ಪಟ್ಟಣದಲ್ಲಿ ಸೋಮವಾರ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ಆವರಣಕ್ಕೆ ಬಂದರು. ಸ್ವಾಭಿಮಾನಿ ಸಾಮಾಜಿಕ ವೇದಿಕೆಯ ಅಧ್ಯಕ್ಷ ಎನ್.ಆರ್. ಗಿರೀಶ್ ಮಾತನಾಡಿ, ಕೆರೆಗೋಡು ಗ್ರಾಮದಲ್ಲಿ ರಾಜಕೀಯ ದುರುದ್ದೇಶದಿಂದ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂಥ ಘಟನೆ ಮರುಕಳಿಸುತ್ತಿವೆ. ಏಕಪಕ್ಷೀಯವಾಗಿ ನಡೆದುಕೊಳ್ಳುವುದನ್ನು ಸಹಿಸುವುದಿಲ್ಲ. ಅದೇ ರೀತಿ ಭಾನುವಾರ ಚಿತ್ರದುರ್ಗದಲ್ಲಿ ಏರ್ಪಡಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕುರಿತು ಏಕವಚನ ಬಳಕೆ ಮಾಡಿದ್ದು ಸರಿಯಲ್ಲ ಎಂದು ದೂರಿದರು.