ಕೃಷಿಯಲ್ಲಿ ತೊಡಗಿಕೊಂಡ ಕುಟುಂಬಗಳಲ್ಲಿ ಸ್ವಲ್ಪ ಮಟ್ಟಿಗೆ ಸಕಾಲಕ್ಕೆ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಂದು ಕೆಲಸಕ್ಕೂ ಕಾರ್ಮಿಕರನ್ನೆ ಅವಲಂಬಿಸಿರುವ ಬಹುತೇಕ ರೈತ ಕುಟುಂಬಗಳು, ಬೆಳೆಗಳಿಗೆ ಸಕಾಲಕ್ಕೆ ಸರಿಯಾಗಿ ಉಪಚರಿಸಲು ಸಾಧ್ಯವಾಗದೇ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಕಾರ್ಮಿಕರ ಸಂಬಳ ಅಧಿಕವಾಗಿದ್ದು, ಖರ್ಚು ಮಾಡಿದ ಹಣವನ್ನು ವಾಪಸ್ ಪಡೆಯಲು ಆಗುತ್ತಿಲ್ಲ.