<p><strong>ಹಾಸನ: </strong>ಶಿಕ್ಷಣ ಕ್ಷೇತ್ರದ ಅನುಭವ ಇಲ್ಲದ ಪ್ರೊ. ಎಂ.ಆರ್.ದೊರೆಸ್ವಾಮಿ ಅವರನ್ನು ರಾಜ್ಯ ಸರ್ಕಾರ ಶಿಕ್ಷಣ ಸಲಹೆಗಾರರನ್ನಾಗಿ<br />ನೇಮಕ ಮಾಡಿರುವುದರಿಂದಲೇ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಡಿ.ರೇವಣ್ಣ<br />ಆರೋಪಿಸಿದರು.</p>.<p>ಬಡವರ ಕಷ್ಟ ಗೊತ್ತಿಲ್ಲದ ದೊರೆಸ್ವಾಮಿ ಅವರು ತಮ್ಮ ಎಂಜಿನಿಯರ್ ಕಾಲೇಜಿನ ಒಂದು ಸೀಟಿಗೆ ₹60 ಲಕ್ಷ<br />ತೆಗೆದುಕೊಳ್ಳುತ್ತಾರೆ. ಹಾಗಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅವರೇ ₹60 ಕೋಟಿ ನೀಡಲಿ. ಬಡವರ ಹೆಸರಿನಲ್ಲಿ ಲೂಟಿ<br />ಮಾಡುವವರು ಶಿಕ್ಷಣ ಸಲಹೆಗಾರರಾಗಿದ್ದಾರೆ. ಇಂತಹವರನ್ನು ನೇಮಿಸಿಕೊಂಡರೆ ಮುಂದೆ ಎಲ್ಲಾ ಸರ್ಕಾರಿ ಶಾಲೆ,<br />ಕಾಲೇಜುಗಳನ್ನು ಮುಚ್ಚಬೇಕಾಗುತ್ತದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>ನ.17ರಿಂದ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಆದರೆ, ಹಲವು ಕಾಲೇಜುಗಳಲ್ಲಿ ಉಪನ್ಯಾಸಕರು, ಪ್ರಯೋಗಾಲಯ,<br />ಕೊಠಡಿಗಳು, ಗ್ರಂಥಾಲಯ, ಶೌಚಾಲಯ ಕೊರತೆ ಕಾಡುತ್ತಿದೆ. ರಾಜ್ಯದಲ್ಲಿ ಶಾಲಾ, ಕಾಲೇಜು ಆರಂಭಿಸುವ ಮೊದಲು ಮೂಲ<br />ಸೌಕರ್ಯ ಹಾಗೂ ಬೋಧಕ ವರ್ಗದವರನ್ನು ನೇಮಿಸಬೇಕು. ಸಮಸ್ಯೆ ನಡುವೆ ಕಾಲೇಜು ಪ್ರಾರಂಭಿಸಿದರೆ ವಿದ್ಯಾರ್ಥಿಗಳಿಗೆ<br />ತೊಂದರೆಯಾಗಲಿದೆ. ಸರ್ಕಾರ ಏನಾದರೂ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿಡಿತಕ್ಕೆ ಸಿಕ್ಕಿದಿಯಾ ಎಂದು ಪ್ರಶ್ನಿಸಿದರು.<br /><br />ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೂಕ್ತ ಸೌಲಭ್ಯ ಇಲ್ಲದೆ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಾಗದೆ<br />ವಂಚಿತರಾಗಿದ್ದಾರೆ. ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿಡಿತದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ<br />ಎಂದು ಕಿಡಿಕಾರಿದರು.</p>.<p>ಶಿಕ್ಷಣ ಸಲಹೆಗಾರರು ಸರಿಯಾದ ಮಾರ್ಗದರ್ಶನ ನೀಡುತ್ತಿಲ್ಲ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೆರವಾಗಲಿದ್ದು, ಬಡ<br />ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಶೀಘ್ರ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೂಕ್ತ ಕ್ರಮ ಕೈಗೊಂಡು ಕಾಲೇಜುಗಳಿಗೆ ಮೂಲ<br />ಸೌಕರ್ಯ ಒದಗಿಸಲು ಮುಂದಾಗಬೇಕು. ರಾಜ್ಯದ ಬಹುತೇಕ ಕಾಲೆಜಿನಲ್ಲಿ ಉಪನ್ಯಾಸಕರ ಕೊರತೆ ಇದೆ. ಎಚ್.