<p><strong>ಹಾಸನ: </strong>ದೊಡ್ಡ ದೊಡ್ಡ ಕಟ್ಟಡ ಕಟ್ಟುವುದಷ್ಟೇ ಅಭಿವೃದ್ಧಿ ಅಲ್ಲ. ಮೊದಲು ಜನರ ಜೀವನ ಮಟ್ಟ ಸುಧಾರಣೆಗೆ ಅಗತ್ಯವಿರುವ ರಸ್ತೆ, ಒಳಚರಂಡಿ, ಉದ್ಯಾನ ಮತ್ತಿತರ ಸಣ್ಣಪುಟ್ಟಕಾಮಗಾರಿಗಳನ್ನು ಮಾಡಬೇಕು ಎಂದು ಶಾಸಕ ಪ್ರೀತಂಗೌಡ ಪರೋಕ್ಷವಾಗಿ ಜೆಡಿಎಸ್ನಾಯಕರಿಗೆ ತಿರುಗೇಟು ನೀಡಿದರು.</p>.<p>ನಗರದ ಎಂ.ಜಿ ರಸ್ತೆ ಬಳಿ ವಿದ್ಯಾನಗರ ಬಡಾವಣೆಯಲ್ಲಿ ಬುಧವಾರ ₹7.86 ಕೋಟಿವೆಚ್ಚದಲ್ಲಿ ಸ್ವಾತಂತ್ರ್ಯ ಉದ್ಯಾನ ಅಭಿವೃದ್ಧಿ, ಒಳಚರಂಡಿ, ಗ್ರಂಥಾಲಯ ಮತ್ತುಯೋಗಾಲಯ ನಿರ್ಮಾಣ ಮತ್ತಿತರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿಮಾತನಾಡಿದರು.</p>.<p>ರಾಜ್ಯದ 223 ವಿಧಾನಸಭಾ ಶಾಸಕರು ಹಾಸನದತ್ತ ತಿರುಗಿ ನೋಡುವಂತೆ ಕ್ಷೇತ್ರದಅಭಿವೃದ್ಧಿಗೆ ಈಗಾಗಲೇ ರೂಪುರೇಷೆ ಸಿದ್ಧಗೊಂಡಿದ್ದು, ಮಾದರಿ ಕ್ಷೇತ್ರವನ್ನಾಗಿಸಲುಪಣ ತೊಟ್ಟಿದ್ದೇನೆ ಎಂದು ಹೇಳಿದರು.</p>.<p>ಈ ಹಿಂದೆ ₹144 ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ಕೆರೆ ಅಭಿವೃದ್ಧಿಪಡಿಸಲಾಗುವುದುಎಂಬುದು ಕೇವಲ ಪೇಪರ್ನಲ್ಲಿ ಮಾತ್ರ ಇತ್ತು. ಆದರೆ ಯಾವುದೇ ಯೋಜನೆರೂಪುಗೊಂಡಿರಲಿಲ್ಲ. ಯಡಿಯೂರಪ್ಪ ಅವರು ಹಾಸನ ನಗರದ 9 ಪಾರ್ಕ್ ಮತ್ತು 6ಕೆರೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿದ್ದರು ಎಂದು ಮಾಹಿತಿ ನೀಡಿದರು.</p>.<p>ಮೊದಲು ಎಂ.ಜಿ. ರಸ್ತೆ ಬದಿ ಎಲ್ಲೆಂದರಲ್ಲಿ ಕಸ ಹಾಕಲಾಗುತಿತ್ತು. ಇದನ್ನು ತಡೆಯುವನಿಟ್ಟಿನಲ್ಲಿ ನಗರದ ಎಂ.ಜಿ ರಸ್ತೆಯಲ್ಲಿ ಫುಡ್ಕೋರ್ಟ್ ನಿರ್ಮಿಸಲಾಗಿದೆ. ಇದರಿಂದನಗರದ ಸ್ವಚ್ಛತೆ ಕಾಪಾಡುವುದರೊಂದಿಗೆ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಹಾಸನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಜನರಕೆಲಸವನ್ನು ಮಾಡಿಸುತ್ತಿದ್ದೇನೆ. ಹಾಗಾಗಿ ಕಾಮಗಾರಿಯ ಗುಣಮಟ್ಟವನ್ನುನೋಡಿಕೊಳ್ಳುವುದು ನಾಗರಿಕರ ಜವಾಬ್ದಾರಿ ಎಂದರು.</p>.<p>ಹಸಿರು ಭೂಮಿ ಪ್ರತಿಷ್ಠಾನದ ಪದಾಧಿಕಾರಿಗಳಾದ ಪುಟ್ಟರಾಜು, ಸುಬ್ಬುಸ್ವಾಮಿ,ಪುಟ್ಟೇಗೌಡ, ಕಿಶೋರ್ ಕುಮಾರ್, ಪುಟ್ಟಯ್ಯ, ಆರ್.