<p><strong>ಅರಸೀಕೆರೆ:</strong> ‘ದೇವಾಲಯಗಳು ಮನುಷ್ಯ ಹಾಗೂ ಆ ಗ್ರಾಮದ ಇತಿಹಾಸದ ಪ್ರತೀಕವಾದ ದೇವಾಲಯಗಳಲ್ಲಿ ಪೂರ್ವಜರು ಆರಂಭಿಸಿರುವ ದೇವತಾರಾಧನೆ ಪರಂಪರೆ ಮುಂದುವರಿಯಬೇಕು’ ಎಂದು ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಶ್ಯಾನೆಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡನಗಿರಿ ಗ್ರಾಮದ ಆಂಜನೇಯ ಸ್ವಾಮಿಯ ಅಷ್ಟಬಂಧ ಜೀರ್ಣೋದ್ಧಾರ, ಶಿಖರ ಕಳಶಾರೋಹಣ ಹಾಗೂ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗಗಳಲ್ಲಿ ದೇವಸ್ಥಾನಗಳು ಅಭಿವೃದ್ಧಿಯಾಗುವುದರಿಂದ ಗ್ರಾಮಸ್ಥರು ಒಂದೆಡೆ ಸೇರಿ ಜಾತ್ರೆಗಳು ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನೂಕೂಲವಾಗುತ್ತದೆ ಎಂದರು.</p>.<p>ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೋವಿಕಾಲೊನಿ, ಕರಡಿಹಳ್ಳಿ, ಕಲ್ಲುಸಾದರಹಳ್ಳಿ, ಕಲ್ಗುಂಡಿ, ಗೋಪಾಲಪುರ, ಕುಂದೂರು, ರಂಗನಾಯ್ಕನಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶ್ಯಾನೆಗೆರೆ ಪಂಚಾಯಿತಿ ವ್ಯಾಪ್ತಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ‘ದೇವಾಲಯಗಳು ಮನುಷ್ಯ ಹಾಗೂ ಆ ಗ್ರಾಮದ ಇತಿಹಾಸದ ಪ್ರತೀಕವಾದ ದೇವಾಲಯಗಳಲ್ಲಿ ಪೂರ್ವಜರು ಆರಂಭಿಸಿರುವ ದೇವತಾರಾಧನೆ ಪರಂಪರೆ ಮುಂದುವರಿಯಬೇಕು’ ಎಂದು ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.</p>.<p>ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಶ್ಯಾನೆಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡನಗಿರಿ ಗ್ರಾಮದ ಆಂಜನೇಯ ಸ್ವಾಮಿಯ ಅಷ್ಟಬಂಧ ಜೀರ್ಣೋದ್ಧಾರ, ಶಿಖರ ಕಳಶಾರೋಹಣ ಹಾಗೂ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗಗಳಲ್ಲಿ ದೇವಸ್ಥಾನಗಳು ಅಭಿವೃದ್ಧಿಯಾಗುವುದರಿಂದ ಗ್ರಾಮಸ್ಥರು ಒಂದೆಡೆ ಸೇರಿ ಜಾತ್ರೆಗಳು ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನೂಕೂಲವಾಗುತ್ತದೆ ಎಂದರು.</p>.<p>ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೋವಿಕಾಲೊನಿ, ಕರಡಿಹಳ್ಳಿ, ಕಲ್ಲುಸಾದರಹಳ್ಳಿ, ಕಲ್ಗುಂಡಿ, ಗೋಪಾಲಪುರ, ಕುಂದೂರು, ರಂಗನಾಯ್ಕನಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶ್ಯಾನೆಗೆರೆ ಪಂಚಾಯಿತಿ ವ್ಯಾಪ್ತಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>