<p><strong>ಹಾಸನ:</strong> ನಗರದ ಪುರದಮ್ಮ ದೇವಸ್ಥಾನಕ್ಕೆ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದಲ್ಲೂ ಹೆಚ್ಚಿನ ಭಕ್ತರು ಬರುತ್ತಾರೆ. ಅಗತ್ಯ ಮೂಲಭೂತ ಸೌಕರ್ಯಗಳ ಕಲ್ಪಿಸುವಂತೆ ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪುರದಮ್ಮ ದೇವಸ್ಥಾನದ ಹಣವನ್ನು ಇತರೆ ಕಾಮಗಾರಿಗಳಿಗೆ ಬಳಕೆ ಮಾಡಬಾರದು. ದೇವಸ್ಥಾನದ ಮೂಲಸೌಕರ್ಯ ಹಾಗೂ ದೇವಸ್ಥಾನದ ಅಭಿವೃದ್ದಿಗೆ ಮಾತ್ರ ಬಳಕೆ ಮಾಡಬೇಕು. ಸ್ಥಳೀಯರು ಸಮುಖದಲ್ಲಿ ದೇವಸ್ಥಾನದ ಹುಂಡಿ ಎಣಿಕೆ ಮಾಡಬೇಕು ಎಂದು ತಿಳಿಸಿದರು.</p>.<p>ನಗರದ ಸುಭಾಷ್ ಚೌಕದಲ್ಲಿರುವ ಮಲ್ಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಾಗೂ ದೇವಿಗೆರೆ ದೇವಸ್ಥಾನದಲ್ಲಿ ಟೆಂಡರ್ ಕರೆದು ಪಾರ್ಕಿಂಗ್ ಶುಲ್ಕ ನಿಗದಿ ಪಡಿಸಬೇಕು ಎಂದರು.</p>.<p>ಬಗರ್ಹುಕುಂನಲ್ಲಿ ಅರ್ಜಿ ಸಲ್ಲಿಸಿರುವವರಿಗೆ ಮಂಜೂರಾತಿಗೆ ಕ್ರಮ ವಹಿಸಬೇಕು. ದುರಸ್ತಿ ಸಂಬಂಧಿಸಿದಂತೆ ಕಂದಾಯ ಸಚಿವರು ನಿರ್ದೇಶನದಂತೆ ಕನಿಷ್ಠ 2 ದಾಖಲೆಗಳಿರುವ ಹಾಗೂ ದಾಖಲೆಗಳು ಇಲ್ಲದಿರುವ ಸಂದರ್ಭದಲ್ಲಿ ಮೀಸಿಂಗ್ ಸಮಿತಿಯ ಮುಂದೆ ಇಟ್ಟು ಪರಿಶೀಲಿಸಿ ತುರ್ತಾಗಿ ದುರಸ್ತಿ ಮಾಡುವಂತೆ ತಿಳಿಸಿದರು.</p>.<p>ಮಹಾನಗರ ಪಾಲಿಕೆಗೆ ಸೇರ್ಪಡೆಯಾಗಿರುವ ನೂತನ ಗ್ರಾಮಗಳಿಗೆ ಇ-ಸ್ವತ್ತು ನೀಡಲು, ವಾಣಿಜ್ಯ ಮಳಿಗೆಗಳಿಗೆ ಹರಾಜು ಪ್ರಕ್ರಿಯೆ ಸಂಬಂಧಿಸಿದಂತೆ ಹಾಗೂ ಇತರ ವಿಷಯಗಳ ಕುರಿತು ಶಾಸಕರು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಪುರದಮ್ಮ ದೇವಸ್ಥಾನದ ಭಕ್ತರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸಬೇಕು. ಕಸದ ನಿರ್ವಹಣೆ , ಕುಡಿಯುವ ನೀರಿನ ವ್ಯವಸ್ಥೆ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಭೆ ನಡೆಸುವಂತೆ ತಿಳಿಸಿದರು. ದೇವರ ಹೆಸರಿನಲ್ಲಿ ನೀಡುವ ಕಾಣಿಕೆಗಳನ್ನು ಪರಿಶೀಲಿಸಬೇಕು. ದೇವಿಗೆರೆ ದೇವಸ್ಥಾನದಲ್ಲಿ ಆವರಣದಲ್ಲಿ ಪಾರ್ಕಿಂಗ್ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ದೇವಸ್ಥಾನದ ಶಿಥಿಲಾವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.</p>.