ಅತಿವೃಷ್ಟಿ, ಗಾಳಿ, ಮಳೆಯ ನಡುವೆಯೂ ರೈತರು ಮೆಕ್ಕೆಜೋಳವನ್ನು ಬಿತ್ತನೆ ಮಾಡಿದ್ದರು. ಆಗಸ್ಟ್ ಮೊದಲ ವಾರದಲ್ಲಿ ಬೀಸಿದ ಗಾಳಿಗೆ ಬಿತ್ತನೆ ಮಾಡಿದ್ದ ಬೆಳೆ ನೆಲಕಚ್ಚಿದ್ದವು. ಅಳಿದುಳಿದಿದ್ದ ಬೆಳೆ ಈಗ ಕಟಾವು ಹಂತ ತಲುಪಿದೆ. ಹೊಲಗಳಲ್ಲಿ ತೇವಾಂಶವಿದ್ದರೂ ಲೆಕ್ಕಿಸದೆ ಮೆಕ್ಕೆಜೋಳ ಫಸಲು ನಷ್ಟವಾಗುತ್ತಿ ರುವುದನ್ನು ತಪ್ಪಿಸಲು ಕಟಾವು ಮಾಡಿ ಕಣ, ರಸ್ತೆಗಳಿಗೆ ತಂದು ಯಂತ್ರದ ಮೂಲಕ ಕಾಳು ಬೇರ್ಪಡಿಸುತ್ತಿದ್ದಾರೆ. ಆಗಾಗ ಬಂದು ಹೋಗುವ ಮಳೆ ನಡುವೆ ಹಗಲಿರುಳೆನ್ನದೆ ಜೋಪಡಿಯಲ್ಲಿ ಒಣಗಿಸುವ ಕಾರ್ಯದಲ್ಲಿ ರೈತರು ಮಗ್ನರಾಗಿದ್ದಾರೆ.