ಕೊಯಮತ್ತೂರು : 1998ರ ಸರಣಿ ಬಾಂಬ್ ಸ್ಫೋಟದ ಅಪರಾಧಿ ಮೊಹಮ್ಮದ್ ರಫೀಕ್, ಗುತ್ತಿಗೆದಾರ ಪ್ರಕಾಶ್ ಎಂಬುವರ ಜತೆ ನಡೆಸಿದ್ದಾನೆ ಎನ್ನಲಾದ ದೂರವಾಣಿ ಸಂಭಾಷಣೆ ಪರಿಶೀಲಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಹತ್ಯೆ ಮಾಡುವ ವಿಚಾರ ಮಾತುಕತೆಯಲ್ಲಿ ಪ್ರಸ್ತಾಪವಾಗಿದೆ.
ಈ ದೂರವಾಣಿ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕಾರಣ ಸೋಮವಾರ ರಾತ್ರಿ ರಫೀಕ್ನನ್ನು ಪೊಲೀಸರು ಬಂಧಿಸಿದ್ದಾರೆ.