<p><strong>ಹಾಸನ:</strong> 2022 ರ ಜುಲೈ 1 ರಿಂದ 2024 ರ ಜುಲೈ 31ರ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ, ನೌಕರರಿಗೂ ಪರಿಷ್ಕೃತ 7 ನೇ ವೇತನ ಆಯೋಗದ ಆರ್ಥಿಕ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದರು.</p>.<p>ವೇದಿಕೆಯ ಸದಸ್ಯ ಗೋಪಾಲ್ ಮಾತನಾಡಿ, ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿ, ನೌಕರರಿಗೆ ಏಳನೇ ವೇತನ ಜಾರಿ ಮಾಡಿರುವುದು ಸಂತಸದ ವಿಷಯ. ಆದರೆ 2022 ರ ಜುಲೈ 1 ರಿಂದ 2024 ಜುಲೈ 31ರವರೆಗೆ (25 ತಿಂಗಳ) ಅವಧಿಯಲ್ಲಿ ನಿವೃತ್ತರಾಗಿರುವ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಶ್ರೇಣಿಗಳ ಪರಿಷ್ಕರಣೆ ಅನ್ವಯ ಮಾಡುವಂತೆ ಹಲವು ಬಾರಿ ಮನವಿ ಮಾಡಿದರು ಪ್ರಯೊಜನವಾಗಿಲ್ಲ. ಆದ್ದರಿಂದ ಇಂದು ಧರಣಿ ನಡೆಸಲಾಗುತ್ತಿದೆ ಎಂದರು.</p>.<p>ಏಳನೇ ವೇತನ ಆಯೋಗದ ಶಿಫಾರಸು ಪರಿಗಣಿಸದೇ, ಹಳೆಯ ವೇತನ ಶ್ರೇಣಿಯ ಮೇಲೆ ನಿವೃತ್ತರನ್ನು ಪರಿಗಣಿಸುತ್ತಿದ್ದು, ಸಾವಿರಾರು ಸರ್ಕಾರಿ ನೌಕರರಿಗೆ ಅನ್ಯಾಯವಾಗಿದೆ ಎಂದರು.</p>.<p>ಪ್ರಸ್ತುತ ಸೇವೆಯಲ್ಲಿರುವ ಇತರ ಅಧಿಕಾರಿ, ನೌಕರರಂತೆ ನಾವು ಕೂಡ 2022 ರ ಜುಲೈ 1 ರಿಂದಲೇ ಪಡೆಯಬೇಕಿದ್ದ ನಿವೃತ್ತಿ ವೇತನದ ವ್ಯತ್ಯಾಸ ಬಾಕಿಯನ್ನು ಕೇಳುತ್ತಿಲ್ಲ. 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿಸಿ ಆರ್ಜಿ, ಕಮುಟೇಶನ್, ರಜೆ ನಗದು ಗಳಿಕೆ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸವನ್ನು ಮಾತ್ರ ಕೇಳುತ್ತಿದ್ದೇವೆ ಎಂದರು.</p>.<p>ಸರ್ಕಾರ ಕೂಡಲೇ ಪ್ರತಿ ನಿವೃತ್ತ ನೌಕರರಿಗೆ ಆಗುತ್ತಿರುವ ಲಕ್ಷಾಂತರ ರೂಪಾಯಿ ನಷ್ಟವನ್ನು ಅರ್ಥ ಮಾಡಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಈ.ಕೃಷ್ಣೇಗೌಡ, ವೇದಿಕೆಯ ಸದಸ್ಯರಾದ ಎಸ್ .