<p><strong>ಅರಸೀಕೆರೆ:</strong> ಬಾಣಾವರ ಹೋಬಳಿಯ ಚಿಕ್ಕೂರು ಗ್ರಾಮದಿಂದ ಹಿರಿಯೂರು ಗ್ರಾಮದವರೆಗೆ ₹1 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಶುಕ್ರವಾರ ಚಾಲನೆ ನೀಡಿದರು.</p>.<p>ಚಿಕ್ಕೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಲಿಂಗೇಗೌಡ , ಕೆರೆ ಪಕ್ಕದಲ್ಲಿರುವುದರಿಂದ ಈ ರಸ್ತೆಯನ್ನು ಪದೇ ಪದೇ ಹಾಳಾಗುತ್ತಿದೆ. ಸಿ.ಸಿ.ರಸ್ತೆ ನಿರ್ಮಾಣ ಮಾಡಲುಲೋಕೋಪಯೋಗಿ ಇಲಾಖೆಯಿಂದ ಅನುದಾನ ನೀಡಿದ್ದು, ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಗುತ್ತಿಗೆದಾರರು, ಎಂಜಿನಿಯರುಗಳಿಗೆ ಸೂಚನೆ ನೀಡಿದರು.</p>.<p>ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಲು ವಸತಿ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ. ಹಲವು ಚೆಕ್ ಡ್ಯಾಮ್ಗಳನ್ನು ನಿರ್ಮಾಣ ಮಾಡಿದ್ದರಿಂದ ಅಂತರ್ಜಲ ಹೆಚ್ಚಾಗಿ, ಬೋರೆವೆಲ್ಗಳಲ್ಲಿ ನೀರು ಸಿಗುತ್ತಿದೆ ಎಂದರು.</p>.<p>ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ ದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾಬಾಯಿ ಬೆಂಡೆಕೆರೆ, ಗ್ರಾಮಪಂಚಾಯಿತಿ ಅಧ್ಯಕ್ಷೆ ಗೀತಾಕುಮಾರಿ, ಮಾಜಿ ಅಧ್ಯಕ್ಷ ಕುಬೇರ , ಸದಸ್ಯೆ ಭಾವನಾ, ಮುಖಂಡರಾದ ಪ್ರಭುದೇವ, ಶೇಖರ್, ಮಂಜಣ್ಣ, ಪರಮೇಶ್, ಗಂಗಾಧರ, ಗುರುಮೂರ್ತಿ, ರೇಣುಕಣ್ಣ, ಚಂದ್ರೇಗೌಡ, ಮಧು, ಎ.ಇ.ಇ. ಬಾಲಾಜಿ ,ಎಂ ಜಿನಿಯರ್ ಅಶ್ವಿನಿ , ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಬಾಣಾವರ ಹೋಬಳಿಯ ಚಿಕ್ಕೂರು ಗ್ರಾಮದಿಂದ ಹಿರಿಯೂರು ಗ್ರಾಮದವರೆಗೆ ₹1 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಶುಕ್ರವಾರ ಚಾಲನೆ ನೀಡಿದರು.</p>.<p>ಚಿಕ್ಕೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಲಿಂಗೇಗೌಡ , ಕೆರೆ ಪಕ್ಕದಲ್ಲಿರುವುದರಿಂದ ಈ ರಸ್ತೆಯನ್ನು ಪದೇ ಪದೇ ಹಾಳಾಗುತ್ತಿದೆ. ಸಿ.ಸಿ.ರಸ್ತೆ ನಿರ್ಮಾಣ ಮಾಡಲುಲೋಕೋಪಯೋಗಿ ಇಲಾಖೆಯಿಂದ ಅನುದಾನ ನೀಡಿದ್ದು, ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಗುತ್ತಿಗೆದಾರರು, ಎಂಜಿನಿಯರುಗಳಿಗೆ ಸೂಚನೆ ನೀಡಿದರು.</p>.<p>ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಲು ವಸತಿ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ. ಹಲವು ಚೆಕ್ ಡ್ಯಾಮ್ಗಳನ್ನು ನಿರ್ಮಾಣ ಮಾಡಿದ್ದರಿಂದ ಅಂತರ್ಜಲ ಹೆಚ್ಚಾಗಿ, ಬೋರೆವೆಲ್ಗಳಲ್ಲಿ ನೀರು ಸಿಗುತ್ತಿದೆ ಎಂದರು.</p>.<p>ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ ದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾಬಾಯಿ ಬೆಂಡೆಕೆರೆ, ಗ್ರಾಮಪಂಚಾಯಿತಿ ಅಧ್ಯಕ್ಷೆ ಗೀತಾಕುಮಾರಿ, ಮಾಜಿ ಅಧ್ಯಕ್ಷ ಕುಬೇರ , ಸದಸ್ಯೆ ಭಾವನಾ, ಮುಖಂಡರಾದ ಪ್ರಭುದೇವ, ಶೇಖರ್, ಮಂಜಣ್ಣ, ಪರಮೇಶ್, ಗಂಗಾಧರ, ಗುರುಮೂರ್ತಿ, ರೇಣುಕಣ್ಣ, ಚಂದ್ರೇಗೌಡ, ಮಧು, ಎ.ಇ.ಇ. ಬಾಲಾಜಿ ,ಎಂ ಜಿನಿಯರ್ ಅಶ್ವಿನಿ , ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>