<p><strong>ಹಾಸನ:</strong> ಚುನಾವಣೆ ಸಂದರ್ಭದಲ್ಲಿಯೇ ಜೆಡಿಎಸ್, ಕಾಂಗ್ರೆಸ್ ಪಕ್ಷದವರ ಮನೆ, ಕಚೇರಿ ಮೇಲೆ ಸಿಬಿಐ, ಐಟಿ<br />ಮತ್ತು ಇಡಿ ದಾಳಿ ನಡೆಸುವುದು ಏಕೆ ಎಂದು ಪ್ರಶ್ನಿಸಿರುವ ಶಾಸಕ ಎಚ್.ಡಿ.ರೇವಣ್ಣ, ಎಲ್ಲಾ ಪಕ್ಷದವರ ಮೇಲೂ<br />ಸಿಬಿಐ ದಾಳಿ ನಡೆಸಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.</p>.<p>ಕಳೆದ ಲೋಕಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಹಾಸನ, ಮಂಡ್ಯ, ತುಮಕೂರು<br />ಕ್ಷೇತ್ರದ ಪಕ್ಷದ ಮುಖಂಡರ ಮನೆಗಳ ಮೇಲೂ ಐಟಿ ದಾಳಿ ನಡೆದಿತ್ತು. ಕಾಂಗ್ರೆಸ್-ಜೆಡಿಎಸ್ ಪಕ್ಷವನ್ನು<br />ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಮುಗಿಸಲು ಹೊರಟಿವೆ ಎಂದು<br />ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ<br />ಅವರು, ಕಾನೂನು ಚೌಕಟ್ಟಿನಲ್ಲಿ ದಾಳಿ ನಡೆಸಿದ್ದರೆ ತಪ್ಪಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಇದನ್ನು<br />ಬಳಸಿಕೊಳ್ಳುವುದು ಸರಿಯಲ್ಲ ಎಂದರು.</p>.<p>ದಿನ ಬೆಳಗಾದರೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್, ಬಿಜೆಪಿ ನಾಯಕರು<br />ಟೀಕಿಸುತ್ತಲೇ ಇರುತ್ತಾರೆ. ಏಕೆಂದರೆ ಜೆಡಿಎಸ್ ಕಂಡರೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಭಯವಿದೆ<br />ಎಂದರು.</p>.<p>‘ನಮ್ಮನ್ನು ತಬ್ಬಿಕೊಳ್ಳುವಂತೆ ಯಾರನ್ನಾದರೂ ಕೇಳಲು ಹೋಗಿದ್ದಿವಾ? ಅವರೇ ನಮ್ಮ ತಬ್ಬಿಕೊಂಡು ಈಗ<br />ದೂರುತ್ತಿದ್ದಾರೆ. ಕುಮಾರಸ್ವಾಮಿ ಅವರೇ ಸಿ.ಎಂ ಆಗಬೇಕೆಂದವರು ಯಾರು? ಜೆಡಿಎಸ್ ಕಾಲು<br />ಹಿಡಿದುಕೊಂಡುವರು ಯಾರು? ಈಗ ಅವರೇ ಜೆಡಿಎಸ್ ಟೀಕಿಸುತ್ತಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವೋ,<br />ಅಲ್ಲವೋ ಎಂಬುದನ್ನು ಜನರು ತೀರ್ಮಾನಿಸುತ್ತಾರೆ’ಎಂದು ಸಿದ್ದಾರಾಮಯ್ಯ ಆರೋಪಕ್ಕೆ ತಿರುಗೇಟು<br />ನೀಡಿದರು.</p>.<p>ಬಡವರನ್ನು ಕಂಡಾಗ ಕುಮಾರಸ್ವಾಮಿಗೆ ಕಣ್ಣೀರು ಬರುತ್ತದೆ. ದೇವೇಗೌಡರು ತಳಮಟ್ಟದಿಂದ ಬೆಳೆದವರು.ಬಡವರ ಕಷ್ಟ ಹಾಗೂ ದೇಶದ ಪರಿಸ್ಥಿತಿ ಕಂಡು ಅವರಿಗೆ ನೋವಾಗಿದೆ. ಬಿಜೆಪಿ-ಕಾಂಗ್ರೆಸ್ ಮುಖಂಡರಿಗೆ ಹೊಟ್ಟೆ<br />ತುಂಬಿ ಹೋಗಿದೆ ಎಂದು ಟೀಕಿಸಿದರು.</p>.