯ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು. ಪ್ರಯೋಗ ಶಾಲಾ, ಕ್ಷ - ಕಿರಣ ತಂತ್ರಜ್ಞರು, ಫಾರ್ಮಾಸಿಸ್ಟ್, ಇಸಿಜಿ ಟೆಕ್ನಿಷಿಯನ್ ಹುದ್ದೆಯಲ್ಲಿ ಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು, ಎಲ್ಲರನ್ನು ಕಾಯಂ ಮಾಡಿಕೊಳ್ಳಬೇಕು ಎಂದರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವೃಂದಗಳ ನೌಕರರ ಗುತ್ತಿಗೆ, ಹೊರಗುತ್ತಿಗೆ ಮತ್ತು ಇತರ ಯಾವುದೇ ಮೂಲಗಳಿದ್ದರೂ ಸಮಾನ ಕೆಲಸಕ್ಕೆ ಸಮಾನ ವೇತನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ, ಶಿವಸ್ವಾಮಿ, ವಾಣಿ ಹಾಗೂ ಎಚ್. ಪುಟ್ಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>