ಡಿ.<br />ಕುಮಾರಸ್ವಾಮಿ ಸಿ.ಎಂ ಆಗಿದ್ದ ಅವಧಿಯಲ್ಲಿ ಉಪನ್ಯಾಸಕರ ನೇಮಕ ಹಾಗೂ ಕಾಯಂ ಮಾಡಿದ್ದು ಬಿಟ್ಟರೆ ನಂತರ ಯಾವುದೇ<br />ನೇಮಕಾತಿ ನಡೆದಿಲ್ಲ ಎಂದು ದೂರಿದರು.</p>.<p>ಸರ್ಕಾರಕ್ಕೆ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಆಗದಿದ್ದರೆ ಇರುವ ಕಾಲೇಜುಗಳನ್ನು ಮುಚ್ಚಲಿ ಅಥವಾ<br />ಕೈಗಾರಿಕೋದ್ಯಮಿಗಳಿಗೆ ಶಾಲಾ, ಕಾಲೇಜು ದತ್ತು ಪಡೆಯಲು ಮನವಿ ಮಾಡಬೇಕು. ರಾಜ್ಯ ಸರ್ಕಾರ ಗ್ರಾಮೀಣ ಭಾಗಗಳಲ್ಲಿ<br />ಕಾಲೇಜುಗಳನ್ನು ಮುಚ್ಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಕಡ್ಡಾಯವಾಗಿ ಮಾಸ್ಕ್ ನೀಡಬೇಕು. ಆರೋಗ್ಯ ದೃಷ್ಟಿಯಿಂದ ಹದಿನೈದು<br />ದಿನಕ್ಕೆ ಸ್ಯಾನಿಟೈಸರ್ ಬಾಟಲ್ ನೀಡಬೇಕು.</p>.<p>ಒಂದರಿಂದ ಒಂಭತ್ತನೆ ತರಗತಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ತರಗತಿ ನಡೆಸಿ ಪಾಸ್ ಮಾಡಲಿ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಶಿಕ್ಷಣ ಕ್ಷೇತ್ರದ ಅನುಭವ ಇಲ್ಲದ ಪ್ರೊ. ಎಂ.ಆರ್.ದೊರೆಸ್ವಾಮಿ ಅವರನ್ನು ರಾಜ್ಯ ಸರ್ಕಾರ ಶಿಕ್ಷಣ ಸಲಹೆಗಾರರನ್ನಾಗಿ<br />ನೇಮಕ ಮಾಡಿರುವುದರಿಂದಲೇ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಡಿ.ರೇವಣ್ಣ<br />ಆರೋಪಿಸಿದರು.</p>.<p>ಬಡವರ ಕಷ್ಟ ಗೊತ್ತಿಲ್ಲದ ದೊರೆಸ್ವಾಮಿ ಅವರು ತಮ್ಮ ಎಂಜಿನಿಯರ್ ಕಾಲೇಜಿನ ಒಂದು ಸೀಟಿಗೆ ₹60 ಲಕ್ಷ<br />ತೆಗೆದುಕೊಳ್ಳುತ್ತಾರೆ. ಹಾಗಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅವರೇ ₹60 ಕೋಟಿ ನೀಡಲಿ. ಬಡವರ ಹೆಸರಿನಲ್ಲಿ ಲೂಟಿ<br />ಮಾಡುವವರು ಶಿಕ್ಷಣ ಸಲಹೆಗಾರರಾಗಿದ್ದಾರೆ. ಇಂತಹವರನ್ನು ನೇಮಿಸಿಕೊಂಡರೆ ಮುಂದೆ ಎಲ್ಲಾ ಸರ್ಕಾರಿ ಶಾಲೆ,<br />ಕಾಲೇಜುಗಳನ್ನು ಮುಚ್ಚಬೇಕಾಗುತ್ತದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>ನ.17ರಿಂದ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಆದರೆ, ಹಲವು ಕಾಲೇಜುಗಳಲ್ಲಿ ಉಪನ್ಯಾಸಕರು, ಪ್ರಯೋಗಾಲಯ,<br />ಕೊಠಡಿಗಳು, ಗ್ರಂಥಾಲಯ, ಶೌಚಾಲಯ ಕೊರತೆ ಕಾಡುತ್ತಿದೆ. ರಾಜ್ಯದಲ್ಲಿ ಶಾಲಾ, ಕಾಲೇಜು