<p>ಜಿಲ್ಲೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಪುನರುಚ್ಚರಿಸಿದ ರೇವಣ್ಣ, ಪಿಡಿಒ, ಡಿ ಗ್ರೂಪ್ ನೌಕರರು,<br />ಗುಮಾಸ್ತರನ್ನು ವರ್ಗಾವಣೆ ಮಾಡಲು ಹಣ ತೆಗೆದುಕೊಳ್ಳಲಾಗುತ್ತಿದೆ. ಕುಮಾರಸ್ವಾಮಿ ಸರ್ಕಾರದಲ್ಲಿ ಕೆಲವರು<br />ದುಡ್ಡು ಮಾಡಿಕೊಂಡು ಈಗ ಟೀಕೆ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಹೆಚ್ಚು ದಿನ ಇರುವುದಿಲ್ಲ. ಯಾವುದೇ ಸರ್ಕಾರವಿದ್ದರೂ ಕೆಲಸ ಮಾಡಿಸಿಕೊಳ್ಳುವುದು ಗೊತ್ತು ಎಂದರು.</p>.<p>‘ಹಾಸನ ನಗರಕ್ಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಷ್ಟು ಅನುದಾನ ನೀಡಲಾಗಿದೆ ಎಂಬುದರ ಬಗ್ಗೆ ದಾಖಲೆ<br />ನೀಡಲಾಗುವುದು. ಹಾಸನ ಜಿಲ್ಲೆಗೆ ₹508 ಕೋಟಿ ಮೊತ್ತದ ಕುಡಿಯುವ ನೀರಿನ ಯೋಜನೆ<br />ಪ್ರಸ್ತಾವನೆಯನ್ನು ಕೇಂದ್ರದ ಎನ್ಡಿಎ ಸರ್ಕಾರ ವಜಾ ಮಾಡಿತು. ಅಭಿವೃದ್ಧಿ ಹಾಗೂ ಜೆಡಿಎಸ್ ಬಗ್ಗೆ<br />ಮಾತನಾಡಲು ಬಿಜೆಪಿಗೆ ಯಾವ ನೈತಿಕತೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಗೆ ಸಮಯ ಕೇಳಲಾಗಿದೆ. ಅವರು ಅವಕಾಶ ನೀಡಿದರೆ, ಹಾಸನ ಜಿಲ್ಲೆಯಲ್ಲಿ<br />ಏನು ನಡೆಯುತ್ತಿದೆ ಎಂಬುದನ್ನು ಎಲ್ಲಾ ಶಾಸಕರು ತಿಳಿಸುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಚುನಾವಣೆ ಸಂದರ್ಭದಲ್ಲಿಯೇ ಜೆಡಿಎಸ್, ಕಾಂಗ್ರೆಸ್ ಪಕ್ಷದವರ ಮನೆ, ಕಚೇರಿ ಮೇಲೆ ಸಿಬಿಐ, ಐಟಿ<br />ಮತ್ತು ಇಡಿ ದಾಳಿ ನಡೆಸುವುದು ಏಕೆ ಎಂದು ಪ್ರಶ್ನಿಸಿರುವ ಶಾಸಕ ಎಚ್.ಡಿ.ರೇವಣ್ಣ, ಎಲ್ಲಾ ಪಕ್ಷದವರ ಮೇಲೂ<br />ಸಿಬಿಐ ದಾಳಿ ನಡೆಸಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.</p>.<p>ಕಳೆದ ಲೋಕಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಹಾಸನ, ಮಂಡ್ಯ, ತುಮಕೂರು<br />ಕ್ಷೇತ್ರದ ಪಕ್ಷದ ಮುಖಂಡರ ಮನೆಗಳ ಮೇಲೂ ಐಟಿ ದಾಳಿ ನಡೆದಿತ್ತು. ಕಾಂಗ್ರೆಸ್-ಜೆಡಿಎಸ್ ಪಕ್ಷವನ್ನು<br />ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಮುಗಿಸಲು ಹೊರಟಿವೆ ಎಂದು<br />ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ<br />ಅವರು, ಕಾನೂನು ಚೌಕಟ್ಟಿನಲ್ಲಿ ದಾಳಿ ನಡೆಸಿದ್ದರೆ ತಪ್ಪಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಇದನ್ನು<br />ಬಳಸಿಕೊಳ್ಳುವುದು ಸರಿಯಲ್ಲ ಎಂದರು.</p>.