ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಮುಂದುವರಿಕೆ: ಶ್ರೀರಾಮುಲು

Last Updated 1 ಮೇ 2020, 11:50 IST
ಅಕ್ಷರ ಗಾತ್ರ

ಹಾಸನ: ಕೋವಿಡ್ 19 ರೋಗದಿಂದ ಗುಣಮುಖರಾದವರ ದೇಹದಿಂದ ರೋಗನಿರೋಧಕ ಕಣಗಳನ್ನು ತೆಗೆದು, ಮತ್ತೊಬ್ಬ ರೋಗಿಯ ದೇಹಕ್ಕೆ ಸೇರಿಸುವ ‘ಪ್ಲಾಸ್ಮಾ ಥೆರಪಿ’ ಪ್ರಯೋಗ ರಾಜ್ಯದಲ್ಲಿ ಯಶಸ್ವಿಯಾಗಿರುವುದರಿಂದ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ಲಾಸ್ಮಾ ಥೆರಪಿಯಿಂದ ಕೋವಿಡ್‌ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಇದರ ಸಾಧಕ, ಬಾಧಕ ನೋಡಿಕೊಂಡು ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ತಜ್ಞರ ಸಲಹೆಯಂತೆ ಕೋವಿಡ್‌ ಪರೀಕ್ಷೆಯನ್ನು ಸರಳವಾಗಿ ನಡೆಸಲು ಇನ್ನು ಮುಂದೆ ಆಂಬುಲೆನ್ಸ್‌ನಲ್ಲಿ ವೈದ್ಯಕೀಯ ಸಿಬ್ಬಂದಿ ಶಂಕಿತರ ಮನೆಗೆ ತೆರಳಿ ಗಂಟಲು ದ್ರವ ಮಾದರಿ ಸಂಗ್ರಹಿಸಿಕೊಂಡು ಬರುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಖಾಲಿ ಆಗಿರುವ ಕಾರಣ ರಕ್ತ ಸಂಗ್ರಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗೂ ಸೂಚನೆ ನೀಡಲಾಗಿದೆ. ದಾನಿಗಳಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಟೋಲ್‌ ಫ್ರೀ ನಂಬರ್‌ಗೆ ಅವರು ಕರೆ ಮಾಡಿದರೆ, ವಾಹನದಲ್ಲಿ ಕರೆತಂದು ವಾಪಸ್‌ ಬಿಡುವ ವ್ಯವಸ್ಥೆಯನ್ನು ಜಿಲ್ಲಾಡಳಿತವೇ ಮಾಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT