ರೈಲ್ವೆ ಮೇಲ್ಸೇತುವೆ, ಹಾಸನ-ದುದ್ದ ರಸ್ತೆಗೆ ಅನುದಾನ, ಮೆಡಿಕಲ್ ಕಾಲೇಜು ಸ್ಥಾಪನೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಕಲ್ಪಿಸಿರುವುದು ಜೆಡಿಎಸ್ ಎಂಬುದನ್ನ ಮರೆಯಬಾರದು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಗೆ ಏನೇನು ಅನ್ಯಾಯ ಆಗಿದೆ ಎಂಬುದನ್ನು ಸಮಯ ಬಂದಾಗ ಬಿಚ್ಚಿಡುತ್ತೇನೆ ಎಂದು ಹೇಳಿದರು.