<p><strong>ಹಾಸನ</strong>: ‘ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಮತದಾರರ ನೋಂದಣಿಯ ಅವಧಿಯನ್ನು 15 ದಿನ ವಿಸ್ತರಿಸಬೇಕು’ ಎಂದು ಶಾಸಕ ಎಚ್.ಡಿ.ರೇವಣ್ಣ ಆಗ್ರಹಿಸಿದರು.</p>.<p>‘10ಕ್ಕೂ ಹೆಚ್ಚು ದಿನ ಸರ್ಕಾರಿ ರಜೆ ಇದ್ದ ಕಾರಣ ಜಿಲ್ಲೆಯಲ್ಲಿ ಶೇ 50ರಷ್ಟು ನೋಂದಣಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು. ಕೆಲವರು ಅಂಕಪಟ್ಟಿ ಕಳೆದುಕೊಂಡಿದ್ದರೆ, ಮತ್ತೆ ಕೆಲವರು ಪದವಿ ಪ್ರಮಾಣಪತ್ರ ಪಡೆದುಕೊಂಡಿಲ್ಲ. ಹಲವು ಸಮಸ್ಯೆಗಳಿಂದ ನೋಂದಣಿ ಸಾಧ್ಯವಾಗಿಲ್ಲ. ಹಾಗಾಗಿ ಅವಧಿ ವಿಸ್ತರಣೆ ಮಾಡಬೇಕು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶಿವಮೊಗ್ಗ ಮಾದರಿಯಲ್ಲಿ ಹಾಸನ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು. ಕೇವಲ ನಾಮಕಾವಸ್ತೆಗೆ ರನ್ ವೇ ಮಾಡಿ, ಜಟಕಾ ಗಾಡಿ ನಿಲ್ಲಿಸುವ ವಿಮಾನ ನಿಲ್ದಾಣ ಬೇಡ. ಈ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ. ಕಾರ್ಗೋ ವಿಮಾನಗಳ ಸಂಚಾರದಿಂದ ಕಾಫಿ, ಆಲೂಗಡ್ಡೆ ರಫ್ತು ಮಾಡಲು ಅವಕಾಶ ಇದೆ’ ಎಂದರು.</p>.<p>‘ಹಾಸನ ನಗರದ ಹೊಸ ಬಸ್ ನಿಲ್ದಾಣದ ಬಳಿಯ ಚನ್ನಪಟ್ಟಣ ಕೆರೆಯನ್ನು ₹36 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ₹144 ಕೋಟಿ ಅನುದಾನವನ್ನು ಕೆರೆ ಅಭಿವೃದ್ಧಿಗೆ ನೀಡಿದ್ದರು. ಮೂಲ ಯೋಜನೆಯಂತೆ ಅಭಿವೃದ್ಧಿ ಪಡಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಮತದಾರರ ನೋಂದಣಿಯ ಅವಧಿಯನ್ನು 15 ದಿನ ವಿಸ್ತರಿಸಬೇಕು’ ಎಂದು ಶಾಸಕ ಎಚ್.ಡಿ.ರೇವಣ್ಣ ಆಗ್ರಹಿಸಿದರು.</p>.<p>‘10ಕ್ಕೂ ಹೆಚ್ಚು ದಿನ ಸರ್ಕಾರಿ ರಜೆ ಇದ್ದ ಕಾರಣ ಜಿಲ್ಲೆಯಲ್ಲಿ ಶೇ 50ರಷ್ಟು ನೋಂದಣಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು. ಕೆಲವರು ಅಂಕಪಟ್ಟಿ ಕಳೆದುಕೊಂಡಿದ್ದರೆ, ಮತ್ತೆ ಕೆಲವರು ಪದವಿ ಪ್ರಮಾಣಪತ್ರ ಪಡೆದುಕೊಂಡಿಲ್ಲ. ಹಲವು ಸಮಸ್ಯೆಗಳಿಂದ ನೋಂದಣಿ ಸಾಧ್ಯವಾಗಿಲ್ಲ. ಹಾಗಾಗಿ ಅವಧಿ ವಿಸ್ತರಣೆ ಮಾಡಬೇಕು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಶಿವಮೊಗ್ಗ ಮಾದರಿಯಲ್ಲಿ ಹಾಸನ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು. ಕೇವಲ ನಾಮಕಾವಸ್ತೆಗೆ ರನ್ ವೇ ಮಾಡಿ, ಜಟಕಾ ಗಾಡಿ ನಿಲ್ಲಿಸುವ ವಿಮಾನ ನಿಲ್ದಾಣ ಬೇಡ. ಈ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ. ಕಾರ್ಗೋ ವಿಮಾನಗಳ ಸಂಚಾರದಿಂದ ಕಾಫಿ, ಆಲೂಗಡ್ಡೆ ರಫ್ತು ಮಾಡಲು ಅವಕಾಶ ಇದೆ’ ಎಂದರು.</p>.<p>‘ಹಾಸನ ನಗರದ ಹೊಸ ಬಸ್ ನಿಲ್ದಾಣದ ಬಳಿಯ ಚನ್ನಪಟ್ಟಣ ಕೆರೆಯನ್ನು ₹36 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ₹144 ಕೋಟಿ ಅನುದಾನವನ್ನು ಕೆರೆ ಅಭಿವೃದ್ಧಿಗೆ ನೀಡಿದ್ದರು. ಮೂಲ ಯೋಜನೆಯಂತೆ ಅಭಿವೃದ್ಧಿ ಪಡಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>