ಹಾಸನ: ಆಲೂರು, ಸಕಲೇಶಪುರ ವ್ಯಾಪ್ತಿಯಲ್ಲಿ ಜನರಿಗೆ ಉಪಟಳ ನೀಡುತ್ತಿರುವ ‘ಗುಂಡ’ ಮತ್ತು ‘ಮೌಂಟೇನ್’ ಎಂಬ ಪುಂಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ಅಳವಡಿಸುವ ಕಾರ್ಯಾಚರಣೆ ಜೂನ್ 8 ರಿಂದ 11ರ ವರೆಗೆ ನಡೆಯಲಿದೆ.
ಮಲೈಮಹದೇಶ್ವರ ವನ್ಯಜೀವಿಧಾಮಕ್ಕೆ ಗುಂಡ ಹಾಗೂ ಕಾವೇರಿ ವನ್ಯಜೀವಿಧಾಮಕ್ಕೆ ಮೌಂಟೇನ್ ಆನೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.ಈ ಅವಧಿಯಲ್ಲಿ ನಿರ್ಧರಿಸಿದ ಸ್ಥಳಗಳಲ್ಲಿ ರೈತರು ಮತ್ತು ಸಾರ್ವಜನಿಕರು ಕಾರ್ಯಾಚರಣೆಗೆ ಸಹಕರಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.