ಆರಂಭಿಸುವ ಮೊದಲು ಮೂಲ<br />ಸೌಕರ್ಯ ಹಾಗೂ ಬೋಧಕ ವರ್ಗದವರನ್ನು ನೇಮಿಸಬೇಕು. ಸಮಸ್ಯೆ ನಡುವೆ ಕಾಲೇಜು ಪ್ರಾರಂಭಿಸಿದರೆ ವಿದ್ಯಾರ್ಥಿಗಳಿಗೆ<br />ತೊಂದರೆಯಾಗಲಿದೆ. ಸರ್ಕಾರ ಏನಾದರೂ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿಡಿತಕ್ಕೆ ಸಿಕ್ಕಿದಿಯಾ ಎಂದು ಪ್ರಶ್ನಿಸಿದರು.<br /><br />ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೂಕ್ತ ಸೌಲಭ್ಯ ಇಲ್ಲದೆ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಾಗದೆ<br />ವಂಚಿತರಾಗಿದ್ದಾರೆ. ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿಡಿತದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ<br />ಎಂದು ಕಿಡಿಕಾರಿದರು.</p>.<p>ಶಿಕ್ಷಣ ಸಲಹೆಗಾರರು ಸರಿಯಾದ ಮಾರ್ಗದರ್ಶನ ನೀಡುತ್ತಿಲ್ಲ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೆರವಾಗಲಿದ್ದು, ಬಡ<br />ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಶೀಘ್ರ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೂಕ್ತ ಕ್ರಮ ಕೈಗೊಂಡು ಕಾಲೇಜುಗಳಿಗೆ ಮೂಲ<br />ಸೌಕರ್ಯ ಒದಗಿಸಲು ಮುಂದಾಗಬೇಕು. ರಾಜ್ಯದ ಬಹುತೇಕ ಕಾಲೆಜಿನಲ್ಲಿ ಉಪನ್ಯಾಸಕರ ಕೊರತೆ ಇದೆ. ಎಚ್.ಡಿ.<br />ಕುಮಾರಸ್ವಾಮಿ ಸಿ.ಎಂ ಆಗಿದ್ದ ಅವಧಿಯಲ್ಲಿ ಉಪನ್ಯಾಸಕರ ನೇಮಕ ಹಾಗೂ ಕಾಯಂ ಮಾಡಿದ್ದು ಬಿಟ್ಟರೆ ನಂತರ ಯಾವುದೇ<br />ನೇಮಕಾತಿ ನಡೆದಿಲ್ಲ ಎಂದು ದೂರಿದರು.</p>.<p>ಸರ್ಕಾರಕ್ಕೆ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಆಗದಿದ್ದರೆ ಇರುವ ಕಾಲೇಜುಗಳನ್ನು ಮುಚ್ಚಲಿ ಅಥವಾ<br />ಕೈಗಾರಿಕೋದ್ಯಮಿಗಳಿಗೆ ಶಾಲಾ, ಕಾಲೇಜು ದತ್ತು ಪಡೆಯಲು ಮನವಿ ಮಾಡಬೇಕು. ರಾಜ್ಯ ಸರ್ಕಾರ ಗ್ರಾಮೀಣ ಭಾಗಗಳಲ್ಲಿ<br />ಕಾಲೇಜುಗಳನ್ನು ಮುಚ್ಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಕಡ್ಡಾಯವಾಗಿ ಮಾಸ್ಕ್ ನೀಡಬೇಕು. ಆರೋಗ್ಯ ದೃಷ್ಟಿಯಿಂದ ಹದಿನೈದು<br />ದಿನಕ್ಕೆ ಸ್ಯಾನಿಟೈಸರ್ ಬಾಟಲ್ ನೀಡಬೇಕು.</p>.<p>ಒಂದರಿಂದ ಒಂಭತ್ತನೆ ತರಗತಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ತರಗತಿ ನಡೆಸಿ ಪಾಸ್ ಮಾಡಲಿ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>