<p><strong>ಹಾಸನ:</strong> ಕೈಮಗ್ಗ ಮತ್ತು ಜವಳಿ ಉದ್ಯಮ ನಡೆಸುತ್ತಿರುವವರಿಗೆ ಸಹಾಯವಾಗುವಂತೆ ಹೊಸ ಯೋಜನೆಗಳ ಕುರಿತು ಅರಿವು ಮೂಡಿಸಿ, ಪೂರಕ ಸಾಲ ಸೌಲಭ್ಯ ಒದಗಿಸುವಂತೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಬಾ ಸಾಹೇಬ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ<br />ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಿದ್ಧ ಉಡುಪು ತರಬೇತಿ ಕೇಂದ್ರಗಳಿಂದ ನಿರುದ್ಯೋಗಿ ಯುವಕ,<br />ಯುವತಿಯರಿಗೆ ಸಿದ್ದ ಉಡುಪು ತಯಾರಿಕೆಯಲ್ಲಿ ತರಬೇತಿ ನೀಡಿ ಜೀವನಾಧಾರಕ್ಕೆ ವ್ಯವಸ್ಥೆ ಕಲ್ಪಿಸಿ ಎಂದರು.</p>.<p>ಕೈಮಗ್ಗ ಮತ್ತು ಜವಳಿ ಉದ್ಯಮದಿಂದ ಈಗಾಗಲೇ ನಷ್ಟ ಅನುಭವಿಸಿ ಕಂಪನಿ ಮುಚ್ಚಿರುವವರಿಗೆ ಪೂರ್ಣ ಪ್ರಮಾಣದ<br />ಸಹಕಾರ ಮತ್ತು ಸಾಲ ಸೌಲಭ್ಯ ನೀಡಿ, ಮರಳಿ ಪ್ರಾರಂಭಿಸುವಂತೆ ಅರಿವು ಮೂಡಿಸಬೇಕು. ನಿರುದ್ಯೋಗಿಗಳಿಗೆ<br />ಉದ್ಯೋಗವಕಾಶ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಂಗಾ ಕಲ್ಯಾಣ ಯೋಜನೆಯಿಂದ ಕೊಳವೆ ಬಾವಿ ಪಡೆದ ರೈತರ ಜಮೀನಿಗೆ ಭೇಟಿ ನೀಡಿ ಯಾವ ಬೆಳೆ ಬೆಳೆಯುತ್ತಿದ್ದಾರೆ, ಅದರಿಂದ ರೈತರಿಗೆ ಸಹಾಯವಾಗಿದೆಯೇ? ಎಷ್ಟು ಆದಾಯ ಪಡೆಯುತ್ತಿದ್ದಾರೆಯೇ? ಎಂಬುದನ್ನು ಪರಿಶೀಲಿಸಿ ಫೋಟೋ ತೆಗೆದು ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.</p>.<p>ಗಂಗಾ ಕಲ್ಯಾಣ ಇಲಾಖೆಯಡಿ ನೀಡಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸರ್ಕಾರದ ಆದೇಶದ<br />ಅನುಗುಣವಾಗಿ ವಿದ್ಯುತ್ ಕಂಬಗಳ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ<br />ಶೀಘ್ರವಾಗಿ ನೀಡುವಂತೆ ಸೆಸ್ಕ್ ಅಧಿಕಾರಿಗಳಿಗೆ ಅವರು ಸೂಚಿಸಿದರು.</p>.<p>ಕಳೆದ ಬಾರಿ ಬಾಲಕ ಹಾಗೂ ಬಾಲಕಿಯರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೂರ್ಣ ಪ್ರಮಾಣದ ಪ್ರವೇಶಾತಿ<br />ಆಗಿಲ್ಲ. ಹಾಗಾಗಿ ಹೆಚ್ಚಿನ ಪ್ರಚಾರ ಮಾಡುವ ಮೂಲಕ ನಿಗದಿತ ಸೀಟುಗಳು ಪ್ರವೇಶಾತಿ ಮೂಲಕ ಭರ್ತಿಯಾಗುವಂತೆ<br />ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<p>ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀಧರ್ ನಾಯಕ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ<br />ನಿರ್ದೇಶಕ ಮೆಹಬೂಬ್ ಪಾಷಾ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜೀನೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ವಿಜಯ್ ಕುಮಾರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕೈಮಗ್ಗ ಮತ್ತು ಜವಳಿ ಉದ್ಯಮ ನಡೆಸುತ್ತಿರುವವರಿಗೆ ಸಹಾಯವಾಗುವಂತೆ ಹೊಸ ಯೋಜನೆಗಳ ಕುರಿತು ಅರಿವು ಮೂಡಿಸಿ, ಪೂರಕ ಸಾಲ ಸೌಲಭ್ಯ ಒದಗಿಸುವಂತೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಬಾ ಸಾಹೇಬ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ<br />ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಿದ್ಧ ಉಡುಪು ತರಬೇತಿ ಕೇಂದ್ರಗಳಿಂದ ನಿರುದ್ಯೋಗಿ ಯುವಕ,<br />ಯುವತಿಯರಿಗೆ ಸಿದ್ದ ಉಡುಪು ತಯಾರಿಕೆಯಲ್ಲಿ ತರಬೇತಿ ನೀಡಿ ಜೀವನಾಧಾರಕ್ಕೆ ವ್ಯವಸ್ಥೆ ಕಲ್ಪಿಸಿ ಎಂದರು.</p>.<p>ಕೈಮಗ್ಗ ಮತ್ತು ಜವಳಿ ಉದ್ಯಮದಿಂದ ಈಗಾಗಲೇ ನಷ್ಟ ಅನುಭವಿಸಿ ಕಂಪನಿ ಮುಚ್ಚಿರುವವರಿಗೆ ಪೂರ್ಣ ಪ್ರಮಾಣದ<br />ಸಹಕಾರ ಮತ್ತು ಸಾಲ ಸೌಲಭ್ಯ ನೀಡಿ, ಮರಳಿ ಪ್ರಾರಂಭಿಸುವಂತೆ ಅರಿವು ಮೂಡಿಸಬೇಕು. ನಿರುದ್ಯೋಗಿಗಳಿಗೆ<br />ಉದ್ಯೋಗವಕಾಶ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಂಗಾ ಕಲ್ಯಾಣ ಯೋಜನೆಯಿಂದ ಕೊಳವೆ ಬಾವಿ ಪಡೆದ ರೈತರ ಜಮೀನಿಗೆ ಭೇಟಿ ನೀಡಿ ಯಾವ ಬೆಳೆ ಬೆಳೆಯುತ್ತಿದ್ದಾರೆ, ಅದರಿಂದ ರೈತರಿಗೆ ಸಹಾಯವಾಗಿದೆಯೇ? ಎಷ್ಟು ಆದಾಯ ಪಡೆಯುತ್ತಿದ್ದಾರೆಯೇ? ಎಂಬುದನ್ನು ಪರಿಶೀಲಿಸಿ ಫೋಟೋ ತೆಗೆದು ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.</p>.<p>ಗಂಗಾ ಕಲ್ಯಾಣ ಇಲಾಖೆಯಡಿ ನೀಡಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸರ್ಕಾರದ ಆದೇಶದ<br />ಅನುಗುಣವಾಗಿ ವಿದ್ಯುತ್ ಕಂಬಗಳ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ<br />ಶೀಘ್ರವಾಗಿ ನೀಡುವಂತೆ ಸೆಸ್ಕ್ ಅಧಿಕಾರಿಗಳಿಗೆ ಅವರು ಸೂಚಿಸಿದರು.</p>.<p>ಕಳೆದ ಬಾರಿ ಬಾಲಕ ಹಾಗೂ ಬಾಲಕಿಯರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೂರ್ಣ ಪ್ರಮಾಣದ ಪ್ರವೇಶಾತಿ<br />ಆಗಿಲ್ಲ. ಹಾಗಾಗಿ ಹೆಚ್ಚಿನ ಪ್ರಚಾರ ಮಾಡುವ ಮೂಲಕ ನಿಗದಿತ ಸೀಟುಗಳು ಪ್ರವೇಶಾತಿ ಮೂಲಕ ಭರ್ತಿಯಾಗುವಂತೆ<br />ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.</p>.<p>ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀಧರ್ ನಾಯಕ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ<br />ನಿರ್ದೇಶಕ ಮೆಹಬೂಬ್ ಪಾಷಾ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜೀನೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ವಿಜಯ್ ಕುಮಾರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>