ನಗರದ ಹೊರ ವಲಯದ ಚಿಕ್ಕಕೊಂಡಗೊಳ ನಿವಾಸಿಯಾಗಿದ್ದ ಗೋಪಾಲಕೃಷ್ಣ, ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸತ್ಯ ಮಂಗಲ ಬಡಾವಣೆಯ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳಗ್ಗೆ ಟೆರೇಸ್ ಮೇಲೆ ನೇಣಿಗೆ ಶರಣಾಗಿದ್ದಾರೆ.