ಈ ಬಗ್ಗೆ ಪ್ರತಿಕ್ರಿಯಿಸಿದ ಬಾಗೂರು ಹೇಮಾವತಿ ವಿಭಾಗದ ಸಹಾಯಕ ಎಂಜಿನಿಯರ್ ವಿ.ಪುನೀತ್, ‘ಪ್ರಜಾವಾಣಿಯಲ್ಲಿ ಕಾಮಗಾರಿ ಕಳಪೆ ಬಗ್ಗೆ ವರದಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸರಿಪಡಿಸುವಂತೆ ಗುತ್ತಿಗೆದಾರರಿಗೆ ತಿಳಿಸಲಾಗಿತ್ತು. ಆದರೆ, ಲಾಕ್ಡೌನ್ ಸಮಸ್ಯೆಯಿಂದ ಸ್ವಲ್ಪ ವಿಳಂಬವಾಗಿತ್ತು. ಆದರೆ ತುರ್ತಾಗಿ ಕಾಮಗಾರಿಪೂರ್ಣಗೊಳಿಸಲಾಗುತ್ತದೆ. ಸೋಮವಾರದಿಂದ ನುಗ್ಗೇಹಳ್ಳಿ ಕೆರೆಗೆ ನೀರು ಬಿಡಲಾಗುತ್ತದೆ’ ಎಂದು ತಿಳಿಸಿದರು.