<p><strong>ನುಗ್ಗೇಹಳ್ಳಿ:</strong> ನುಗ್ಗೇಹಳ್ಳಿ ಏತನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಗಸರಕಟ್ಟೆ ಬಳಿ ನೀರು ಹರಿಯುವ ಸೇತುವೆ ಕುಸಿದ ಪರಿಣಾಮ ಪೈಪ್ ಸಂಪೂರ್ಣ ಹಾನಿಯಾಗಿರುವ ಬಗ್ಗೆ ಪ್ರಜಾವಾಣಿಯಲ್ಲಿ ಮೇ 4ರಂದು ‘ಕಾಮಗಾರಿ ಕಳಪೆ: ರೈತರ ಆಕ್ರೋಶ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟಗೊಂಡಿತ್ತು.</p>.<p>ವರದಿಯಿಂದ ಎಚ್ಚೆತ್ತ ಹೇಮಾವತಿ ಜಲಾನಯನ ವಿಭಾಗದ ಅಧಿಕಾರಿಗಳು ಈ ಕಾಮಗಾರಿ ನಡೆಸಿದ ಶ್ರೀನಿವಾಸ ಕನ್ಸ್ಟ್ರಕ್ಷನ್ ಅವರಿಗೆ ದುರಸ್ತಿ ನಡೆಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಶನಿವಾರ ಸುಮಾರು 4 ಎ3 ಪೈಪು ಹಾಗೂ ಹಿಟಾಚಿ ಯಂತ್ರದ ಮೂಲಕ ಪೈಪ್ ಅಳವಡಿಸಲಾಗುತ್ತಿದೆ. ಸುಮಾರು ₹ 5 ಲಕ್ಷ ವೆಚ್ಚವಾಗಲಿದೆ ಗುತ್ತಿಗೆದಾರರು ತಿಳಿಸಿದರು.</p>.<p>ಮೇ 25ರಂದು ನುಗ್ಗೇಹಳ್ಳಿ ಹಿರೇಕೆರೆಗೆ ನೀರು ಬಿಡುವ ಹಿನ್ನೆಲೆಯಲ್ಲಿ ಶನಿವಾರ ತುರ್ತಾಗಿ ಕಾಮಗಾರಿ ಕೈಗೊಂಡು ಪೈಪ್ ಅಳವಡಿಸಲಾಗುತ್ತಿದೆ. ನುಗ್ಗೇಹಳ್ಳಿ ಗ್ರಾಮಸ್ಥರು ಹಾಗೂ ರೈತರು ಕಾಮಗಾರಿ ಆರಂಭಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಬಾಗೂರು ಹೇಮಾವತಿ ವಿಭಾಗದ ಸಹಾಯಕ ಎಂಜಿನಿಯರ್ ವಿ.ಪುನೀತ್, ‘ಪ್ರಜಾವಾಣಿಯಲ್ಲಿ ಕಾಮಗಾರಿ ಕಳಪೆ ಬಗ್ಗೆ ವರದಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸರಿಪಡಿಸುವಂತೆ ಗುತ್ತಿಗೆದಾರರಿಗೆ ತಿಳಿಸಲಾಗಿತ್ತು. ಆದರೆ, ಲಾಕ್ಡೌನ್ ಸಮಸ್ಯೆಯಿಂದ ಸ್ವಲ್ಪ ವಿಳಂಬವಾಗಿತ್ತು. ಆದರೆ ತುರ್ತಾಗಿ ಕಾಮಗಾರಿಪೂರ್ಣಗೊಳಿಸಲಾಗುತ್ತದೆ. ಸೋಮವಾರದಿಂದ ನುಗ್ಗೇಹಳ್ಳಿ ಕೆರೆಗೆ ನೀರು ಬಿಡಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನುಗ್ಗೇಹಳ್ಳಿ:</strong> ನುಗ್ಗೇಹಳ್ಳಿ ಏತನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಗಸರಕಟ್ಟೆ ಬಳಿ ನೀರು ಹರಿಯುವ ಸೇತುವೆ ಕುಸಿದ ಪರಿಣಾಮ ಪೈಪ್ ಸಂಪೂರ್ಣ ಹಾನಿಯಾಗಿರುವ ಬಗ್ಗೆ ಪ್ರಜಾವಾಣಿಯಲ್ಲಿ ಮೇ 4ರಂದು ‘ಕಾಮಗಾರಿ ಕಳಪೆ: ರೈತರ ಆಕ್ರೋಶ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟಗೊಂಡಿತ್ತು.</p>.<p>ವರದಿಯಿಂದ ಎಚ್ಚೆತ್ತ ಹೇಮಾವತಿ ಜಲಾನಯನ ವಿಭಾಗದ ಅಧಿಕಾರಿಗಳು ಈ ಕಾಮಗಾರಿ ನಡೆಸಿದ ಶ್ರೀನಿವಾಸ ಕನ್ಸ್ಟ್ರಕ್ಷನ್ ಅವರಿಗೆ ದುರಸ್ತಿ ನಡೆಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಶನಿವಾರ ಸುಮಾರು 4 ಎ3 ಪೈಪು ಹಾಗೂ ಹಿಟಾಚಿ ಯಂತ್ರದ ಮೂಲಕ ಪೈಪ್ ಅಳವಡಿಸಲಾಗುತ್ತಿದೆ. ಸುಮಾರು ₹ 5 ಲಕ್ಷ ವೆಚ್ಚವಾಗಲಿದೆ ಗುತ್ತಿಗೆದಾರರು ತಿಳಿಸಿದರು.</p>.<p>ಮೇ 25ರಂದು ನುಗ್ಗೇಹಳ್ಳಿ ಹಿರೇಕೆರೆಗೆ ನೀರು ಬಿಡುವ ಹಿನ್ನೆಲೆಯಲ್ಲಿ ಶನಿವಾರ ತುರ್ತಾಗಿ ಕಾಮಗಾರಿ ಕೈಗೊಂಡು ಪೈಪ್ ಅಳವಡಿಸಲಾಗುತ್ತಿದೆ. ನುಗ್ಗೇಹಳ್ಳಿ ಗ್ರಾಮಸ್ಥರು ಹಾಗೂ ರೈತರು ಕಾಮಗಾರಿ ಆರಂಭಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಬಾಗೂರು ಹೇಮಾವತಿ ವಿಭಾಗದ ಸಹಾಯಕ ಎಂಜಿನಿಯರ್ ವಿ.ಪುನೀತ್, ‘ಪ್ರಜಾವಾಣಿಯಲ್ಲಿ ಕಾಮಗಾರಿ ಕಳಪೆ ಬಗ್ಗೆ ವರದಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸರಿಪಡಿಸುವಂತೆ ಗುತ್ತಿಗೆದಾರರಿಗೆ ತಿಳಿಸಲಾಗಿತ್ತು. ಆದರೆ, ಲಾಕ್ಡೌನ್ ಸಮಸ್ಯೆಯಿಂದ ಸ್ವಲ್ಪ ವಿಳಂಬವಾಗಿತ್ತು. ಆದರೆ ತುರ್ತಾಗಿ ಕಾಮಗಾರಿಪೂರ್ಣಗೊಳಿಸಲಾಗುತ್ತದೆ. ಸೋಮವಾರದಿಂದ ನುಗ್ಗೇಹಳ್ಳಿ ಕೆರೆಗೆ ನೀರು ಬಿಡಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>