‘ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಏನು ಮಾಡಿದ್ರು’ ಎಂಬ ಶಾಸಕಪ್ರೀತಂ ಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಹಾಸನ-ಬೆಂಗಳೂರು ನಾಲ್ಕು ಪಥದ ರಸ್ತೆ,ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಪಶು ವೈದ್ಯಕೀಯ ಕಾಲೇಜು,ಹೊಸ ಬಸ್ ನಿಲ್ದಾಣ ರೈಲ್ವೆ ಮೇಲ್ಸೇತುವೆ ಮಾಡಿದ್ದಾರೆ. ಬೆಂಗಳೂರು-ಮಂಗಳೂರು ರೈಲುಸಂಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೊಡುಗೆ ಇದೆ ಎಂದು ಹೇಳಿದರು.