<p><strong>ಹಾಸನ: </strong>ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರೀ ಮಳೆಯಿಂದ ಅಪಾರ ಆಸ್ತಿ–ಪಾಸ್ತಿ ನಷ್ಟ ಉಂಟಾಗಿದೆ. ನಷ್ಟದ ಅಂದಾಜು ಪಟ್ಟಿ ಸಿದ್ಧಪಡಿಸುತ್ತಿದ್ದು, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ಕೆರೆ, ಸೇತುವೆ, ಶಾಲೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಹಾನಿ ಆಗಿದೆ. ತಾಲ್ಲೂಕುಗಳಿಂದ ವರದಿ ಸಲ್ಲಿಸಲಾಗಿದೆ. 80.54ಕಿ.ಮೀ ರಾಜ್ಯ ಹೆದ್ದಾರಿ, 143.3 ಕಿ.ಮೀ ಗ್ರಾಮೀಣ ರಸ್ತೆಗಳು, 436 ವಿದ್ಯುತ್ಕಂಬಗಳು ನೆಲಕ್ಕೆ ಉರುಳಿದ್ದು, ಒಂದು ಟ್ರಾನ್ಸಫಾರ್ಮರ್ ಹಾನಿಯಾಗಿದೆ. ದುರಸ್ತಿ<br />ಕಾರ್ಯ ಪ್ರಗತಿಯಲ್ಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>184 ಮನೆಗಳು ಭಾಗಶಃ, 22 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ. 151ಮನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ಹಾನಿಯಾದಮನೆಗೆ ₹ 5 ಲಕ್ಷ ನೀಡಲಾಗುವುದು. ಮನೆ ನಿರ್ಮಿಸಿಕೊಳ್ಳಲು ಮೊದಲ ಕಂತಿನ ಹಣಬಿಡುಗಡೆ ಮಾಡಲಾಗಿದೆ. ಹಂತ ಹಂತವಾಗಿ ಉಳಿದ ಹಣ ನೀಡಲಾಗುವುದು ಎಂದರು.</p>.<p>ಕೋವಿಡ್ ಮೂರನೇ ಅಲೆ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲುಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗಡಿ ಭಾಗದಲ್ಲಿ ಚೆಕ್ಪೋಸ್ಟ್ ಸ್ಥಾಪನೆಸೇರಿದಂತೆ ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳನ್ನುಈಗಲೂ ಮುಂದುವರೆಸಲಾಗುವುದು ಎಂದರು.</p>.<p>ಹಿಮ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯ ಮಕ್ಕಳ ವಾರ್ಡ್ ಸಿದ್ಧಪಡಿಸಲಾಗಿದೆ. ಎಲ್ಲಾತಾಲ್ಲೂಕುಗಳಲ್ಲೂ ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗುವುದು. ಆಮ್ಲಜನಕ ಕೊರತೆಉಂಟಾಗದಂತೆ ಹೆಚ್ಚುವರಿಯಾಗಿ 400 ಆಮ್ಲಜನಕ ಸಿಲಿಂಡರ್ಗಳನ್ನುಖರೀದಿಸಲಾಗಿದೆ ಎಂದು ತಿಳಿಸಿದರು.</p>.<p>ದೇಶದಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗಿದೆ. ಜಿಲ್ಲೆಯಲ್ಲಿಯೂ ನಿತ್ಯ 100ಕ್ಕೂಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಹಾಗಾಗಿ ಆದ್ಯತೆ ಮೇರೆಗೆ ಜಿಲ್ಲೆಗೆಹೆಚ್ಚುವರಿಯಾಗಿ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದುಎಂದರು.</p>.<p>ಹೇಮಾವತಿ ಜಲಾಶಯ ಯೋಜನೆ (ಎಚ್ಆರ್ಪಿ) ಸಂತ್ರಸ್ತರ ಪುನರ್ವಸತಿಗಾಗಿಮೀಸಲಿಟ್ಟ ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿರುವಹಗರಣದ ಬಗ್ಗೆ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅಧಿಕಾರಿಗಳುಸೇರಿದಂತೆ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕಾನೂನು ಪ್ರಕಾರ ಕೈಗೊಳ್ಳಲಾಗುವುದು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಗೋಪಾಲಯ್ಯ ಹೇಳಿದರು.</p>.<p>ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ.ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರೀ ಮಳೆಯಿಂದ ಅಪಾರ ಆಸ್ತಿ–ಪಾಸ್ತಿ ನಷ್ಟ ಉಂಟಾಗಿದೆ. ನಷ್ಟದ ಅಂದಾಜು ಪಟ್ಟಿ ಸಿದ್ಧಪಡಿಸುತ್ತಿದ್ದು, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ಕೆರೆ, ಸೇತುವೆ, ಶಾಲೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಹಾನಿ ಆಗಿದೆ. ತಾಲ್ಲೂಕುಗಳಿಂದ ವರದಿ ಸಲ್ಲಿಸಲಾಗಿದೆ. 80.54ಕಿ.ಮೀ ರಾಜ್ಯ ಹೆದ್ದಾರಿ, 143.3 ಕಿ.ಮೀ ಗ್ರಾಮೀಣ ರಸ್ತೆಗಳು, 436 ವಿದ್ಯುತ್ಕಂಬಗಳು ನೆಲಕ್ಕೆ ಉರುಳಿದ್ದು, ಒಂದು ಟ್ರಾನ್ಸಫಾರ್ಮರ್ ಹಾನಿಯಾಗಿದೆ. ದುರಸ್ತಿ<br />ಕಾರ್ಯ ಪ್ರಗತಿಯಲ್ಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>184 ಮನೆಗಳು ಭಾಗಶಃ, 22 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ. 151ಮನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ಹಾನಿಯಾದಮನೆಗೆ ₹ 5 ಲಕ್ಷ ನೀಡಲಾಗುವುದು. ಮನೆ ನಿರ್ಮಿಸಿಕೊಳ್ಳಲು ಮೊದಲ ಕಂತಿನ ಹಣಬಿಡುಗಡೆ ಮಾಡಲಾಗಿದೆ. ಹಂತ ಹಂತವಾಗಿ ಉಳಿದ ಹಣ ನೀಡಲಾಗುವುದು ಎಂದರು.</p>.<p>ಕೋವಿಡ್ ಮೂರನೇ ಅಲೆ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲುಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗಡಿ ಭಾಗದಲ್ಲಿ ಚೆಕ್ಪೋಸ್ಟ್ ಸ್ಥಾಪನೆಸೇರಿದಂತೆ ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳನ್ನುಈಗಲೂ ಮುಂದುವರೆಸಲಾಗುವುದು ಎಂದರು.</p>.<p>ಹಿಮ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯ ಮಕ್ಕಳ ವಾರ್ಡ್ ಸಿದ್ಧಪಡಿಸಲಾಗಿದೆ. ಎಲ್ಲಾತಾಲ್ಲೂಕುಗಳಲ್ಲೂ ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗುವುದು. ಆಮ್ಲಜನಕ ಕೊರತೆಉಂಟಾಗದಂತೆ ಹೆಚ್ಚುವರಿಯಾಗಿ 400 ಆಮ್ಲಜನಕ ಸಿಲಿಂಡರ್ಗಳನ್ನುಖರೀದಿಸಲಾಗಿದೆ ಎಂದು ತಿಳಿಸಿದರು.</p>.<p>ದೇಶದಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗಿದೆ. ಜಿಲ್ಲೆಯಲ್ಲಿಯೂ ನಿತ್ಯ 100ಕ್ಕೂಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಹಾಗಾಗಿ ಆದ್ಯತೆ ಮೇರೆಗೆ ಜಿಲ್ಲೆಗೆಹೆಚ್ಚುವರಿಯಾಗಿ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದುಎಂದರು.</p>.<p>ಹೇಮಾವತಿ ಜಲಾಶಯ ಯೋಜನೆ (ಎಚ್ಆರ್ಪಿ) ಸಂತ್ರಸ್ತರ ಪುನರ್ವಸತಿಗಾಗಿಮೀಸಲಿಟ್ಟ ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿರುವಹಗರಣದ ಬಗ್ಗೆ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅಧಿಕಾರಿಗಳುಸೇರಿದಂತೆ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕಾನೂನು ಪ್ರಕಾರ ಕೈಗೊಳ್ಳಲಾಗುವುದು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಗೋಪಾಲಯ್ಯ ಹೇಳಿದರು.</p>.<p>ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ.ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>