ಕಳೆದ ವಾರ ತಾಲ್ಲೂಕಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಹೋಗಿದ್ದ ಬಾಲಕಿಗೆ ಗೊಂಬೆ ಕೊಡಿಸುವುದಾಗಿ ಆಸೆ ತೋರಿಸಿದ್ದ ಆರೋಪಿ, ಆಕೆಯನ್ನು ಕೆರೆಯಂಗಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಕೆರೆಗೆ ಎಸೆದು ಪರಾರಿಯಾಗಿದ್ದ. ಕಳೆದ ಸೋಮವಾರ ಬಾಲಕಿಯ ಶವ ಕೆರೆಯಲ್ಲಿ ಪತ್ತೆಯಾಗಿತ್ತು.