ಅರಸೀಕೆರೆ: ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಇದುವರೆಗೆ ಕೇವಲ ಯೋಜನೆ ಕಾಮಗಾರಿಯ ಗುತ್ತಿಗೆದಾರರಿಗೆ ಮಾತ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ. ಆದರೆ ಅತಂತ್ರವಾಗಿರುವ ಎತ್ತಿನಹೊಳೆ ಭೂ ಸಂತ್ರಸ್ತರಿಗೆ ಪರಿಹಾರ ಬಂದಿಲ್ಲ ಎಂದು ತಾಲ್ಲೂಕಿನ ಹಾರನಹಳ್ಳಿ ಮತ್ತು ಹಬ್ಬನಘಟ್ಟ ಭಾಗದ ಎತ್ತಿನಹೊಳೆ ಭೂ ಸಂತ್ರಸ್ತರು ಅಳಲು ತೋಡಿಕೊಂಡರು.