'ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿಯಪಿಂಚಣಿಗೆ ಮೀಸಲಿಟ್ಟಿದ್ದ ₹1,350 ಕೋಟಿಯನ್ನು ಕಟ್ಟಡ ನಿರ್ಮಾಣಕ್ಕೆ ಬಳಸಲಾಗುತ್ತಿದೆ. ಬೆಂಗಳೂರಿನ ಎರಡು ವಿಶ್ವವಿದ್ಯಾಲಯ, ತುಮಕೂರು, ಮಂಡ್ಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿಯೂ ಶೇ 40ಕ್ಕಿಂತ ಹೆಚ್ಚು ಕಮಿಷನ್ ದಂಧೆ ನಡೆಯುತ್ತಿದೆ. ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ಮಹಾರಾಷ್ಟ್ರ ಮೂಲದ ಐಎಎಸ್ ಅಧಿಕಾರಿಯೊಬ್ಬರು ಬೆಂಗಳೂರಿನ ಅತಿಥಿ ಗೃಹದಲ್ಲಿ ಕುಳಿತು ಅವ್ಯವಹಾರ ನಡೆಸಿದ್ದಾರೆ’ ಎಂದು ದೂರಿದರು.