<p><strong>ಕೊಣನೂರು (ಹಾಸನ): </strong>ರಾಮನಾಥಪುರದಲ್ಲಿರುವ ಪುರಾತನ ರಾಮೇಶ್ವರಸ್ವಾಮಿ ದೇವಾಲಯದ ರಾಜಗೋಪುರದಲ್ಲಿನ ಕೆಲಭಾಗ ಮಳೆಯಿಂದಾಗಿ ಭಾನುವಾರ ಕುಸಿದಿದೆ.</p>.<p>‘ಚತುರ್ಯುಗಮೂರ್ತಿ’ ಎಂದೇ ಪ್ರಸಿದ್ಧವಾಗಿರುವ ದೇವಾಲಯವನ್ನು ಕಾವೇರಿ ನದಿ ದಂಡೆಯಲ್ಲಿ ಸುಮಾರು 600 ವರ್ಷಗಳ ಹಿಂದೆ ಚೋಳರ ಕಾಲದಲ್ಲಿ ನಿರ್ಮಿಸಲಾಗಿದೆ. ಈ ರಾಜಗೋಪುರದ ಮೇಲಿನ ವಿಗ್ರಹದ ತಲೆಯ ಭಾಗ ಮುರಿದು ಬಿದ್ದಿದೆ.</p>.<p>ದೇವಾಲಯದ ಕೆಲ ಭಾಗಗಳು ಶಿಥಿಲಗೊಂಡಿದ್ದು, ಮಳೆಗಾಲದಲ್ಲಿ ಸೋರುತ್ತಿದೆ. ವಿಶಿಷ್ಟ ವಾಸ್ತುಶಿಲ್ಪದ ದೇವಾಲಯವನ್ನು ಜೀರ್ಣೋದ್ಧಾರ ಮಾಡಬೇಕೆಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿತ್ತು.</p>.<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಎ.ಟಿ.ರಾಮಸ್ವಾಮಿ, ‘ದೇವಾಲಯವು ಶಿಥಿಲವಾಗುತ್ತಿರುವುದನ್ನು ಮನಗಂಡು ಜೀರ್ಣೋದ್ಧಾರಕ್ಕಾಗಿ ಈ ಮೊದಲೇ ಪ್ರಾಚ್ಯವಸ್ತು ಇಲಾಖೆಯ ಅನುಮತಿ ಪಡೆದು ₹ 4 ಕೋಟಿ ಮಂಜೂರು ಮಾಡಿಸಿದ್ದೆ. ಕೋವಿಡ್ ಹಿನ್ನೆಲೆಯಲ್ಲಿ ಕಾಮಗಾರಿ ತಡವಾಗಿದೆ’ ಎಂದರು.</p>.<p><strong>ತಗ್ಗಿದ ಮಳೆಯ ಅಬ್ಬರ:</strong> ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಅಬ್ಬರಿಸಿದ್ದ ಮಳೆ ಭಾನುವಾರ ತಗ್ಗಿತ್ತು. ಕೆಲವೆಡೆ ಸಾಧಾರಣ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಯಲ್ಲೂ ನೀರಿನಮಟ್ಟ ಇಳಿಕೆಯಾಗಿದೆ. ಶನಿವಾರ ಸಂಜೆಯಿಂದಲೇ ಕಾನೂರು – ಹರಿಹರ ಮಾರ್ಗದ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು (ಹಾಸನ): </strong>ರಾಮನಾಥಪುರದಲ್ಲಿರುವ ಪುರಾತನ ರಾಮೇಶ್ವರಸ್ವಾಮಿ ದೇವಾಲಯದ ರಾಜಗೋಪುರದಲ್ಲಿನ ಕೆಲಭಾಗ ಮಳೆಯಿಂದಾಗಿ ಭಾನುವಾರ ಕುಸಿದಿದೆ.</p>.<p>‘ಚತುರ್ಯುಗಮೂರ್ತಿ’ ಎಂದೇ ಪ್ರಸಿದ್ಧವಾಗಿರುವ ದೇವಾಲಯವನ್ನು ಕಾವೇರಿ ನದಿ ದಂಡೆಯಲ್ಲಿ ಸುಮಾರು 600 ವರ್ಷಗಳ ಹಿಂದೆ ಚೋಳರ ಕಾಲದಲ್ಲಿ ನಿರ್ಮಿಸಲಾಗಿದೆ. ಈ ರಾಜಗೋಪುರದ ಮೇಲಿನ ವಿಗ್ರಹದ ತಲೆಯ ಭಾಗ ಮುರಿದು ಬಿದ್ದಿದೆ.</p>.<p>ದೇವಾಲಯದ ಕೆಲ ಭಾಗಗಳು ಶಿಥಿಲಗೊಂಡಿದ್ದು, ಮಳೆಗಾಲದಲ್ಲಿ ಸೋರುತ್ತಿದೆ. ವಿಶಿಷ್ಟ ವಾಸ್ತುಶಿಲ್ಪದ ದೇವಾಲಯವನ್ನು ಜೀರ್ಣೋದ್ಧಾರ ಮಾಡಬೇಕೆಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿತ್ತು.</p>.<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಎ.ಟಿ.ರಾಮಸ್ವಾಮಿ, ‘ದೇವಾಲಯವು ಶಿಥಿಲವಾಗುತ್ತಿರುವುದನ್ನು ಮನಗಂಡು ಜೀರ್ಣೋದ್ಧಾರಕ್ಕಾಗಿ ಈ ಮೊದಲೇ ಪ್ರಾಚ್ಯವಸ್ತು ಇಲಾಖೆಯ ಅನುಮತಿ ಪಡೆದು ₹ 4 ಕೋಟಿ ಮಂಜೂರು ಮಾಡಿಸಿದ್ದೆ. ಕೋವಿಡ್ ಹಿನ್ನೆಲೆಯಲ್ಲಿ ಕಾಮಗಾರಿ ತಡವಾಗಿದೆ’ ಎಂದರು.</p>.<p><strong>ತಗ್ಗಿದ ಮಳೆಯ ಅಬ್ಬರ:</strong> ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಅಬ್ಬರಿಸಿದ್ದ ಮಳೆ ಭಾನುವಾರ ತಗ್ಗಿತ್ತು. ಕೆಲವೆಡೆ ಸಾಧಾರಣ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಯಲ್ಲೂ ನೀರಿನಮಟ್ಟ ಇಳಿಕೆಯಾಗಿದೆ. ಶನಿವಾರ ಸಂಜೆಯಿಂದಲೇ ಕಾನೂರು – ಹರಿಹರ ಮಾರ್ಗದ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>