<p>ಹಾಸನ: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ<br />ಕರ್ನಾಟಕ ಪ್ರದೇಶ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ<br />ನಡೆಸಲಾಯಿತು.</p>.<p>ರೈತ ಕಷ್ಟಪಟ್ಟು ಬೆಳೆ ಬೆಳೆದರೂ ಸರಿಯದ ಬೆಲೆ ಸಿಗುತ್ತಿಲ್ಲ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಎಲ್ಲಾ<br />ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ, ರೈತ ಮಾತ್ರ ಮತ್ತಷ್ಟು ನಷ್ಟಕ್ಕೆ ಒಳಗಾಗುತ್ತಿರುವುದರಿಂದ<br />ಆತ್ಮಹತ್ಯೆಗಳು ಹೆಚ್ಚು ನಡೆಯುತ್ತಿವೆ. ಸರ್ಕಾರ ಘೋಷಣೆ ಮಾಡುವ ಯಾವುದೇ ಸಬ್ಸಿಡಿಗಳು, ಯೋಜನೆಗಳು<br />ಸರಿಯಾಗಿ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ದೇಶದಲ್ಲಿ ಶೇಕಡಾ 70 ರಷ್ಟು ಕೃಷಿಕರಿದ್ದರೂ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ<br />ಮುಂದುವರೆದರೆ ಕೃಷಿ ಕ್ಷೇತ್ರ ಅವನತಿ ಹೊಂದಿ ಆಹಾರದ ಅಭಾವ ಉಂಟಾಗುವ ಸಾಧ್ಯತೆ ಇದೆ. ಈ ವ್ಯವಸ್ಥೆ<br />ಸರಿಯಾಗಬೇಕಾದರೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ಬದಲು ವೈಜ್ಞಾನಿಕ ಬೆಲೆ<br />ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಳೇಗೌಡ, ಪ್ರಾಂತ ಸಂಘಟನಾ<br />ಕಾರ್ಯದರ್ಶಿ ಕೆ.ಎನ್. ನಾರಾಯಣಸ್ವಾಮಿ, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬಿ. ಮಲ್ಲಪ್ಪ,<br />ಮುಖಂಡರಾದ ರಾಜು, ಕುಮಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ<br />ಕರ್ನಾಟಕ ಪ್ರದೇಶ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ<br />ನಡೆಸಲಾಯಿತು.</p>.<p>ರೈತ ಕಷ್ಟಪಟ್ಟು ಬೆಳೆ ಬೆಳೆದರೂ ಸರಿಯದ ಬೆಲೆ ಸಿಗುತ್ತಿಲ್ಲ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಎಲ್ಲಾ<br />ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ, ರೈತ ಮಾತ್ರ ಮತ್ತಷ್ಟು ನಷ್ಟಕ್ಕೆ ಒಳಗಾಗುತ್ತಿರುವುದರಿಂದ<br />ಆತ್ಮಹತ್ಯೆಗಳು ಹೆಚ್ಚು ನಡೆಯುತ್ತಿವೆ. ಸರ್ಕಾರ ಘೋಷಣೆ ಮಾಡುವ ಯಾವುದೇ ಸಬ್ಸಿಡಿಗಳು, ಯೋಜನೆಗಳು<br />ಸರಿಯಾಗಿ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ದೇಶದಲ್ಲಿ ಶೇಕಡಾ 70 ರಷ್ಟು ಕೃಷಿಕರಿದ್ದರೂ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ<br />ಮುಂದುವರೆದರೆ ಕೃಷಿ ಕ್ಷೇತ್ರ ಅವನತಿ ಹೊಂದಿ ಆಹಾರದ ಅಭಾವ ಉಂಟಾಗುವ ಸಾಧ್ಯತೆ ಇದೆ. ಈ ವ್ಯವಸ್ಥೆ<br />ಸರಿಯಾಗಬೇಕಾದರೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ಬದಲು ವೈಜ್ಞಾನಿಕ ಬೆಲೆ<br />ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಳೇಗೌಡ, ಪ್ರಾಂತ ಸಂಘಟನಾ<br />ಕಾರ್ಯದರ್ಶಿ ಕೆ.ಎನ್. ನಾರಾಯಣಸ್ವಾಮಿ, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬಿ. ಮಲ್ಲಪ್ಪ,<br />ಮುಖಂಡರಾದ ರಾಜು, ಕುಮಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>