<p><strong>ಹಾಸನ: </strong>ಸರ್ಕಾರಿ ಗೋಮಾಳವನ್ನು ಭೂಗಳ್ಳರಿಂದ ರಕ್ಷಿಸಿ ಆಶ್ರಯ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ<br />ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ದೇವರಾಯಪಟ್ಟಣ ಹಾಗೂ<br />ದೊಡ್ಡಮಂಡಿಗನಹಳ್ಳಿ ಗ್ರಾಮಸ್ಥರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ಕಸಬಾ ಹೋಬಳಿ ದೇವರಾಯಪಟ್ಟಣದ ಸರ್ವೇ ನಂ. 21ರಲ್ಲಿ 4 ಎಕರೆ 23 ಗುಂಟೆ ಪೈಕಿ 4<br />ಎಕರೆಯನ್ನು ಆಶ್ರಯ ನಿವೇಶನಕ್ಕೆ ನೀಡಲಾಗಿದೆ. ಉಳಿಕೆ 23 ಗುಂಟೆ ಸರ್ಕಾರಿ ಗೋಮಾಳವಾಗಿದೆ. ಸರ್ವೇ<br />ನಂ. 22ರಲ್ಲಿ 4 ಎಕರೆ ಗೋಮಾಳವಿದ್ದು, 10 ವರ್ಷಗಳ ಹಿಂದೆಯೇ ಅಂದಿನ ಜಿಲ್ಲಾಧಿಕಾರಿ ಗೋಮಾಳ<br />ಸಂರಕ್ಷಿಸುವಂತೆ ಆದೇಶ ನೀಡಿದ್ದರು. ಆದರೆ ಈ ವರೆಗೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು<br />ಆರೋಪಿಸಿದರು.</p>.<p>ಜಿಲ್ಲಾಧಿಕಾರಿ ಆದೇಶದಂತೆ ಉಪವಿಭಾಗಾಧಿಕಾರಿ 2011ರಲ್ಲಿ ಪರಿಶೀಲನೆ ನಡೆಸಿ, ಸರ್ಕಾರಿ ಜಮೀನನ್ನು<br />ಕರ್ನಾಟಕ ಭೂ ಕಂದಾಯ ಕಾಯ್ದೆ 1951ರ ಅನ್ವಯ ಸಾರ್ವಜನಿಕ ನಿವೇಶನ ಉದ್ದೇಶದಿಂದ ಕಾಯ್ದಿರಿಸಿದರು.<br />ಆದರೆ, ಆ ಉದ್ದೇಶಕ್ಕೆ ಭೂಮಿಯನ್ನು ಉಪಯೋಗಿಸಲು ಬರುವುದಿಲ್ಲ ಎಂದು ದೃಢಪಟ್ಟಿದೆ.</p>.<p>ಈಗಾಗಲೇ ಭೂಗಳ್ಳರು ನಕಲಿ ಹಕ್ಕು ಪತ್ರಗಳನ್ನು ಸೃಷ್ಠಿಸಿ ಅಕ್ರಮ ಖಾತೆಗಳನ್ನು ಮಾಡಿಸಿ ಸಾರ್ವಜನಿಕರಿಗೆ<br />ಮೋಸ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸರ್ಕಾರಿ ಜಾಗವನ್ನು ಸಂರಕ್ಷಿಸಬೇಕು.<br />ದೇವರಾಯಪಟ್ಟಣ ಹಾಗೂ ದೊಡ್ಡಮಂಡಿಗನಹಳ್ಳಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ ನೈಜ್ಯ<br />ಹಾಗೂ ಅರ್ಹ ಫಲಾನುಭವಿಗಳಿಗೆ ಆಶ್ರಯ ಯೋಜನೆ ಅಡಿ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ತಿರುಮಲಯ್ಯ, ಚಂದ್ರಶೇಖರ್, ಜ್ಯೋತಿ, ಸುಜಾತಾ, ಗೌರಮ್ಮ, ಇಬ್ರಾಹಿಂ,<br />ಸಹೇರಾ ಬಾನು, ಸವೀದಾ, ಶಾರದಮ್ಮ, ಸುರೇಶ್, ಚಂದ್ರಮ್ಮ, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಸರ್ಕಾರಿ ಗೋಮಾಳವನ್ನು ಭೂಗಳ್ಳರಿಂದ ರಕ್ಷಿಸಿ ಆಶ್ರಯ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ<br />ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ದೇವರಾಯಪಟ್ಟಣ ಹಾಗೂ<br />ದೊಡ್ಡಮಂಡಿಗನಹಳ್ಳಿ ಗ್ರಾಮಸ್ಥರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ಕಸಬಾ ಹೋಬಳಿ ದೇವರಾಯಪಟ್ಟಣದ ಸರ್ವೇ ನಂ. 21ರಲ್ಲಿ 4 ಎಕರೆ 23 ಗುಂಟೆ ಪೈಕಿ 4<br />ಎಕರೆಯನ್ನು ಆಶ್ರಯ ನಿವೇಶನಕ್ಕೆ ನೀಡಲಾಗಿದೆ. ಉಳಿಕೆ 23 ಗುಂಟೆ ಸರ್ಕಾರಿ ಗೋಮಾಳವಾಗಿದೆ. ಸರ್ವೇ<br />ನಂ. 22ರಲ್ಲಿ 4 ಎಕರೆ ಗೋಮಾಳವಿದ್ದು, 10 ವರ್ಷಗಳ ಹಿಂದೆಯೇ ಅಂದಿನ ಜಿಲ್ಲಾಧಿಕಾರಿ ಗೋಮಾಳ<br />ಸಂರಕ್ಷಿಸುವಂತೆ ಆದೇಶ ನೀಡಿದ್ದರು. ಆದರೆ ಈ ವರೆಗೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು<br />ಆರೋಪಿಸಿದರು.</p>.<p>ಜಿಲ್ಲಾಧಿಕಾರಿ ಆದೇಶದಂತೆ ಉಪವಿಭಾಗಾಧಿಕಾರಿ 2011ರಲ್ಲಿ ಪರಿಶೀಲನೆ ನಡೆಸಿ, ಸರ್ಕಾರಿ ಜಮೀನನ್ನು<br />ಕರ್ನಾಟಕ ಭೂ ಕಂದಾಯ ಕಾಯ್ದೆ 1951ರ ಅನ್ವಯ ಸಾರ್ವಜನಿಕ ನಿವೇಶನ ಉದ್ದೇಶದಿಂದ ಕಾಯ್ದಿರಿಸಿದರು.<br />ಆದರೆ, ಆ ಉದ್ದೇಶಕ್ಕೆ ಭೂಮಿಯನ್ನು ಉಪಯೋಗಿಸಲು ಬರುವುದಿಲ್ಲ ಎಂದು ದೃಢಪಟ್ಟಿದೆ.</p>.<p>ಈಗಾಗಲೇ ಭೂಗಳ್ಳರು ನಕಲಿ ಹಕ್ಕು ಪತ್ರಗಳನ್ನು ಸೃಷ್ಠಿಸಿ ಅಕ್ರಮ ಖಾತೆಗಳನ್ನು ಮಾಡಿಸಿ ಸಾರ್ವಜನಿಕರಿಗೆ<br />ಮೋಸ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸರ್ಕಾರಿ ಜಾಗವನ್ನು ಸಂರಕ್ಷಿಸಬೇಕು.<br />ದೇವರಾಯಪಟ್ಟಣ ಹಾಗೂ ದೊಡ್ಡಮಂಡಿಗನಹಳ್ಳಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ ನೈಜ್ಯ<br />ಹಾಗೂ ಅರ್ಹ ಫಲಾನುಭವಿಗಳಿಗೆ ಆಶ್ರಯ ಯೋಜನೆ ಅಡಿ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ತಿರುಮಲಯ್ಯ, ಚಂದ್ರಶೇಖರ್, ಜ್ಯೋತಿ, ಸುಜಾತಾ, ಗೌರಮ್ಮ, ಇಬ್ರಾಹಿಂ,<br />ಸಹೇರಾ ಬಾನು, ಸವೀದಾ, ಶಾರದಮ್ಮ, ಸುರೇಶ್, ಚಂದ್ರಮ್ಮ, ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>