<p>ಹಾಸನ: ‘ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧದೇಶದ್ರೋಹ ಪ್ರಕರಣ ದಾಖಲಿಸಿ ಕೂಡಲೇ ಸೇವೆಯಿಂದ ಅಮಾನತುಗೊಳಿಸಿಕಾನೂನು ಕ್ರಮ ಕೈಗೊಳ್ಳಬೇಕು’ ಎಂದು<br />ಆಗ್ರಹಿಸಿ ಶುಕ್ರವಾರ ವಕೀಲರು ಕಲಾಪದಿಂದ ಹೊರಗುಳಿದು ಧರಣಿ ನಡೆಸಿದರು.</p>.<p>ನಗರದ ಹೊಸ ಕೋರ್ಟ್ ಆವರಣದಿಂದ ಶುಕ್ರವಾರ ಮೆರವಣಿಗೆ ಮೂಲಕಎನ್.ಆರ್.ವೃತ್ತಕ್ಕೆ ಬಂದು ಮಾನವ ಸರಳಿ ರಚಿಸಿ, ನ್ಯಾಯಾಧೀಶರ ವಿರುದ್ಧ ಘೋಷಣೆಕೂಗಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಕಾಲ ಧರಣಿ ನಡೆಸಿದರು.</p>.<p>ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ ಮಾತನಾಡಿ,‘ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಿದ್ದಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದಾರೆ. ನ್ಯಾಯದ ಪರವಾಗಿ ತೀರ್ಪು ನೀಡುವವರೇ ಈ ರೀತಿ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿರುವುದು ಖಂಡನೀಯ. ಇವರ ವಿರುದ್ಧ ಹೈಕೋರ್ಟ್ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ವಕೀಲ ಅರೇಹಳ್ಳಿ ರಾಜು ಮಾತನಾಡಿ, ‘ಮಲ್ಲಿಕಾರ್ಜುನ ಗೌಡ ಅವರ ಮನಸ್ಥಿತಿ ಕೀಳು ಮಟ್ಟದಿಂದ ಕೂಡಿದ್ದು, ಇದು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನವಾಗಿದೆ’ ಎಂದು ದೂರಿದರು.</p>.<p>ಬಳಿಕ ಜಿಲ್ಲಾಧಿಕಾರಿ ಆರ್.ಗಿರೀಶ್ ಮೂಲಕ ರಾಜ್ಯಪಾಲರು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧರಣಿ ಅಂತ್ಯಗೊಳಿಸಿದರು.</p>.<p>ಪ್ರತಿಭಟನೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಕೆ. ಮೋಹನ್ ಕುಮಾರ್,ಖಜಾಂಚಿ ನಾಗೇಂದ್ರ ಕುಮಾರ್, ಉಪಾಧ್ಯಕ್ಷ ಎಚ್.ಆರ್. ರಂಗನಾಥ್, ಜಂಠಿಕಾರ್ಯದರ್ಶಿ ತುಳಸಿ ಶ್ರೀನಿವಾಸ್, ಮಾಜಿ<br />ಅಧ್ಯಕ್ಷ ದೇವರಾಜೇಗೌಡ, ಸದಸ್ಯರಾದರಾಜು, ಕ್ರಾಂತಿ ಪ್ರಸಾದ್, ರಾಜೇಶ್ ಇದ್ದರು.</p>.<p class="Briefhead">ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ</p>.<p class="Subhead">ಅರಕಲಗೂಡು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಕಂದಾಯ ಇಲಾಖೆ ನೌಕರರು ಶುಕ್ರವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟಿಸಿದರು.</p>.<p>ತಾಲ್ಲೂಕು ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಸಿ. ಸ್ವಾಮಿ ಮಾತನಾಡಿ, ಕೆಟ್ಟ ಮನಸ್ಥಿತಿಯುಳ್ಳ ಮಲ್ಲಿಕಾರ್ಜುನ ಗೌಡ ಹಾಗೂ ಅಲ್ಲಿನ ಸಿಬ್ಬಂದಿ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್ ಮಾತನಾಡಿ, ಈ ವಿಚಾರವಾಗಿ ಸರ್ಕಾರ ಈಗಾಗಲೇ ವಿಚಾರಣೆ ಕೈಗೊಂಡಿದೆ. ಮಾನ್ಯ ಜಿಲ್ಲಾಧಿಕಾರಿಗಳ ಮೂಲ ಸರ್ಕಾರಕ್ಕೆ ಮನವಿ ಕಳಿಸಿಕೊಡುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಶಿರೆಸ್ತೇದಾರರಾದ ನಂಜೇಗೌಡ, ಅಂಕೇಗೌಡ, ಭಾನುಪ್ರಕಾಶ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧದೇಶದ್ರೋಹ ಪ್ರಕರಣ ದಾಖಲಿಸಿ ಕೂಡಲೇ ಸೇವೆಯಿಂದ ಅಮಾನತುಗೊಳಿಸಿಕಾನೂನು ಕ್ರಮ ಕೈಗೊಳ್ಳಬೇಕು’ ಎಂದು<br />ಆಗ್ರಹಿಸಿ ಶುಕ್ರವಾರ ವಕೀಲರು ಕಲಾಪದಿಂದ ಹೊರಗುಳಿದು ಧರಣಿ ನಡೆಸಿದರು.