ಸುನಿಲ್ ಮತ್ತು ಆತನ ಸಹಚರರಾದ ಅರೆಕಲ್ಲು ಹೊಸಹಳ್ಳಿ ಸಂತೋಷ್, ದೊಡ್ಡ ಮಂಡಿಗನಹಳ್ಳಿಯ ಪ್ರತಾಪ್, ಸೂರಿ, ರವಿ, ಸಂತೋಷ್ ಹಾಗೂ ಆಲೂರು ತಾಲ್ಲೂಕಿನ ಸತೀಶ್ ಅ.23ರಂದು ಮೂರು ಮಂದಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕೆಲ ದಿನಗಳ ಹಿಂದೆಯೇ ಬಂಧಿಸಲಾಗಿತ್ತು.