<p>ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ, ತಹಶೀಲ್ದಾರ್ ಗೀತಾ, ಮುಜರಾಯಿ ಇಲಾಖೆಯ ತಹಶೀಲ್ದಾರ್ ಲತಾ ಹಾಗೂ ಮತಿತ್ತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಗರದ ಪುರದಮ್ಮ ದೇವಸ್ಥಾನಕ್ಕೆ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದಲ್ಲೂ ಹೆಚ್ಚಿನ ಭಕ್ತರು ಬರುತ್ತಾರೆ. ಅಗತ್ಯ ಮೂಲಭೂತ ಸೌಕರ್ಯಗಳ ಕಲ್ಪಿಸುವಂತೆ ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪುರದಮ್ಮ ದೇವಸ್ಥಾನದ ಹಣವನ್ನು ಇತರೆ ಕಾಮಗಾರಿಗಳಿಗೆ ಬಳಕೆ ಮಾಡಬಾರದು. ದೇವಸ್ಥಾನದ ಮೂಲಸೌಕರ್ಯ ಹಾಗೂ ದೇವಸ್ಥಾನದ ಅಭಿವೃದ್ದಿಗೆ ಮಾತ್ರ ಬಳಕೆ ಮಾಡಬೇಕು. ಸ್ಥಳೀಯರು ಸಮುಖದಲ್ಲಿ ದೇವಸ್ಥಾನದ ಹುಂಡಿ ಎಣಿಕೆ ಮಾಡಬೇಕು ಎಂದು ತಿಳಿಸಿದರು.</p>.<p>ನಗರದ ಸುಭಾಷ್ ಚೌಕದಲ್ಲಿರುವ ಮಲ್ಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಾಗೂ ದೇವಿಗೆರೆ ದೇವಸ್ಥಾನದಲ್ಲಿ ಟೆಂಡರ್ ಕರೆದು ಪಾರ್ಕಿಂಗ್ ಶುಲ್ಕ ನಿಗದಿ ಪಡಿಸಬೇಕು ಎಂದರು.</p>.<p>ಬಗರ್ಹುಕುಂನಲ್ಲಿ ಅರ್ಜಿ ಸಲ್ಲಿಸಿರುವವರಿಗೆ ಮಂಜೂರಾತಿಗೆ ಕ್ರಮ ವಹಿಸಬೇಕು. ದುರಸ್ತಿ ಸಂಬಂಧಿಸಿದಂತೆ ಕಂದಾಯ ಸಚಿವರು ನಿರ್ದೇಶನದಂತೆ ಕನಿಷ್ಠ 2 ದಾಖಲೆಗಳಿರುವ ಹಾಗೂ ದಾಖಲೆಗಳು ಇಲ್ಲದಿರುವ ಸಂದರ್ಭದಲ್ಲಿ ಮೀಸಿಂಗ್ ಸಮಿತಿಯ ಮುಂದೆ ಇಟ್ಟು ಪರಿಶೀಲಿಸಿ ತುರ್ತಾಗಿ ದುರಸ್ತಿ ಮಾಡುವಂತೆ ತಿಳಿಸಿದರು.</p>.<p>ಮಹಾನಗರ ಪಾಲಿಕೆಗೆ ಸೇರ್ಪಡೆಯಾಗಿರುವ ನೂತನ ಗ್ರಾಮಗಳಿಗೆ ಇ-ಸ್ವತ್ತು ನೀಡಲು, ವಾಣಿಜ್ಯ ಮಳಿಗೆಗಳಿಗೆ ಹರಾಜು ಪ್ರಕ್ರಿಯೆ ಸಂಬಂಧಿಸಿದಂತೆ ಹಾಗೂ ಇತರ ವಿಷಯಗಳ ಕುರಿತು ಶಾಸಕರು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಪುರದಮ್ಮ ದೇವಸ್ಥಾನದ ಭಕ್ತರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸಬೇಕು. ಕಸದ ನಿರ್ವಹಣೆ , ಕುಡಿಯುವ ನೀರಿನ ವ್ಯವಸ್ಥೆ ಸಂಬಂಧಿಸಿದಂತೆ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಭೆ ನಡೆಸುವಂತೆ ತಿಳಿಸಿದರು. ದೇವರ ಹೆಸರಿನಲ್ಲಿ ನೀಡುವ ಕಾಣಿಕೆಗಳನ್ನು ಪರಿಶೀಲಿಸಬೇಕು. ದೇವಿಗೆರೆ ದೇವಸ್ಥಾನದಲ್ಲಿ ಆವರಣದಲ್ಲಿ ಪಾರ್ಕಿಂಗ್ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ದೇವಸ್ಥಾನದ ಶಿಥಿಲಾವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.</p>.<p>ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ, ತಹಶೀಲ್ದಾರ್ ಗೀತಾ, ಮುಜರಾಯಿ ಇಲಾಖೆಯ ತಹಶೀಲ್ದಾರ್ ಲತಾ ಹಾಗೂ ಮತಿತ್ತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>