ಹಿರಿಯ ನಾಯಕ ಗುಲಾಂ ನಬಿ ಅಜಾದ್ ಸೇರಿದಂತೆ ಹಲವು ಬಂಡಾಯ ಎದ್ದಿದ್ದಾರೆ. ಕಾಂಗ್ರೆಸ್ಗೆ ಭವಿಷ್ಯವೇ ಇಲ್ಲ. ಖಾಲಿ ಇಲ್ಲದ ಕುರ್ಚಿಗೆ ಟವಲ್ ಹಾಕುತ್ತಿದ್ದಾರೆ. ಈಗಾಗಲೇ ದಲಿತ, ಲಿಂಗಾಯತ, ಕುರುಬ, ಒಕ್ಕಲಿಗ, ಲಿಂಗಾಯತ ಸಿ.ಎಂ ಎಂಬ ಚರ್ಚೆ ನಡೆಯುತ್ತಿದೆ.ಸಂವಿಧಾನಕ್ಕೆ ತಿದ್ದುಪಡಿ ತಂದು ಒಂದು ರಾಜ್ಯದಲ್ಲಿ ನಾಲ್ಕು ಸಿ.ಎಂ ಆಗಲು ಅವಕಾಶನೀಡಿದರೆ, ಕಾಂಗ್ರೆಸ್ನವರು ಸಿ.ಎಂ ಆಗಬಹುದೇನೋ ಎಂದು ವ್ಯಂಗ್ಯವಾಡಿದರು.