<p><strong>ಅರಸೀಕೆರೆ</strong>: ರಸ್ತೆ ಸಂಚಾರಗಳು ಹಾಗೂ ತಿರುವುಗಳಲ್ಲಿ ಸಾಮಾನ್ಯ ಜ್ಞಾನವಾದ ಸೂಚನ ಫಲಕಗಳನ್ನು ಅನುಸರಿಸದೇ ನಿರ್ಲಕ್ಷ್ಯ ಮನೋಭಾವನೆಗಳಿಂದ ಇಂದು ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.</p>.<p>ನಗರದ ಹೊರವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪಘಾತ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸಂಚಾರದ ನಿಯಮಗಳು ಚಿಹ್ನೆಗಳು ಹಾಗೂ ಇತರ ವಾಹನಗಳ ಚಾಲಕರು ನೀಡುವ ಸೂಚನೆಗಳನ್ನು ನಿರ್ಲಕ್ಷಿಸಿದಾಗ ಅಪಘಾತಗಳು ಸಂಭವಿಸುತ್ತದ್ದು ಅವುಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ಅತಿ ವೇಗ ಹಾಗೂ ನಿಯಮಗಳ ಉಲ್ಲಂಘನೆಯಿಂದ ವಾಹನಗಳನ್ನು ಚಲಾಯಿಸಬಾರದು’ ಎಂದು ಸಲಹೆ ನೀಡಿದರು.</p>.<p>ಸಾರಿಗೆ ಸಂಸ್ಥೆ ನಿರೀಕ್ಷಕ ಪದ್ಮನಾಭ ಮಾತನಾಡಿ, ‘ಅತಿಯಾದ ವೇಗವು ಅಪಘಾತಕ್ಕೆ ಆಹ್ವಾನ ನೀಡುತ್ತದೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುವುದು ಹಾಗೂ ಅಗತ್ಯ ದಾಖಲೆಗಳು ಇಲ್ಲದೆ ವಾಹನ ಚಾಲನೆಯೂ ಅಪರಾಧವಾಗುತ್ತದೆ. ವಾಹನ ಸವಾರರು ಕಾಳಜಿಯಿಂದ ವಾಹನ ಚಲಾಯಿಸಬೇಕು’ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಸಂಚಾರ ಸೂಚನಾ ಫಲಕಗಳ ಕುರಿತು ಪರೀಕ್ಷೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಕಂಚಿರಾಯ ಸೇರಿದಂತೆ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ರಸ್ತೆ ಸಂಚಾರಗಳು ಹಾಗೂ ತಿರುವುಗಳಲ್ಲಿ ಸಾಮಾನ್ಯ ಜ್ಞಾನವಾದ ಸೂಚನ ಫಲಕಗಳನ್ನು ಅನುಸರಿಸದೇ ನಿರ್ಲಕ್ಷ್ಯ ಮನೋಭಾವನೆಗಳಿಂದ ಇಂದು ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.</p>.<p>ನಗರದ ಹೊರವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪಘಾತ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸಂಚಾರದ ನಿಯಮಗಳು ಚಿಹ್ನೆಗಳು ಹಾಗೂ ಇತರ ವಾಹನಗಳ ಚಾಲಕರು ನೀಡುವ ಸೂಚನೆಗಳನ್ನು ನಿರ್ಲಕ್ಷಿಸಿದಾಗ ಅಪಘಾತಗಳು ಸಂಭವಿಸುತ್ತದ್ದು ಅವುಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ಅತಿ ವೇಗ ಹಾಗೂ ನಿಯಮಗಳ ಉಲ್ಲಂಘನೆಯಿಂದ ವಾಹನಗಳನ್ನು ಚಲಾಯಿಸಬಾರದು’ ಎಂದು ಸಲಹೆ ನೀಡಿದರು.</p>.<p>ಸಾರಿಗೆ ಸಂಸ್ಥೆ ನಿರೀಕ್ಷಕ ಪದ್ಮನಾಭ ಮಾತನಾಡಿ, ‘ಅತಿಯಾದ ವೇಗವು ಅಪಘಾತಕ್ಕೆ ಆಹ್ವಾನ ನೀಡುತ್ತದೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುವುದು ಹಾಗೂ ಅಗತ್ಯ ದಾಖಲೆಗಳು ಇಲ್ಲದೆ ವಾಹನ ಚಾಲನೆಯೂ ಅಪರಾಧವಾಗುತ್ತದೆ. ವಾಹನ ಸವಾರರು ಕಾಳಜಿಯಿಂದ ವಾಹನ ಚಲಾಯಿಸಬೇಕು’ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಸಂಚಾರ ಸೂಚನಾ ಫಲಕಗಳ ಕುರಿತು ಪರೀಕ್ಷೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಕಂಚಿರಾಯ ಸೇರಿದಂತೆ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>