ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತೀರ್ಪುಗಳ ಮರುಪರಿಶೀಲನೆಯಾಗಲಿ’

Last Updated 28 ಜನವರಿ 2022, 16:40 IST
ಅಕ್ಷರ ಗಾತ್ರ

ಹಾಸನ: ರಾಯಚೂರು ಕೋರ್ಟ್ ಆವರಣದಲ್ಲಿ ಗಣರಾಜ್ಯೋ
ತ್ಸವ ದಿನ
ದಂದು ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಗೌರವ ಸೂಚಿಸಿದ ಜಿಲ್ಲಾ ನ್ಯಾಯಾಧೀಶಮಲ್ಲಿಕಾರ್ಜುನ ಗೌಡ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕುಎಂದು ಭೀಮ್ ಆರ್ಮಿ ದಕ್ಷಿಣ ಕರ್ನಾಟಕ ವಿಭಾಗದ ಪ್ರಧಾನ ಕಾರ್ಯದರ್ಶಿ ಎಚ್.ಆರ್
ಪ್ರಸಾದ್ ಆಗ್ರಹಿಸಿದರು.

ಅಂಬೇಡ್ಕರ್ ಭಾವಚಿತ್ರ ಇದ್ದರೆ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಮಲ್ಲಿಕಾರ್ಜುನಗೌಡ ಹೇಳಿ ತೆಗೆಸಿರುವ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಈ ಮೂಲಕ ಅವರುಸಂವಿಧಾನ ಹಾಗೂ ದೇಶದ ಮಹಾ ನಾಯಕನಿಗೆ ಅವಮಾನ ಮಾಡಿದ್ದಾರೆ ಎಂದುಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ನ್ಯಾಯಾಧೀಶರು ತಮ್ಮ ವೃತ್ತಿ ಜೀವನದಲ್ಲಿ ಈ ವರೆಗೆ ನೀಡಿರುವ ತೀರ್ಪುಗಳ ಬಗ್ಗೆಅನುಮಾನವಿದ್ದು, ಎಲ್ಲವನ್ನೂ ಪುನರ್ ಪರಿಶೀಲನೆ ಮಾಡಬೇಕು. ಜತೆಗೆ ಅವರ ವಿರುದ್ಧದೇಶ ದ್ರೋಹ ಪ್ರಕರಣ ದಾಖಲಿಸಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಹಾಗೂ ರಾಜ್ಯ ಪಾಲರಿಗೆ ಮನವಿ ಮಾಡಲಾಗುವುದು ಎಂದರು.

ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಎಚ್.ಎಸ್ ಪ್ರದೀಪ್ ಮಾತನಾಡಿ, ಸಂವಿಧಾನದ ಅಡಿಯಲ್ಲಿಕೆಲಸ ಮಾಡುವ ನ್ಯಾಯಾಧೀಶರೇ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ.ಇದು ದೇಶಕ್ಕೆ, ಸಂವಿಧಾನಕ್ಕೆ ಮಾಡಿದ ಅವಮಾನ. ಇದನ್ನು ಖಂಡಿಸಿ ಜ.29ರಂದುನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಹೊರಟು, ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಪ್ರತಿಕೃತಿ ದಹನ ಮಾಡಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ ಪ್ರೀತಂ, ಮಂಜು, ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT