<p><strong>ಹಾಸನ</strong>: ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಒಂದು ತಾಸು ಗುಡುಗುಸಹಿತ ಉತ್ತಮ ಮಳೆ ಸುರಿಯಿತು.</p>.<p>ಹಾಸನ ಸುತ್ತಮುತ್ತಲಿನ ಪ್ರದೇಶ, ಆಲೂರು, ಅರಕಲಗೂಡು, ಸಕಲೇಶಪುರ ತಾಲ್ಲೂಕಿನಲ್ಲಿ ಜೋರಾಗಿ ಮಳೆ ಸುರಿಯಿತು. ಮಳೆಯಿಂದ ನಗರ ರಸ್ತೆಗಳು ಜಲಾವೃತ ಗೊಂಡು ಸಂಚಾರಕ್ಕೆ ಅಡಚಣೆ ಯಾಯಿತು.</p>.<p>ಮಧ್ಯಾಹ್ನ ಮೋಡ ಕವಿದ ವಾತಾವರಣವಿತ್ತು. 3.30 ರಿಂದ 4.30ರವರೆಗೆ ಗಾಳಿ ಸಹಿತಮಳೆ ಸುರಿಯಿತು.ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಯಿತು.</p>.<p>ಅರಕಲಗೂಡು ಪಟ್ಟಣದಲ್ಲಿ ಮಧ್ಯಾಹ್ನ ಕೆಲಕಾಲ ಗುಡುಗಿನಿಂದ ಕೂಡಿದ ಮಳೆ ಸುರಿಯಿತು. ಬೇಸಿಗೆಯ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆಯಿತು.</p>.<p class="Briefhead"><strong>ಹದ ಮಳೆ</strong></p>.<p><strong>ಆಲೂರು:</strong> ಯುಗಾದಿ ಹಬ್ಬ ಮರುದಿನ ಹದ ಮಳೆಯಾಗಿರುವುದು ರೈತರು ಮತ್ತು ಜನಸಾಮಾನ್ಯರಲ್ಲಿ ಸಂತಸ ಮೂಡಿಸಿದ್ದು, ವಾತಾವರಣ ತಂಪಾಗಿಸಿತು.</p>.<p>ಬಹುತೇಕ ರೈತರು ಶುಂಠಿ ಬೆಳೆ ನಾಟಿ ಮಾಡಿ ಕೊಳವೆಬಾವಿ ಮೂಲಕ ನೀರು ಸಿಂಪರಣೆ ಮಾಡುತ್ತಿದ್ದರು. ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಹಲವಾರು ಕೊಳವೆಬಾವಿಗಳು ಬತ್ತಿದ್ದವು. ಇಂದು ಸುರಿದ ಮಳೆ ಸ್ವಲ್ಪ ಆಸರೆ ನೀಡಿತು.</p>.<p class="Briefhead"><strong>ಸಾಧಾರಣ ಮಳೆ</strong></p>.<p><strong>ಹೆತ್ತೂರು</strong>: ಹೆತ್ತೂರು ಹಾಗೂ ಯಸಳೂರು ಹೋಬಳಿಯ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಭಾರಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಸುರಿಯಿತು</p>.<p>ಬಿರು ಬಿಸಿಲಿನಿಂದ ಕಾಫಿ, ಕಾಳು ಮೆಣಸು ಬೆಳೆಗಳು ಒಣಗಲಾರಂಭಿ ಸಿದ್ದವು, ಮಳೆ ಸುರಿದಿರುವುದರಿಂದ ಬೆಳೆಗಳಿಗೆ ಅನುಕೂಲವಾಗಿದೆ. ಚಿನ್ನಹಳ್ಳಿ, ಹೊಸಹಳ್ಳಿ, ಮಂಕನಹಳ್ಳಿ, ಅತ್ತಿಹಳ್ಳಿ, ಯಡಕೇರಿ ಇನ್ನಿತರ ಪ್ರದೇಶ ಗಳಲ್ಲಿ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಒಂದು ತಾಸು ಗುಡುಗುಸಹಿತ ಉತ್ತಮ ಮಳೆ ಸುರಿಯಿತು.</p>.<p>ಹಾಸನ ಸುತ್ತಮುತ್ತಲಿನ ಪ್ರದೇಶ, ಆಲೂರು, ಅರಕಲಗೂಡು, ಸಕಲೇಶಪುರ ತಾಲ್ಲೂಕಿನಲ್ಲಿ ಜೋರಾಗಿ ಮಳೆ ಸುರಿಯಿತು. ಮಳೆಯಿಂದ ನಗರ ರಸ್ತೆಗಳು ಜಲಾವೃತ ಗೊಂಡು ಸಂಚಾರಕ್ಕೆ ಅಡಚಣೆ ಯಾಯಿತು.</p>.<p>ಮಧ್ಯಾಹ್ನ ಮೋಡ ಕವಿದ ವಾತಾವರಣವಿತ್ತು. 3.30 ರಿಂದ 4.30ರವರೆಗೆ ಗಾಳಿ ಸಹಿತಮಳೆ ಸುರಿಯಿತು.ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಯಿತು.</p>.<p>ಅರಕಲಗೂಡು ಪಟ್ಟಣದಲ್ಲಿ ಮಧ್ಯಾಹ್ನ ಕೆಲಕಾಲ ಗುಡುಗಿನಿಂದ ಕೂಡಿದ ಮಳೆ ಸುರಿಯಿತು. ಬೇಸಿಗೆಯ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆಯಿತು.</p>.<p class="Briefhead"><strong>ಹದ ಮಳೆ</strong></p>.<p><strong>ಆಲೂರು:</strong> ಯುಗಾದಿ ಹಬ್ಬ ಮರುದಿನ ಹದ ಮಳೆಯಾಗಿರುವುದು ರೈತರು ಮತ್ತು ಜನಸಾಮಾನ್ಯರಲ್ಲಿ ಸಂತಸ ಮೂಡಿಸಿದ್ದು, ವಾತಾವರಣ ತಂಪಾಗಿಸಿತು.</p>.<p>ಬಹುತೇಕ ರೈತರು ಶುಂಠಿ ಬೆಳೆ ನಾಟಿ ಮಾಡಿ ಕೊಳವೆಬಾವಿ ಮೂಲಕ ನೀರು ಸಿಂಪರಣೆ ಮಾಡುತ್ತಿದ್ದರು. ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಹಲವಾರು ಕೊಳವೆಬಾವಿಗಳು ಬತ್ತಿದ್ದವು. ಇಂದು ಸುರಿದ ಮಳೆ ಸ್ವಲ್ಪ ಆಸರೆ ನೀಡಿತು.</p>.<p class="Briefhead"><strong>ಸಾಧಾರಣ ಮಳೆ</strong></p>.<p><strong>ಹೆತ್ತೂರು</strong>: ಹೆತ್ತೂರು ಹಾಗೂ ಯಸಳೂರು ಹೋಬಳಿಯ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಭಾರಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಸುರಿಯಿತು</p>.<p>ಬಿರು ಬಿಸಿಲಿನಿಂದ ಕಾಫಿ, ಕಾಳು ಮೆಣಸು ಬೆಳೆಗಳು ಒಣಗಲಾರಂಭಿ ಸಿದ್ದವು, ಮಳೆ ಸುರಿದಿರುವುದರಿಂದ ಬೆಳೆಗಳಿಗೆ ಅನುಕೂಲವಾಗಿದೆ. ಚಿನ್ನಹಳ್ಳಿ, ಹೊಸಹಳ್ಳಿ, ಮಂಕನಹಳ್ಳಿ, ಅತ್ತಿಹಳ್ಳಿ, ಯಡಕೇರಿ ಇನ್ನಿತರ ಪ್ರದೇಶ ಗಳಲ್ಲಿ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>