</p>.<p>ನಗರದ ಹೊಸ ಕೋರ್ಟ್ ಆವರಣದಿಂದ ಶುಕ್ರವಾರ ಮೆರವಣಿಗೆ ಮೂಲಕಎನ್.ಆರ್.ವೃತ್ತಕ್ಕೆ ಬಂದು ಮಾನವ ಸರಳಿ ರಚಿಸಿ, ನ್ಯಾಯಾಧೀಶರ ವಿರುದ್ಧ ಘೋಷಣೆಕೂಗಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಕಾಲ ಧರಣಿ ನಡೆಸಿದರು.</p>.<p>ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ ಮಾತನಾಡಿ,‘ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಿದ್ದಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದಾರೆ. ನ್ಯಾಯದ ಪರವಾಗಿ ತೀರ್ಪು ನೀಡುವವರೇ ಈ ರೀತಿ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿರುವುದು ಖಂಡನೀಯ. ಇವರ ವಿರುದ್ಧ ಹೈಕೋರ್ಟ್ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ವಕೀಲ ಅರೇಹಳ್ಳಿ ರಾಜು ಮಾತನಾಡಿ, ‘ಮಲ್ಲಿಕಾರ್ಜುನ ಗೌಡ ಅವರ ಮನಸ್ಥಿತಿ ಕೀಳು ಮಟ್ಟದಿಂದ ಕೂಡಿದ್ದು, ಇದು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನವಾಗಿದೆ’ ಎಂದು ದೂರಿದರು.</p>.<p>ಬಳಿಕ ಜಿಲ್ಲಾಧಿಕಾರಿ ಆರ್.ಗಿರೀಶ್ ಮೂಲಕ ರಾಜ್ಯಪಾಲರು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧರಣಿ ಅಂತ್ಯಗೊಳಿಸಿದರು.</p>.<p>ಪ್ರತಿಭಟನೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಕೆ. ಮೋಹನ್ ಕುಮಾರ್,ಖಜಾಂಚಿ ನಾಗೇಂದ್ರ ಕುಮಾರ್, ಉಪಾಧ್ಯಕ್ಷ ಎಚ್.ಆರ್. ರಂಗನಾಥ್, ಜಂಠಿಕಾರ್ಯದರ್ಶಿ ತುಳಸಿ ಶ್ರೀನಿವಾಸ್, ಮಾಜಿ<br />ಅಧ್ಯಕ್ಷ ದೇವರಾಜೇಗೌಡ, ಸದಸ್ಯರಾದರಾಜು, ಕ್ರಾಂತಿ ಪ್ರಸಾದ್, ರಾಜೇಶ್ ಇದ್ದರು.</p>.<p class="Briefhead">ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ</p>.<p class="Subhead">ಅರಕಲಗೂಡು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಕಂದಾಯ ಇಲಾಖೆ ನೌಕರರು ಶುಕ್ರವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟಿಸಿದರು.</p>.<p>ತಾಲ್ಲೂಕು ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಸಿ. ಸ್ವಾಮಿ ಮಾತನಾಡಿ, ಕೆಟ್ಟ ಮನಸ್ಥಿತಿಯುಳ್ಳ ಮಲ್ಲಿಕಾರ್ಜುನ ಗೌಡ ಹಾಗೂ ಅಲ್ಲಿನ ಸಿಬ್ಬಂದಿ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್ ಮಾತನಾಡಿ, ಈ ವಿಚಾರವಾಗಿ ಸರ್ಕಾರ ಈಗಾಗಲೇ ವಿಚಾರಣೆ ಕೈಗೊಂಡಿದೆ. ಮಾನ್ಯ ಜಿಲ್ಲಾಧಿಕಾರಿಗಳ ಮೂಲ ಸರ್ಕಾರಕ್ಕೆ ಮನವಿ ಕಳಿಸಿಕೊಡುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಶಿರೆಸ್ತೇದಾರರಾದ ನಂಜೇಗೌಡ, ಅಂಕೇಗೌಡ, ಭಾನುಪ್ರಕಾಶ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>