<p><strong>ಹಾಸನ:</strong> ಐಎಂಎ ಹಗರಣದಲ್ಲಿನ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿರುವುದನ್ನು ಖಂಡಿಸಿ ಕಾರ್ಯಕರ್ತರು ಗುರುವಾರ ಸಂಜೆ ರಸ್ತೆತಡೆ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಭವನದ ಎದುರು ಕೆಪಿಸಿಸಿ ಸದಸ್ಯ ಎಚ್.ಕೆ.ಮಹೇಶ್ ನೇತೃತ್ವದಲ್ಲಿಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಕೂಗಿದರು.</p>.<p>ಜಮೀರ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿನಡೆಸಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಮುಂಜಾನೆ ನಾಲ್ಕು ಗಂಟೆಯಿಂದ ಜಮೀರ್ ಮನೆ ಹಾಗೂ ಕಚೇರಿ ಪರಿಶೀಲನೆ ನಡೆಸಲಾಗಿದೆ. ಹಳೆಯ<br />ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲೆ ಮತ್ತು ಉತ್ತರವನ್ನು ನೀಡಿದ್ದರೂ ದುರುದ್ದೇಶಪೂರ್ವಕವಾಗಿ ದಾಳಿ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಜಮೀರ್ ಬೆಳವಣಿಗೆಯನ್ನು ಸಹಿಸದೇ ಅಲ್ಪ ಸಂಖ್ಯಾತ ನಾಯಕನನ್ನು ಮುಗಿಸುವಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಜಾರಿ ನಿರ್ದೇಶನಾಲಯ ಮತ್ತು ಆದಾಯತೆರಿಗೆ ಇಲಾಖೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೈಗೊಂಬೆ ಆಗಿವೆ. ಎರಡೂಸರ್ಕಾರ ಸೇರಿ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ಮಾಡುವ ಕೆಲಸ<br />ಮಾಡಿಸುತ್ತಿವೆ ಎಂದು ದೂರಿದರು.</p>.<p>ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೂ ಇ.ಡಿ ಅಧಿಕಾರಿಗಳು ದಾಳಿನಡೆಸಿದ್ದರು. ಅವರಿಗೆ ಕೊಟ್ಟ ಎಲ್ಲ ತೊಂದರೆಗಳನ್ನು ಸಹಿಸಿಕೊಂಡರು. ಇದಕ್ಕೆಲ್ಲಾಜಮೀರ್ ಯಾವುದಕ್ಕೂ ಭಯ ಪಡುವುದಿಲ್ಲ. ಎಲ್ಲಾ ದಾಖಲಾತಿಗಳನ್ನು ತನಿಖಾ ಸಂಸ್ಥೆ ಎದುರು ಹಾಜರು ಪಡಿಸಲಿದ್ದಾರೆ ಎಂದರು.</p>.<p>ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅಶು ಆಸಿಫ್, ರಂಜಿತ್ ಗೊರೂರು,ವಿನೋದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಐಎಂಎ ಹಗರಣದಲ್ಲಿನ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿರುವುದನ್ನು ಖಂಡಿಸಿ ಕಾರ್ಯಕರ್ತರು ಗುರುವಾರ ಸಂಜೆ ರಸ್ತೆತಡೆ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ ಭವನದ ಎದುರು ಕೆಪಿಸಿಸಿ ಸದಸ್ಯ ಎಚ್.ಕೆ.ಮಹೇಶ್ ನೇತೃತ್ವದಲ್ಲಿಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಕೂಗಿದರು.</p>.<p>ಜಮೀರ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿನಡೆಸಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಮುಂಜಾನೆ ನಾಲ್ಕು ಗಂಟೆಯಿಂದ ಜಮೀರ್ ಮನೆ ಹಾಗೂ ಕಚೇರಿ ಪರಿಶೀಲನೆ ನಡೆಸಲಾಗಿದೆ. ಹಳೆಯ<br />ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲೆ ಮತ್ತು ಉತ್ತರವನ್ನು ನೀಡಿದ್ದರೂ ದುರುದ್ದೇಶಪೂರ್ವಕವಾಗಿ ದಾಳಿ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಜಮೀರ್ ಬೆಳವಣಿಗೆಯನ್ನು ಸಹಿಸದೇ ಅಲ್ಪ ಸಂಖ್ಯಾತ ನಾಯಕನನ್ನು ಮುಗಿಸುವಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಜಾರಿ ನಿರ್ದೇಶನಾಲಯ ಮತ್ತು ಆದಾಯತೆರಿಗೆ ಇಲಾಖೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೈಗೊಂಬೆ ಆಗಿವೆ. ಎರಡೂಸರ್ಕಾರ ಸೇರಿ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ಮಾಡುವ ಕೆಲಸ<br />ಮಾಡಿಸುತ್ತಿವೆ ಎಂದು ದೂರಿದರು.</p>.<p>ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೂ ಇ.ಡಿ ಅಧಿಕಾರಿಗಳು ದಾಳಿನಡೆಸಿದ್ದರು. ಅವರಿಗೆ ಕೊಟ್ಟ ಎಲ್ಲ ತೊಂದರೆಗಳನ್ನು ಸಹಿಸಿಕೊಂಡರು. ಇದಕ್ಕೆಲ್ಲಾಜಮೀರ್ ಯಾವುದಕ್ಕೂ ಭಯ ಪಡುವುದಿಲ್ಲ. ಎಲ್ಲಾ ದಾಖಲಾತಿಗಳನ್ನು ತನಿಖಾ ಸಂಸ್ಥೆ ಎದುರು ಹಾಜರು ಪಡಿಸಲಿದ್ದಾರೆ ಎಂದರು.</p>.<p>ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅಶು ಆಸಿಫ್, ರಂಜಿತ್ ಗೊರೂರು,ವಿನೋದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>