ಪಿ. ವೆಂಕಟೇಶಮೂರ್ತಿ, ಪ್ರದೀಪ್,ನಿವೃತ್ತ ಅಧಿಕಾರಿ ಚಂದ್ರಯ್ಯ, ಡಾ. ಭಾರತಿ ರಾಜಶೇಖರ್, ನಮ್ಮೂರ ಸೇವೆ ರಾಜೇಗೌಡಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ದೊಡ್ಡ ದೊಡ್ಡ ಕಟ್ಟಡ ಕಟ್ಟುವುದಷ್ಟೇ ಅಭಿವೃದ್ಧಿ ಅಲ್ಲ. ಮೊದಲು ಜನರ ಜೀವನ ಮಟ್ಟ ಸುಧಾರಣೆಗೆ ಅಗತ್ಯವಿರುವ ರಸ್ತೆ, ಒಳಚರಂಡಿ, ಉದ್ಯಾನ ಮತ್ತಿತರ ಸಣ್ಣಪುಟ್ಟಕಾಮಗಾರಿಗಳನ್ನು ಮಾಡಬೇಕು ಎಂದು ಶಾಸಕ ಪ್ರೀತಂಗೌಡ ಪರೋಕ್ಷವಾಗಿ ಜೆಡಿಎಸ್ನಾಯಕರಿಗೆ ತಿರುಗೇಟು ನೀಡಿದರು.</p>.<p>ನಗರದ ಎಂ.ಜಿ ರಸ್ತೆ ಬಳಿ ವಿದ್ಯಾನಗರ ಬಡಾವಣೆಯಲ್ಲಿ ಬುಧವಾರ ₹7.86 ಕೋಟಿವೆಚ್ಚದಲ್ಲಿ ಸ್ವಾತಂತ್ರ್ಯ ಉದ್ಯಾನ ಅಭಿವೃದ್ಧಿ, ಒಳಚರಂಡಿ, ಗ್ರಂಥಾಲಯ ಮತ್ತುಯೋಗಾಲಯ ನಿರ್ಮಾಣ ಮತ್ತಿತರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿಮಾತನಾಡಿದರು.</p>.<p>ರಾಜ್ಯದ 223 ವಿಧಾನಸಭಾ ಶಾಸಕರು ಹಾಸನದತ್ತ ತಿರುಗಿ ನೋಡುವಂತೆ ಕ್ಷೇತ್ರದಅಭಿವೃದ್ಧಿಗೆ ಈಗಾಗಲೇ ರೂಪುರೇಷೆ ಸಿದ್ಧಗೊಂಡಿದ್ದು, ಮಾದರಿ ಕ್ಷೇತ್ರವನ್ನಾಗಿಸಲುಪಣ ತೊಟ್ಟಿದ್ದೇನೆ ಎಂದು ಹೇಳಿದರು.</p>.<p>ಈ ಹಿಂದೆ ₹144 ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ಕೆರೆ ಅಭಿವೃದ್ಧಿಪಡಿಸಲಾಗುವುದುಎಂಬುದು ಕೇವಲ ಪೇಪರ್ನಲ್ಲಿ ಮಾತ್ರ ಇತ್ತು. ಆದರೆ ಯಾವುದೇ ಯೋಜನೆರೂಪುಗೊಂಡಿರಲಿಲ್ಲ. ಯಡಿಯೂರಪ್ಪ ಅವರು ಹಾಸನ ನಗರದ 9 ಪಾರ್ಕ್ ಮತ್ತು 6ಕೆರೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿದ್ದರು ಎಂದು ಮಾಹಿತಿ ನೀಡಿದರು.</p>.<p>ಮೊದಲು ಎಂ.ಜಿ. ರಸ್ತೆ ಬದಿ ಎಲ್ಲೆಂದರಲ್ಲಿ ಕಸ ಹಾಕಲಾಗುತಿತ್ತು. ಇದನ್ನು ತಡೆಯುವನಿಟ್ಟಿನಲ್ಲಿ ನಗರದ ಎಂ.ಜಿ ರಸ್ತೆಯಲ್ಲಿ ಫುಡ್ಕೋರ್ಟ್ ನಿರ್ಮಿಸಲಾಗಿದೆ. ಇದರಿಂದನಗರದ ಸ್ವಚ್ಛತೆ ಕಾಪಾಡುವುದರೊಂದಿಗೆ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಹಾಸನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಜನರಕೆಲಸವನ್ನು ಮಾಡಿಸುತ್ತಿದ್ದೇನೆ. ಹಾಗಾಗಿ ಕಾಮಗಾರಿಯ ಗುಣಮಟ್ಟವನ್ನುನೋಡಿಕೊಳ್ಳುವುದು ನಾಗರಿಕರ ಜವಾಬ್ದಾರಿ ಎಂದರು.</p>.<p>ಹಸಿರು ಭೂಮಿ ಪ್ರತಿಷ್ಠಾನದ ಪದಾಧಿಕಾರಿಗಳಾದ ಪುಟ್ಟರಾಜು, ಸುಬ್ಬುಸ್ವಾಮಿ,ಪುಟ್ಟೇಗೌಡ, ಕಿಶೋರ್ ಕುಮಾರ್, ಪುಟ್ಟಯ್ಯ, ಆರ್.ಪಿ. ವೆಂಕಟೇಶಮೂರ್ತಿ, ಪ್ರದೀಪ್,ನಿವೃತ್ತ ಅಧಿಕಾರಿ ಚಂದ್ರಯ್ಯ, ಡಾ. ಭಾರತಿ ರಾಜಶೇಖರ್, ನಮ್ಮೂರ ಸೇವೆ ರಾಜೇಗೌಡಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>