<p>ದಿನ ಬೆಳಗಾದರೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್, ಬಿಜೆಪಿ ನಾಯಕರು<br />ಟೀಕಿಸುತ್ತಲೇ ಇರುತ್ತಾರೆ. ಏಕೆಂದರೆ ಜೆಡಿಎಸ್ ಕಂಡರೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಭಯವಿದೆ<br />ಎಂದರು.</p>.<p>‘ನಮ್ಮನ್ನು ತಬ್ಬಿಕೊಳ್ಳುವಂತೆ ಯಾರನ್ನಾದರೂ ಕೇಳಲು ಹೋಗಿದ್ದಿವಾ? ಅವರೇ ನಮ್ಮ ತಬ್ಬಿಕೊಂಡು ಈಗ<br />ದೂರುತ್ತಿದ್ದಾರೆ. ಕುಮಾರಸ್ವಾಮಿ ಅವರೇ ಸಿ.ಎಂ ಆಗಬೇಕೆಂದವರು ಯಾರು? ಜೆಡಿಎಸ್ ಕಾಲು<br />ಹಿಡಿದುಕೊಂಡುವರು ಯಾರು? ಈಗ ಅವರೇ ಜೆಡಿಎಸ್ ಟೀಕಿಸುತ್ತಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವೋ,<br />ಅಲ್ಲವೋ ಎಂಬುದನ್ನು ಜನರು ತೀರ್ಮಾನಿಸುತ್ತಾರೆ’ಎಂದು ಸಿದ್ದಾರಾಮಯ್ಯ ಆರೋಪಕ್ಕೆ ತಿರುಗೇಟು<br />ನೀಡಿದರು.</p>.<p>ಬಡವರನ್ನು ಕಂಡಾಗ ಕುಮಾರಸ್ವಾಮಿಗೆ ಕಣ್ಣೀರು ಬರುತ್ತದೆ. ದೇವೇಗೌಡರು ತಳಮಟ್ಟದಿಂದ ಬೆಳೆದವರು.ಬಡವರ ಕಷ್ಟ ಹಾಗೂ ದೇಶದ ಪರಿಸ್ಥಿತಿ ಕಂಡು ಅವರಿಗೆ ನೋವಾಗಿದೆ. ಬಿಜೆಪಿ-ಕಾಂಗ್ರೆಸ್ ಮುಖಂಡರಿಗೆ ಹೊಟ್ಟೆ<br />ತುಂಬಿ ಹೋಗಿದೆ ಎಂದು ಟೀಕಿಸಿದರು.</p>.<p>ಜಿಲ್ಲೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಪುನರುಚ್ಚರಿಸಿದ ರೇವಣ್ಣ, ಪಿಡಿಒ, ಡಿ ಗ್ರೂಪ್ ನೌಕರರು,<br />ಗುಮಾಸ್ತರನ್ನು ವರ್ಗಾವಣೆ ಮಾಡಲು ಹಣ ತೆಗೆದುಕೊಳ್ಳಲಾಗುತ್ತಿದೆ. ಕುಮಾರಸ್ವಾಮಿ ಸರ್ಕಾರದಲ್ಲಿ ಕೆಲವರು<br />ದುಡ್ಡು ಮಾಡಿಕೊಂಡು ಈಗ ಟೀಕೆ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಹೆಚ್ಚು ದಿನ ಇರುವುದಿಲ್ಲ. ಯಾವುದೇ ಸರ್ಕಾರವಿದ್ದರೂ ಕೆಲಸ ಮಾಡಿಸಿಕೊಳ್ಳುವುದು ಗೊತ್ತು ಎಂದರು.</p>.<p>‘ಹಾಸನ ನಗರಕ್ಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಷ್ಟು ಅನುದಾನ ನೀಡಲಾಗಿದೆ ಎಂಬುದರ ಬಗ್ಗೆ ದಾಖಲೆ<br />ನೀಡಲಾಗುವುದು. ಹಾಸನ ಜಿಲ್ಲೆಗೆ ₹508 ಕೋಟಿ ಮೊತ್ತದ ಕುಡಿಯುವ ನೀರಿನ ಯೋಜನೆ<br />ಪ್ರಸ್ತಾವನೆಯನ್ನು ಕೇಂದ್ರದ ಎನ್ಡಿಎ ಸರ್ಕಾರ ವಜಾ ಮಾಡಿತು. ಅಭಿವೃದ್ಧಿ ಹಾಗೂ ಜೆಡಿಎಸ್ ಬಗ್ಗೆ<br />ಮಾತನಾಡಲು ಬಿಜೆಪಿಗೆ ಯಾವ ನೈತಿಕತೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಗೆ ಸಮಯ ಕೇಳಲಾಗಿದೆ. ಅವರು ಅವಕಾಶ ನೀಡಿದರೆ, ಹಾಸನ ಜಿಲ್ಲೆಯಲ್ಲಿ<br />ಏನು ನಡೆಯುತ್ತಿದೆ ಎಂಬುದನ್ನು ಎಲ್ಲಾ ಶಾಸಕರು ತಿಳಿಸುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>