‘ಆರಂಭದಲ್ಲಿ ರಾಮರಸ ಕುಡಿದವರಿಗೆ ಯಾವುದೇ ತೊಂದರೆ ಆಗಿಲ್ಲ. ಕೊನೆಯಲ್ಲಿ ಕುಡಿದವರಿಗೆ ಹೊಟ್ಟೆ ನೋವು, ಸುಸ್ತು ಕಾಣಿಸಿಕೊಂಡಿದೆ, ಕೆಲವರಿಗೆ ವಾಂತಿಯಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಮರಸವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸ ಡಾ.ಶಂಕರ್ ತಿಳಿಸಿದರು.