<p><strong>ಬೇಲೂರು</strong>: ಚನ್ನಕೇಶವಸ್ವಾಮಿ ಬ್ರಹ್ಮ ರಥೋತ್ಸವವು ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಈ ಬಾರಿಯೂ ದೊಡ್ಡಮೇದೂರು ಗ್ರಾಮದ ಖಾಜಿ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿಯವರು, ಕುರಾನ್ ಪಠಿಸದೇ, ಉರ್ದುವಿನಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. </p>.<p>ಸಂಪ್ರದಾಯದಂತೆ ರಥದ ಮುಂಭಾಗದಲ್ಲಿ ಖಾದ್ರಿಯವರು ಕುರಾನ್ ಪಠಿಸಿದ ನಂತರ, ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತಿತ್ತು. ಕಳೆದ ವರ್ಷ ವಿಶ್ವ ಹಿಂದೂ ಪರಿಷತ್ನಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕುರಾನ್ ಪಠಿಸಿರಲಿಲ್ಲ.</p>.<p>ಈ ಬಾರಿಯೂ ದಿವ್ಯ ಬ್ರಹ್ಮ ರಥೋತ್ಸವ ಪ್ರಾರಂಭಕ್ಕೂ ಮುನ್ನ ದೇಗುಲದ ಒಳ ಆವರಣದ ಕಲ್ಯಾಣಿ ಸಮೀಪದ ನೆಲಹಾಸಿನ ಮೇಲೆ ನಿಂತು ಖಾದ್ರಿಯವರು ಪ್ರಾರ್ಥನೆ ಸಲ್ಲಿಸಿದರು.</p>.<p>ಶನಿವಾರ ಬೆಳಿಗ್ಗೆ ಚನ್ನಕೇಶವ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇಗುಲದ ಅಷ್ಟ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ದೇಗುಲದ ಮುಂಭಾಗದಲ್ಲಿರುವ ಬಾವಿಕಟ್ಟೆ ಸಮೀಪ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಿದ ಅರ್ಚಕರು ವೇದ ಘೋಷಗಳನ್ನು ಮೊಳಗಿಸಿದರು.</p>.<p>ನಂತರ ಮೂರ್ತಿಯನ್ನು ರಥದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿಸಿ ರಥದದಲ್ಲಿ ಕುಳ್ಳಿರಿಸಲಾಯಿತು. ಬೆಳಿಗ್ಗೆ 10.45 ರಿಂದ 11.15 ರವರೆಗೆ ರಥೋತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಚನ್ನಕೇಶವಸ್ವಾಮಿ ಬ್ರಹ್ಮ ರಥೋತ್ಸವವು ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಈ ಬಾರಿಯೂ ದೊಡ್ಡಮೇದೂರು ಗ್ರಾಮದ ಖಾಜಿ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿಯವರು, ಕುರಾನ್ ಪಠಿಸದೇ, ಉರ್ದುವಿನಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. </p>.<p>ಸಂಪ್ರದಾಯದಂತೆ ರಥದ ಮುಂಭಾಗದಲ್ಲಿ ಖಾದ್ರಿಯವರು ಕುರಾನ್ ಪಠಿಸಿದ ನಂತರ, ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತಿತ್ತು. ಕಳೆದ ವರ್ಷ ವಿಶ್ವ ಹಿಂದೂ ಪರಿಷತ್ನಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕುರಾನ್ ಪಠಿಸಿರಲಿಲ್ಲ.</p>.<p>ಈ ಬಾರಿಯೂ ದಿವ್ಯ ಬ್ರಹ್ಮ ರಥೋತ್ಸವ ಪ್ರಾರಂಭಕ್ಕೂ ಮುನ್ನ ದೇಗುಲದ ಒಳ ಆವರಣದ ಕಲ್ಯಾಣಿ ಸಮೀಪದ ನೆಲಹಾಸಿನ ಮೇಲೆ ನಿಂತು ಖಾದ್ರಿಯವರು ಪ್ರಾರ್ಥನೆ ಸಲ್ಲಿಸಿದರು.</p>.<p>ಶನಿವಾರ ಬೆಳಿಗ್ಗೆ ಚನ್ನಕೇಶವ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇಗುಲದ ಅಷ್ಟ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ದೇಗುಲದ ಮುಂಭಾಗದಲ್ಲಿರುವ ಬಾವಿಕಟ್ಟೆ ಸಮೀಪ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಿದ ಅರ್ಚಕರು ವೇದ ಘೋಷಗಳನ್ನು ಮೊಳಗಿಸಿದರು.</p>.<p>ನಂತರ ಮೂರ್ತಿಯನ್ನು ರಥದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿಸಿ ರಥದದಲ್ಲಿ ಕುಳ್ಳಿರಿಸಲಾಯಿತು. ಬೆಳಿಗ್ಗೆ 10.45 ರಿಂದ 11.15 ರವರೆಗೆ ರಥೋತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>