ಬೋರೇಗೌಡ, ನಾಗರಾಜ್, ಹರೀಶ್, ಕುಮಾರ್, ಪುಟ್ಟಸ್ವಾಮಿ, ಬಾಲಲೋಚನ, ಮಂಜೇಗೌಡ, ಕೃಷ್ಣ, ಪ್ರಕಾಶ್, ವೆಂಕಟರಾಮು, ಕಾಂತರಾಜು, ಅಶೋಕ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> 2022 ರ ಜುಲೈ 1 ರಿಂದ 2024 ರ ಜುಲೈ 31ರ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ, ನೌಕರರಿಗೂ ಪರಿಷ್ಕೃತ 7 ನೇ ವೇತನ ಆಯೋಗದ ಆರ್ಥಿಕ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದರು.</p>.<p>ವೇದಿಕೆಯ ಸದಸ್ಯ ಗೋಪಾಲ್ ಮಾತನಾಡಿ, ರಾಜ್ಯದ ಎಲ್ಲ ಸರ್ಕಾರಿ ಅಧಿಕಾರಿ, ನೌಕರರಿಗೆ ಏಳನೇ ವೇತನ ಜಾರಿ ಮಾಡಿರುವುದು ಸಂತಸದ ವಿಷಯ. ಆದರೆ 2022 ರ ಜುಲೈ 1 ರಿಂದ 2024 ಜುಲೈ 31ರವರೆಗೆ (25 ತಿಂಗಳ) ಅವಧಿಯಲ್ಲಿ ನಿವೃತ್ತರಾಗಿರುವ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಶ್ರೇಣಿಗಳ ಪರಿಷ್ಕರಣೆ ಅನ್ವಯ ಮಾಡುವಂತೆ ಹಲವು ಬಾರಿ ಮನವಿ ಮಾಡಿದರು ಪ್ರಯೊಜನವಾಗಿಲ್ಲ. ಆದ್ದರಿಂದ ಇಂದು ಧರಣಿ ನಡೆಸಲಾಗುತ್ತಿದೆ ಎಂದರು.</p>.<p>ಏಳನೇ ವೇತನ ಆಯೋಗದ ಶಿಫಾರಸು ಪರಿಗಣಿಸದೇ, ಹಳೆಯ ವೇತನ ಶ್ರೇಣಿಯ ಮೇಲೆ ನಿವೃತ್ತರನ್ನು ಪರಿಗಣಿಸುತ್ತಿದ್ದು, ಸಾವಿರಾರು ಸರ್ಕಾರಿ ನೌಕರರಿಗೆ ಅನ್ಯಾಯವಾಗಿದೆ ಎಂದರು.</p>.<p>ಪ್ರಸ್ತುತ ಸೇವೆಯಲ್ಲಿರುವ ಇತರ ಅಧಿಕಾರಿ, ನೌಕರರಂತೆ ನಾವು ಕೂಡ 2022 ರ ಜುಲೈ 1 ರಿಂದಲೇ ಪಡೆಯಬೇಕಿದ್ದ ನಿವೃತ್ತಿ ವೇತನದ ವ್ಯತ್ಯಾಸ ಬಾಕಿಯನ್ನು ಕೇಳುತ್ತಿಲ್ಲ. 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿಸಿ ಆರ್ಜಿ, ಕಮುಟೇಶನ್, ರಜೆ ನಗದು ಗಳಿಕೆ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸವನ್ನು ಮಾತ್ರ ಕೇಳುತ್ತಿದ್ದೇವೆ ಎಂದರು.</p>.<p>ಸರ್ಕಾರ ಕೂಡಲೇ ಪ್ರತಿ ನಿವೃತ್ತ ನೌಕರರಿಗೆ ಆಗುತ್ತಿರುವ ಲಕ್ಷಾಂತರ ರೂಪಾಯಿ ನಷ್ಟವನ್ನು ಅರ್ಥ ಮಾಡಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಈ.ಕೃಷ್ಣೇಗೌಡ, ವೇದಿಕೆಯ ಸದಸ್ಯರಾದ ಎಸ್ .ಬೋರೇಗೌಡ, ನಾಗರಾಜ್, ಹರೀಶ್, ಕುಮಾರ್, ಪುಟ್ಟಸ್ವಾಮಿ, ಬಾಲಲೋಚನ, ಮಂಜೇಗೌಡ, ಕೃಷ್ಣ, ಪ್ರಕಾಶ್, ವೆಂಕಟರಾಮು, ಕಾಂತರಾಜು, ಅಶೋಕ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>