ಹಳೇಬೀಡಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಪರಿಸರ ಸಮಾವೇಶದಲ್ಲಿ ಮಾತನಾಡಿದ ಅವರು, ಗಿಡ, ಮರ, ಗಾಳಿ, ಬೆಳಕು, ನೀರು ಪರಿಸರದ ಭಾಗ. ಈ ಸಂಪನ್ಮೂಲಗಳನ್ನು ಹೇಗೆ ಬಳಸುತ್ತಿದ್ದೇವೆ ಎಂಬುದರ ಕುರಿತು ಯೋಚಿಸಬೇಕು. ಮಳೆ ಕೊರತೆಯಿಂದ ಪದೇ ಪದೇ ಬರ ಎದುರಿಸುವಂತಾಗಿದೆ. ಕಳೆದ ವರ್ಷ ಅತಿ ಹೆಚ್ಚು ಮಳೆಯಾಗಿ ಜಲಾಶಯಗಳು ಭರ್ತಿಯಾದವು. ಆದರೆ ಕೆಲವೇ ತಿಂಗಳಲ್ಲಿ ಮಳೆ ಕೊರತೆಯಿಂದ ಬರ ಉಂಟಾಯಿತು. ಬರ ಪರಿಸ್ಥಿತಿ ಎದುರಿಸಲು ದೀರ್ಘಾವಧಿ ಯೋಜನೆ ಅಗತ್ಯ ಎಂದು ಅಭಿಪ್ರಾಯಪಟ್ಟರು.