<p><strong>ಚನ್ನರಾಯಪಟ್ಟಣ:</strong> ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮಡಬ ಕೊಪ್ಪಲು ಗ್ರಾಮದ ಸುರೇಶ (22) ಬಂಧಿತ ಆರೋಪಿ. ಈತನ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ಬಿ.ಬಿ. ಲಕ್ಷ್ಮೇಗೌಡ ತಿಳಿಸಿದರು.</p>.<p>ಕಳೆದ ವಾರ ತಾಲ್ಲೂಕಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಹೋಗಿದ್ದ ಬಾಲಕಿಗೆ ಗೊಂಬೆ ಕೊಡಿಸುವುದಾಗಿ ಆಸೆ ತೋರಿಸಿದ್ದ ಆರೋಪಿ, ಆಕೆಯನ್ನು ಕೆರೆಯಂಗಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಕೆರೆಗೆ ಎಸೆದು ಪರಾರಿಯಾಗಿದ್ದ. ಕಳೆದ ಸೋಮವಾರ ಬಾಲಕಿಯ ಶವ ಕೆರೆಯಲ್ಲಿ ಪತ್ತೆಯಾಗಿತ್ತು.</p>.<p>ದೇವಸ್ಥಾನದ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಬಾಲಕಿಯನ್ನು ಯುವಕನೋರ್ವ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು. ಆರೋಪಿಯ ಪತ್ತೆಗಾಗಿ ಸಬ್ ಇನ್ಸ್ಪೆಕ್ಟರ್ಗಳಾದ ಎಲ್.ಎನ್. ಕಿರಣ್ ಕುಮಾರ್, ಭವಿತಾ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮಡಬ ಕೊಪ್ಪಲು ಗ್ರಾಮದ ಸುರೇಶ (22) ಬಂಧಿತ ಆರೋಪಿ. ಈತನ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ಬಿ.ಬಿ. ಲಕ್ಷ್ಮೇಗೌಡ ತಿಳಿಸಿದರು.</p>.<p>ಕಳೆದ ವಾರ ತಾಲ್ಲೂಕಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಹೋಗಿದ್ದ ಬಾಲಕಿಗೆ ಗೊಂಬೆ ಕೊಡಿಸುವುದಾಗಿ ಆಸೆ ತೋರಿಸಿದ್ದ ಆರೋಪಿ, ಆಕೆಯನ್ನು ಕೆರೆಯಂಗಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಕೆರೆಗೆ ಎಸೆದು ಪರಾರಿಯಾಗಿದ್ದ. ಕಳೆದ ಸೋಮವಾರ ಬಾಲಕಿಯ ಶವ ಕೆರೆಯಲ್ಲಿ ಪತ್ತೆಯಾಗಿತ್ತು.</p>.<p>ದೇವಸ್ಥಾನದ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಬಾಲಕಿಯನ್ನು ಯುವಕನೋರ್ವ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು. ಆರೋಪಿಯ ಪತ್ತೆಗಾಗಿ ಸಬ್ ಇನ್ಸ್ಪೆಕ್ಟರ್ಗಳಾದ ಎಲ್.ಎನ್. ಕಿರಣ್ ಕುಮಾರ್, ಭವಿತಾ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>