<p><strong>ಸಕಲೇಶಪುರ: </strong>ತಾಲ್ಲೂಕಿನ ಗುಲಗಳಲೆ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಟ್ಯಾಂಕರ್ ಲಾರಿಯು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.</p>.<p>ಸಕಲೇಶಪುರ ಕಡೆಯಿಂದ ಹಾಸನಕ್ಕೆ ಹೋಗುತ್ತಿದ್ದ ಬಸ್ಗೆ ಹಾಸನದಿಂದ ಮಂಗಳೂರಿನತ್ತ ವೇಗವಾಗಿ ಹೋಗುತ್ತಿದ್ದ ಟ್ಯಾಂಕರ್ ರಸ್ತೆಯ ತಿರುವಿನಲ್ಲಿ ಬಸ್ನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಬಸ್ಅನ್ನು ರಸ್ತೆ ಬದಿಯ ಹೊಂಡಕ್ಕೆ ಇಳಿಸಿದ್ದಾರೆ. ಇದರಿಂದಾಗಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಕೆಲವರನ್ನು ಹಾಸನಕ್ಕೆ ಕಳುಹಿಸಲಾಗಿದೆ.</p>.<p>ಟ್ಯಾಂಕರ್ ಲಾರಿ ಕಾಫಿ ತೋಟಕ್ಕೆ ನುಗ್ಗಿದ್ದು, ಚಾಲಕ ಹಾಗೂ ಕ್ಲೀನರ್ ಸಹ ಅಪಾಯದಿಂದ ಪಾರಾಗಿದ್ದಾರೆ. ಇನ್ಸ್ಪೆಕ್ಟರ್ ಗಿರೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ: </strong>ತಾಲ್ಲೂಕಿನ ಗುಲಗಳಲೆ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಟ್ಯಾಂಕರ್ ಲಾರಿಯು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.</p>.<p>ಸಕಲೇಶಪುರ ಕಡೆಯಿಂದ ಹಾಸನಕ್ಕೆ ಹೋಗುತ್ತಿದ್ದ ಬಸ್ಗೆ ಹಾಸನದಿಂದ ಮಂಗಳೂರಿನತ್ತ ವೇಗವಾಗಿ ಹೋಗುತ್ತಿದ್ದ ಟ್ಯಾಂಕರ್ ರಸ್ತೆಯ ತಿರುವಿನಲ್ಲಿ ಬಸ್ನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಬಸ್ಅನ್ನು ರಸ್ತೆ ಬದಿಯ ಹೊಂಡಕ್ಕೆ ಇಳಿಸಿದ್ದಾರೆ. ಇದರಿಂದಾಗಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಕೆಲವರನ್ನು ಹಾಸನಕ್ಕೆ ಕಳುಹಿಸಲಾಗಿದೆ.</p>.<p>ಟ್ಯಾಂಕರ್ ಲಾರಿ ಕಾಫಿ ತೋಟಕ್ಕೆ ನುಗ್ಗಿದ್ದು, ಚಾಲಕ ಹಾಗೂ ಕ್ಲೀನರ್ ಸಹ ಅಪಾಯದಿಂದ ಪಾರಾಗಿದ್ದಾರೆ. ಇನ್ಸ್ಪೆಕ್ಟರ್ ಗಿರೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>