ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಜ ಕಾರ್ಮಿಕರಿಗೆ ನ್ಯಾಯ ಒದಗಿಸಿ

ಡಿ.ಸಿ ಕಚೇರಿ ಎದುರು ಕಟ್ಟಡ ಕಾರ್ಮಿಕರ ಪ್ರತಿಭಟನೆ
Last Updated 10 ಆಗಸ್ಟ್ 2021, 13:48 IST
ಅಕ್ಷರ ಗಾತ್ರ

ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ 23 ಲಕ್ಷ ಕಾರ್ಮಿಕರು ಇದ್ದಾರೆ. ಕಳೆದ ಲಾಕ್‌ಡೌನ್ ವೇಳೆ 4 ಲಕ್ಷಕ್ಕೂ ಅಧಿಕ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿಯಾಗಿದ್ದಾರೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ಹೊರತುಪಡಿಸಿ ಬೇರೆ
ಯಾವುದೇ ಕಾರ್ಮಿಕರು, ನೌಕರರು, ಅಸಂಘಟಿತ ಕಾರ್ಮಿಕರನ್ನು ಮಂಡಳಿಯಲ್ಲಿ ನೋಂದಾಯಿಸುವಂತಿಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮಂಡಳಿ ಸೌಲಭ್ಯ ಹೆಚ್ಚಳದಿಂದ ಬೇರೆ ಕಾರ್ಮಿಕರನ್ನು ನೋಂದಾಯಿಸಿ ಕಾನೂನು ವ್ಯವಸ್ಥೆ ಅಸ್ಥಿರಗೊಳಿಸಲಾಗುತ್ತಿದೆ. ಇದನ್ನು ತಡೆದು ನೈಜ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಟಿ.ರಾಮೇಗೌಡ ಮಾತನಾಡಿ, 2019-20ನೇ ಸಾಲಿನ ಶೈಕ್ಷಣಿಕ ಧನ ಸಹಾಯ, ಮದುವೆ, ವೈದ್ಯಕೀಯ ಮತ್ತು ಮರಣ ಇತ್ಯಾದಿ ಧನ ಸಹಾಯದ ಅರ್ಜಿಗಳು ಆಗಸ್ಟ್ ತಿಂಗಳಲ್ಲಿ ಇತ್ಯರ್ಥಗೊಳಿಸಬೇಕು. 2020-21ನೇ ಸಾಲಿನ ಶೈಕ್ಷಣಿಕ ಧನ ಸಹಾಯದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಕಾರ್ಮಿಕರುವೈದ್ಯಕೀಯ ಧನಸಹಾಯ ಪಡೆಯಬೇಕಾದರೆಸಿಜಿಎಚ್‌ಎಸ್ ವರದಿಯನ್ನು ಸರ್ಕಾರಿ ವೈದ್ಯರು ನೀಡಬೇಕು. ಆದರೆ, ಹಣನೀಡದ ಕಾರಣವೈದ್ಯರು ಕೆಲಸ ಮಾಡುತ್ತಿಲ್ಲ. ಮಂಡಳಿಯು ವೈದ್ಯರನ್ನು ನೇಮಿಸಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದ್ದು, ಕಾರ್ಮಿಕರು ಕಷ್ಟ ಪಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಿ ವೈದ್ಯರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಕೋವಿಡ್ ಪರಿಹಾರ ಧನ ಹಲವು ಕಾರ್ಮಿಕರಿಗೆ ದೊರೆತಿಲ್ಲ. ಕಾರ್ಮಿಕ ಇಲಾಖೆಯು ಮತ್ತೊಮ್ಮೆನೋಂದಾಯಿತ ಕಾರ್ಮಿಕರ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ, ಅವರ ಖಾತೆಗಳಿಗೆ ತಕ್ಷಣವೇಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್.ಗಿರೀಶ್, ಗುರುರೇವಣ್ಣ
ಸಿದ್ದಪ್ಪ, ಮೋಹನ್ ಕುಮಾರ್, ದ್ಯಾವಮ್ಮ, ಲತಾ, ಶಾಂತಮ್ಮ, ಶಿವಮ್ಮ, ಚಂದ್ರು, ಜಯಂತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT